ಸಿದ್ದರಾಮಯ್ಯ ಮುಂದಿನ ಸಿಎಂ ಘೋಷಣೆ ರಹಸ್ಯ ಬಿಚ್ಚಿಟ್ಟ ಈಶ್ವರಪ್ಪ!
ದಾವಣಗೆರೆ, ಜುಲೈ 23; "ನಾನೇ ಸಿಎಂ ಎನ್ನುತ್ತಿದ್ದ ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ನೆಗೆದು ಬೀಳಲಿಲ್ವಾ. ಆಗ ಹೇಗೆ ಗೊತ್ತಿತ್ತೋ ಈಗಲೋ ಹಾಗೆ". ಯಡಿಯೂರಪ್ಪ ಕೆಳಗಿಳಿಸೋದು ಆರು ತಿಂಗಳ ಹಿಂದೆ ಗೊತ್ತಿತ್ತು ಎಂದಿದ್ದ ಸಿದ್ದರಾಮಯ್ಯರ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಈ ರೀತಿ ಚಾಟಿ ಬೀಸಿದರು.
ಶುಕ್ರವಾರ ದಾವಣಗೆರೆಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, "ಅಭಿಮಾನಿಗಳಿಗೆ ಸಿಎಂ ಎಂದು ಕೂಗಿ ಅಂತಾ ಅವರೇ ಹೇಳ್ತಾರೆ. ಆ ಮೇಲೆ ಘೋಷಣೆ ಹಾಕಬೇಡಿ ಅಂತಾರೆ. ಸಿದ್ದರಾಮಯ್ಯ. ಬಾಯಿಗೆ ಬಂದಂತೆ ಮಾತನಾಡುತ್ತಾರೆ. ರಾಜ್ಯದಲ್ಲಿ ಅತಿ ಹೆಚ್ಚು ಆಡಳಿತ ನಡೆಸಿದ್ದು ಕಾಂಗ್ರೆಸ್. ಎಷ್ಟು ಜನರು ಮುಖ್ಯಮಂತ್ರಿಯಾದ್ರು?, ದಲಿತರನ್ನು ಸಿಎಂ ಮಾಡಿದರಾ?" ಎಂದು ಈಶ್ವರಪ್ಪ ಪ್ರಶ್ನಿಸಿದರು.
"ದಲಿತ ನಾಯಕ ಡಾ. ಪರಮೇಶ್ವರ್ರನ್ನು ಸೋಲಿಸಿದರು. ನಾನು ಮುಖ್ಯಮಂತ್ರಿ ಆಗಲು ಅಡ್ಡಿ ಎಂಬ ಕಾರಣಕ್ಕೆ. ಚಾಮುಂಡೇಶ್ವರಿ ಸನ್ನಿಧಾನಕ್ಕೆ ಬರಲಿ, ನಾನು ಬರುತ್ತೇನೆ" ಎಂದು ಸಿದ್ದರಾಮಯ್ಯರಿಗೆ ಬಹಿರಂಗ ಸವಾಲು ಹಾಕಿದರು.

"ನೀವು ದಲಿತರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿ. ಸಿದ್ದರಾಮಯ್ಯ ಬಹಿರಂಗವಾಗಿ ಹೇಳಲಿ. ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎಂಬ ಘೋಷಣೆ ಹಾಕಿಸುತ್ತಾರೆ. ಅವರ ರೀತಿ ನಾವು ಮಾಡಲಿಕ್ಕೆ ಆಗುತ್ತಾ? ಡಿ. ಕೆ. ಶಿವಕುಮಾರ್ ಸತ್ಯ ಹರಿಶ್ಚಂದ್ರರಾ?. ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿದ್ದು ಗೊತ್ತಿಲ್ವಾ?. ಯಡಿಯೂರಪ್ಪ ಭ್ರಷ್ಟಾಚಾರ ಮಾಡಿದ್ದಾರೆ ಎಂಬ ಆರೋಪ ಮಾಡಲು ಶಿವಕುಮಾರ್ಗೆ ನೈತಿಕತೆ ಇಲ್ಲ" ಎಂದರು.
"ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಯಡಿಯೂರಪ್ಪ ಹಾಗೂ ಹೈಕಮಾಂಡ್ ನಡುವೆ ಏನು ಚರ್ಚೆಯಾಗಿದೆಯೋ ಗೊತ್ತಿಲ್ಲ. ಈ ಬಗ್ಗೆ ಯಡಿಯೂರಪ್ಪ ಹಾಗೂ ಹೈಕಮಾಂಡ್ ಅವರನ್ನೇ ಕೇಳಬೇಕು" ಎಂದು ಈಶ್ವರಪ್ಪ ಸ್ಪಷ್ಟಪಡಿಸಿದರು.
"ನಾನು ಈ ಇಲಾಖೆಯಲ್ಲಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಬಿಎಸ್ವೈ ಬದಲಾವಣೆ ವಿಚಾರ ಸಂಬಂಧ ಏನೂ ಗೊತ್ತಿಲ್ಲ. ನಾನು ಮುಖ್ಯಮಂತ್ರಿ ಆಗಬೇಕೆಂದು ಯಾರು ಹೇಳಬೇಡಿ. ಈಗಲೇ ಚಿಕ್ಕಪುಟ್ಟ ಸಮಸ್ಯೆಗಳು ಬಗೆಹರಿಯುತ್ತಿವೆ. ದಯವಿಟ್ಟು ಈಶ್ವರಪ್ಪ ಸಿಎಂ ಆಗಬೇಕೆಂದು ಆಗ್ರಹಿಸಬೇಡಿ. ನನ್ನ ವೈಯಕ್ತಿಕ ಪ್ರಾರ್ಥನೆ ಎಂದು ಕೈಮುಗಿಯುತ್ತೇನೆ" ಎಂದರು.
"ಐಶ್ವರ್ಯ ರೈ ಮದುವೆಯಾಗ್ತೀರಾ ಅಂದರೆ ನೀವು ಆಗಲ್ವಾ?. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧ. ಯುವಕರಿಗೆ ಆದ್ಯತೆ ನೀಡಿದರೆ ತುಂಬಾ ಖುಷಿ. ಕೇಂದ್ರ ಸಂಪುಟ ವಿಸ್ತರಣೆಯಲ್ಲಿ ಹಿರಿಯರನ್ನು ಕೈಬಿಡಲಾಗಿದೆ. ಯುವಕರಿಗೆ ಆದ್ಯತೆ ನೀಡಿದರೆ ಒಳ್ಳೆಯದಲ್ವಾ. ರಾಜ್ಯದ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವನ್ನು ನಾವೆಲ್ಲರೂ ಶಿಸ್ತಿನಿಂದ ಸ್ವೀಕರಿಸುತ್ತೇವೆ" ಎಂದು ಹೇಳಿದರು.
-
ಬಜೆಟ್ನಲ್ಲಿ ಅನಿವಾಸಿ ಸಚಿವಾಲಯ ಘೋಷಣೆ ಇಲ್ಲ: ನಿರಾಶೆ ವ್ಯಕ್ತಪಡಿಸಿದ ಡಾ.ರೊನಾಲ್ಡ್ ಕೊಲಾಸೊ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು












Click it and Unblock the Notifications