ದಾವಣಗೆರೆ: ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಗಾಯತ್ರಿ ಸಿದ್ಧೇಶ್ವರ ತಿರುಗೇಟು
ದಾವಣಗೆರೆ: ಮಾತಾಡೋಕೆ ಬರಲ್ಲ, ಅವರು ಅಡುಗೆ ಮಾಡೋಕೆ ಲಾಯಕ್ಕು ಎಂಬ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ್ ಖಡಕ್ ತಿರುಗೇಟು ಕೊಟ್ಟಿದ್ದಾರೆ.
ದಾವಣಗೆರೆ ನಗರದ ಜಿಲ್ಲಾ ಕ್ರೀಡಾಂಗಣ, ವಿದ್ಯಾನಗರ ಉದ್ಯಾನವನ ಹಾಗೂ ನಗರದ ಹಲವು ಮುಖಂಡರ ಮನೆಗಳಿಗೆ ಖುದ್ದು ಭೇಟಿ ನೀಡಿ ಮತಯಾಚಿಸಿ ಮಾತನಾಡಿದ ಅವರು, ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಗೆ ಸರಿಯಾದ ಉತ್ತರ ಕೊಡಬೇಕು ಅಂದರೆ ಸಾರ್ವಜನಿಕರು ನನ್ನನ್ನು ಗೆಲ್ಲಿಸುವ ಮೂಲಕ ಅಡುಗೆ ಮಾಡುವುದು ಮಾತ್ರವಲ್ಲ. ಸಂಸತ್ತಿನಲ್ಲಿ ಕೂತು ಅಧಿಕಾರವನ್ನು ಮಾಡ್ತಾರೆ, ಅಭಿವೃದ್ಧಿಯನ್ನೂ ಮಾಡ್ತಾರೆ ಅನ್ನೋದನ್ನು ಸಾಬೀತುಪಡಿಸಬೇಕು. ದಾವಣಗೆರೆ ಬಿಜೆಪಿಯ ಚುನಾವಣಾ ಫಲಿತಾಂಶ ಅವರಿಗೆ ಉತ್ತರವಾಗಬೇಕು ಎಂದರು.

ನಾವು ಯಾರನ್ನೂ ಕೀಳಾಗಿ ನೋಡಬಾರದು, ಎಲ್ಲರಲ್ಲೂ ಅವರದ್ದೇ ಆದ ಶಕ್ತಿ, ಸಾಮರ್ಥ್ಯ ಇರುತ್ತದೆ. ಒನಕೆ ಒಬವ್ವ, ಕಿತ್ತೂರು ರಾಣಿ ಚನ್ನಮ್ಮ, ಝಾನ್ಸಿ ರಾಣಿ ಲಕ್ಷ್ಮಿಬಾಯಿ, ಸಾವಿತ್ರಿ ಬಾಯಿ ಫುಲೆ ಸೇರಿದಂತೆ ಅನೇಕ ಮಹಿಳೆಯರು ಇಂದಿಗೂ ಅವರ ಸಾಧನೆಯಿಂದ ಜೀವಂತವಾಗಿದ್ದಾರೆ. ಸಣ್ಣ ಮಕ್ಕಳಿಗೆ ಅವರ ಬಗ್ಗೆ ಕತೆಗಳನ್ನು ಹೇಳುತ್ತೇವೆ. ಅವರೆಲ್ಲ ಅಡುಗೆ ಮಾಡುವುದಕ್ಕೆ ಮಾತ್ರ ಲಾಯಕ್ಕಾಗಿದ್ದರೆ ಇತಿಹಾಸ ಪುಟಗಳಲ್ಲಿ ಅವರ್ಯಾರು ಇರುತ್ತಿರಲಿಲ್ಲ ಎಂದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಯುವಕ-ಯುವತಿಯರ ಜೊತೆ ಕ್ರಿಕೆಟ್ ಆಟವಾಡಿ, ಬೌಲಿಂಗ್ ಮಾಡಿದ ಗಾಯಿತ್ರಿ ಸಿದ್ದೇಶ್ವರ್ ಅವರು ಪ್ರಧಾನಿ ನರೇಂದ್ರ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ವಿವರಿಸಿದರು. ವಿದ್ಯಾನಗರದಲ್ಲಿ ವಾಯು ವಿಹಾರಿಗಳ ಜೊತೆ ವಾಕ್ ಮಾಡಿ ಸಮಾಲೋಚನೆ ನಡೆಸಿದರು.
ಮಾಜಿ ಶಾಸಕ ಟಿ.ಗುರುಸಿದ್ದನಗೌಡ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಚುನಾವಣೆ ಕಾರ್ಯತಂತ್ರದ ಬಗ್ಗೆ ಚರ್ಚಿಸಿದರು. ನಗರದ ಉದ್ಯಮಿ ರಮೇಶ್, ಮಂಜುನಾಥ ಕಾಲೇಜಿನ ಕಾರ್ಯದರ್ಶಿ ದ್ಯಾಮಣ್ಣನವರ್, ಪಾಲಿಕೆ ಸದಸ್ಯೆ ಗೀತಾ ಬಿ. ದಿಳ್ಯಪ್ಪ, ಲೋಕಿಕೆರೆ ಕೆಂಚಪ್ಪ, ಕುಮಾರ್ ಜುವೆಲರ್ಸ್ ಮಾಲೀಕರಾದ ಸಿ.ಕೆ.ಸಿದ್ದಪ್ಪ, ಶ್ಯಾಗಲೆ ಮಹಾದೇವಪ್ಪ, ಕಸಾಪ ಮಾಜಿ ಅಧ್ಯಕ್ಷರಾದ ಕುರ್ಕಿ ಮಂಜುನಾಥ್, ಮಹೇಶ್, ಡಾ.ಗಾಯಿತ್ರಿ, ಆಂಜನೇಯ ಬಡಾವಣೆ ಬೂತ್ ಅಧ್ಯಕ್ಷ ಅರುಣ್, ಛಾಯಾ ಶ್ರೀಧರ್, ವಿಜಯ್ ಕುಮಾರ್ ಸೇರಿದಂತೆ ಹತ್ತಾರು ಬೂತ್ ಅಧ್ಯಕ್ಷರು, ಕಾರ್ಯಕರ್ತರು, ಅಭಿಮಾನಿಗಳ ನಿವಾಸಕ್ಕೆ ಭೇಟಿ ನಿಡಿ ಚರ್ಚೆ ನಡೆಸಿ ಮತಯಾಚನೆ ಮಾಡಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications