ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ
ದಾವಣಗೆರೆ, ನವೆಂಬರ್ 12: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಜಗಳೂರು ಶಾಸಕ, ನಾಯಕ ಸಮುದಾಯದ ಮುಖಂಡ ಎಸ್.ವಿ.ರಾಮಚಂದ್ರಪ್ಪನವರಿಗೆ ಸಚಿವ ಸ್ಥಾನ ನೀಡಬೇಕೆಂದು ದಾವಣಗೆರೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ.ವೀರಣ್ಣ ಆಗ್ರಹಿಸಿದರು.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಯಿಂದ ಈವರೆಗೂ ನಾಯಕ ಸಮುದಾಯದವರನ್ನು ಸಚಿವರನ್ನಾಗಿ ನೇಮಿಸಿಲ್ಲ. ಈಗಲಾದರೂ ಜಗಳೂರು ಶಾಸಕ ಎಸ್.ವಿ.ರಾಮಚಂದ್ರಪ್ಪನವರನ್ನು ಸಚಿವರನ್ನಾಗಿ ನೇಮಿಸಿ, ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಿ, ವಾಲ್ಮೀಕಿ ನಾಯಕ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಬಿಜೆಪಿ ಪಕ್ಷದಿಂದ ದಾವಣಗೆರೆ ಜಿಲ್ಲೆಯಿಂದ ಆರು ಜನ ಶಾಸಕರಾಗಿ ಆಯ್ಕೆಯಾಗಿದ್ದರೂ, ಇವರ ಪೈಕಿ ಒಬ್ಬರಿಗೂ ಸಚಿವ ಸ್ಥಾನ ನೀಡದೇ ಹೊರ ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ ಜಿಲ್ಲಾ ಮಂತ್ರಿ ಯಾರ ಕೈಗೂ ಸಿಗದ ಕಾರಣಕ್ಕೆ ಜನರ ಸಮಸ್ಯೆಗಳನ್ನು ಆಲಿಸುವವರೇ ಇಲ್ಲವಾಗಿದ್ದಾರೆ ಎಂದು ದೂರಿದರು.

ಸಮಾಜದ ಮುಖಂಡ ಎನ್.ಎಂ.ಆಂಜನೇಯ ಗುರೂಜಿ ಮಾತನಾಡಿ, ಜಿಲ್ಲೆಯಲ್ಲಿ ವಾಲ್ಮೀಕಿ ನಾಯಕ ಸಮುದಾಯದವರು ಮೂರು ಲಕ್ಷ ಮತದಾರರಿದ್ದರೂ, ಈವರೆಗೂ ಒಮ್ಮೆಯೂ ಸಚಿವ ಸ್ಥಾನ ನೀಡದಿರುವುದು ನೋವಿನ ಸಂಗತಿಯಾಗಿದೆ. ಎಸ್.ವಿ.ರಾಮಚಂದ್ರ ಅವರು ಎಲ್ಲಾ ಧರ್ಮಿಯರ, ಜಾತಿ ಜನಾಂಗದವರ ಪ್ರೀತಿಪಾತ್ರರಾಗಿದ್ದು, ಇವರಿಗೆ ಮಂತ್ರಿಗಿರಿ ನೀಡಿದರೆ, ಉತ್ತಮ ಆಡಳಿತ ನೀಡಲಿದ್ದಾರೆ ಎಂದರು.
ಶಾಸಕ ರಾಮಚಂದ್ರ ಅವರನ್ನು ಸಚಿವರನ್ನಾಗಿ ಮಾಡಿಸುವತ್ತ ಸಂಸದ ಜಿ.ಎಂ.ಸಿದ್ದೇಶ್ವರ್ ಅವರು ಗಮನ ಹರಿಸಬೇಕೆಂದು ಒತ್ತಾಯಿಸಿದರು. ರಾಮಚಂದ್ರ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ, ಶೀಘ್ರದಲ್ಲಿಯೇ ವಾಲ್ಮೀಕಿ ನಾಯಕ ಸಮುದಾಯದಿಂದ ಮುಖ್ಯಮಂತ್ರಿ ಬಳಿಗೆ ನಿಯೋಗ ಕೊಂಡೊಯ್ಯಲಾಗುವುದು ಎಂದು ತಿಳಿಸಿದರು.

ಉಪ ಚುನಾವಣೆಯ ಸಂಬಂಧ ಜಾರಿಯಾಗಿದ್ದ ನೀತಿ ಸಂಹಿತೆಯು ತೆರವಾಗಿದ್ದು, ತಕ್ಷಣವೇ ರಾಜ್ಯ ಸರ್ಕಾರ ವಾಲ್ಮೀಕಿ ನಾಯಕ ಸಮುದಾಯಕ್ಕೆ ಪ್ರಸ್ತುತ ನೀಡುತ್ತಿರುವ ಶೇ.7.5ಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಐಗೂರು ಹನುಮಂತಪ್ಪ, ಚೇತನ್ ಹಾಜರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications