ಬೇಸಿಗೆಗೆ ಮುನ್ನವೇ ಹಾಹಾಕಾರ: ದಾವಣಗೆರೆ ಜಿಲ್ಲೆಯ 19 ಗ್ರಾಮಗಳಲ್ಲಿ ಅಂತರ್ಜಲ ಕುಸಿತ, ಶುರುವಾಯ್ತು ಭೀಕರ ಬರದ ಕರಾಳ ದರ್ಶನ.!
ದಾವಣಗೆರೆ, ಫೆಬ್ರವರಿ, 23: ಈ ವರ್ಷ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಆಗಸ್ಟ್ ತಿಂಗಳಲ್ಲಿ ಶೇಕಡಾ 90ರಷ್ಟು ಮಳೆ ಕೊರತೆ ಎದುರಿಸಲಾಗಿದೆ. ಇದರಿಂದ ಅಂತರ್ಜಲ ಮಟ್ಟ ಗಣನೀಯವಾಗಿ ಇಳಿಕೆಯಾಗಿದ್ದು, ಕೊಳವೆಬಾವಿ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದ 19 ಗ್ರಾಮಗಳಲ್ಲಿ ಅಂತರ್ಜಲ ಕುಸಿತದಿಂದ ಖಾಸಗಿ ಬೋರ್ವೆಲ್ ಬಾಡಿಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತೀವ್ರ ಬಿಸಿಲು ಇರುವುದರಿಂದ ಮುಂದೆ ಸಮಸ್ಯೆಯಾಗಲಿರುವ 126 ಗ್ರಾಮಗಳ ಪಟ್ಟಿಯನ್ನು ಸಿದ್ದಪಡಿಸಿಕೊಂಡಿದ್ದು, ಇಲ್ಲಿ ಖಾಸಗಿ ಕೊಳವೆಬಾವಿ ಗುರುತಿಸಿಟ್ಟುಕೊಳ್ಳಲಾಗಿದೆ. ಅವುಗಳು ಲಭ್ಯವಾಗದಲಿದ್ದಲ್ಲಿ ಸಮಸ್ಯೆಯಾದ 24 ಗಂಟೆಯೊಳಗೆ ಟ್ಯಾಂಕರ್ಗಳ ಮೂಲಕ ನೀರು ಒದಗಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಪೂರೈಕೆಯಾಗುತ್ತಿರುವ ಗ್ರಾಮಗಳಿಗೆ ನೀರಿನ ಸಮಸ್ಯೆ ಇರುವುದಿಲ್ಲ. ಭದ್ರಾ ಜಲಾಶಯದ ಮೂಲಕ ತುಂಗಭದ್ರಾ ನದಿಗೆ ಹಾಗೂ ಕಾಲುವೆಗಳಿಗೆ ನೀರು ಬಿಡಿಸಲಾಗಿದೆ. ಶಾಂತಿಸಾಗರದಿಂದ ಹಲವು ಗ್ರಾಮಗಳಿಗೆ ನೀರು ಪೂರೈಕೆಯಾಗುತ್ತಿದ್ದು, ಕಾಲುವೆ ಮೂಲಕ ಶಾಂತಿಸಾಗರಕ್ಕೆ ನೀರು ಬಿಡಿಸಲಾಗಿದೆ ಎಂದರು.
ಕಾಲುವೆಯ ಕೊನೆ ಭಾಗದ ರೈತರಿಗೂ ನೀರು ತಲುಪಿಸುವ ಉದ್ದೇಶದಿಂದ ನಾಲೆಗೆ ಅಕ್ರಮವಾಗಿ ಅಳವಡಿಸಲಾಗಿದ್ದ ಪಂಪ್ಸೆಟ್ಗಳ ತೆರವಿಗೆ ತಂಡಗಳನ್ನು ರಚಿಸಿ ಕ್ರಮ ಕೈಗೊಳ್ಳಲಾಗಿದೆ. ಎಲ್ಲೆಲ್ಲಿ ಕಾನೂನಾತ್ಮಕ ಸಮಸ್ಯೆ ಎದುರಾಗುತ್ತದೆಯೋ ಅಂತಹ ಭಾಗದಲ್ಲಿ 144 ಸೆಕ್ಷನ್ ಜಾರಿಗೊಳಿಸಲು ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ಕೊಳವೆಬಾವಿ ಕೊರೆಸಲು ಅನುಮತಿ ಬೇಕು: ಅಂತರ್ಜಲ ಮಟ್ಟ ಕಡಿಮೆಯಾಗಿದ್ದರಿಂದ ಕೊಳವೆಬಾವಿ ಕೊರೆಯಲು ನಿರ್ಬಂಧವಿದೆ. ಕೊಳವೆಬಾವಿ ಕೊರೆಯಲು ರಿಗ್ ಮಾಲಿಕರು ನಮೂನೆ-7ರಲ್ಲಿ ಅನುಮತಿ ಪಡೆಯಬೇಕಾಗಿರುತ್ತದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಮಾತನಾಡಿ, ಬೇಸಿಗೆ ಎದುರಾಗಿದ್ದು, ಈಗಾಗಲೇ 19 ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಮಸ್ಯೆಯಾಗಬಹುದಾದ 18 ಗ್ರಾಮಗಳಲ್ಲಿ ಖಾಸಗಿ ಬೋರ್ವೆಲ್ ಮೂಲಕ ನೀರು ಪೂರೈಕೆ ಮಾಡಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications