ನಾವು ಏನೆಲ್ಲಾ ಕೊಟ್ಟರೂ ಜನ ಬಿಜೆಪಿ ಗೆಲ್ಲಿಸಿದರು ಎಂದು ಬೇಸರಗೊಂಡ ಮಾಜಿ ಸಚಿವ ಆಂಜನೇಯ
ದಾವಣಗೆರೆ, ನವೆಂಬರ್ 22: "ಅನ್ನ ಉಂಡಂಥ ಜನ ನಮಗೆ ಮತ ಹಾಕಲಿಲ್ಲ, ಅನ್ನ ನೀಡದಂತಹ ಬಿಜೆಪಿಯನ್ನು ಗೆಲ್ಲಿಸಿದ್ರು" ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಮಾಜಿ ಸಚಿವ ಎಚ್. ಆಂಜನೇಯ ಬೇಸರ ವ್ಯಕ್ತಪಡಿಸಿದರು.
ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ಕಾಂಗ್ರೆಸ್ ಸರ್ಕಾರ ಇರುವಾಗ ಅನ್ನಭಾಗ್ಯ ಯೋಜನೆ ಮೂಲಕ ಬಡವರ ಹೊಟ್ಟೆ ತುಂಬಿಸಿದ್ದೆವು. ಬಡ ಮಕ್ಕಳಿಗೆ ಶಿಕ್ಷಣ, ಶೂ ಭಾಗ್ಯ, ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು ಜನರ ಏಳಿಗೆಗಾಗಿ ಶ್ರಮಿಸಿದೆವು. ಆದರೆ ಜನರು ಕಾಂಗ್ರೆಸ್ ಬಿಟ್ಟು ಬಿಜೆಪಿಯನ್ನು ಗೆಲ್ಲಿಸಿದ್ರು. ಕಾಂಗ್ರೆಸ್ ಹಲವಾರು ಯೋಜನೆಗಳನ್ನು ಜಾರಿಗೆ ತಂದರೂ ಸೋಲಿಸಿದರು" ಎಂದು ಬೇಸರದಿಂದ ಹೇಳಿದರು.
ಅಲ್ಲದೆ "ರಾಜ್ಯದಲ್ಲಿ 15 ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆ ಬೇಕಾಗಿತ್ತಾ, ಈ 15 ಜನ ಶಾಸಕರ ರಾಜೀನಾಮೆ ಹಿಂದೆ ಸ್ವಾರ್ಥ, ಅಧಿಕಾರ ದಾಹ, ಹಣದ ಆಸೆ ಇದೆ. ಪಕ್ಷಕ್ಕೆ ದ್ರೋಹ ಮಾಡಿ ರಾಜೀನಾಮೆ ನೀಡಿ ಈಗ ಚುನಾವಣೆಗೆ ನಿಂತಿದ್ದಾರೆ. ಅವರನ್ನು ಜನರು ಸೋಲಿಸಿ, ತಕ್ಕ ಪಾಠ ಕಲಿಸುತ್ತಾರೆ. ಅಲ್ಲದೆ ಸುಪ್ರೀಂ ಒಳ್ಳೆ ತೀರ್ಪು ನೀಡಿದೆ. ಇಲ್ಲವಾದರೆ ಅವರು ಸಚಿವರಾಗಿ ನಂತರ ಚುನಾವಣೆಗೆ ಹೋಗುತ್ತಿದ್ದರು. ಪ್ರಜಾಪ್ರಭುತ್ವ ಉಳಿಸಬೇಕು ಎಂದರೆ ಅನರ್ಹರನ್ನು ಅನರ್ಹರನ್ನಾಗೇ ಮಾಡಬೇಕು" ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ರನ್ನು ಬಫೂನ್ ಎಂದು ರೇಣುಕಾಚಾರ್ಯ ನಿಂದಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,"ಅವರೇ ಬಫೂನ್ ಇರಬೇಕು. ಅದಕ್ಕಾಗಿ ಹೀಗೆ ಮಾತನಾಡುತ್ತಿದ್ದಾರೆ. ಯಾರನ್ನು ಕೂಡ ಟೀಕೆ ಮಾಡಬಾರದು, ಟೀಕೆ ಮಾಡಿದರೆ ಅದು ಆರೋಗ್ಯಕರವಾಗಿರಬೇಕು" ಎಂದು ಶಾಸಕ ಎಂಪಿ ರೇಣುಕಾಚಾರ್ಯಗೆ ಬುದ್ಧಿವಾದ ಹೇಳಿದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications