ಹರಿಹರದಲ್ಲಿ ಜನವರಿ 14, 15ಕ್ಕೆ ಹರಜಾತ್ರೆ: "ಬೃಹತ್ ಮೀಸಲಾತಿ ಜನಜಾಗೃತಿ ಸಮಾವೇಶ"ಕ್ಕೆ ಸಜ್ಜು
ದಾವಣಗೆರೆ, ಡಿಸೆಂಬರ್, 21: ಹರಿಹರದ ಪಂಚಮಸಾಲಿ ಪೀಠದಲ್ಲಿ ಜನವರಿ 14 ಮತ್ತು 15ಕ್ಕೆ ಪ್ರತಿ ವರ್ಷದಂತೆ ಹರಜಾತ್ರೆ ಅದ್ಧೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ. ಅಖಂಡ ವೀರಶೈವ ಲಿಂಗಾಯತರಿಗೆ ಕೇಂದ್ರದ ಒಬಿಸಿ ಹಾಗೂ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ "ಬೃಹತ್ ಮೀಸಲಾತಿ ಜನಜಾಗೃತಿ ಸಮಾವೇಶ"ವನ್ನು ಆಯೋಜಿಸಲು ತೀರ್ಮಾನ ಮಾಡಲಾಗಿದೆ. ಇದೇ ಸಂದರ್ಭದಲ್ಲಿ ಮಾತನಾಡಿದ ವಚನಾನಂದ ಶ್ರೀಗಳು, ಪ್ರಾಣಬಿಟ್ಟೇವು, ಮೀಸಲಾತಿ ಬಿಡಲಾರೆವು. ಮೀಸಲಾತಿ ಕೊಡಿ, ಇಲ್ಲ ಮಡಿ ಎಂಬುದು ನಮ್ಮ ಧ್ಯೇಯವಾಕ್ಯವಾಗಬೇಕು ಎಂದರು.
2ಎ ಮೀಸಲಾತಿಗಾಗಿ ಪಟ್ಟು
ಹರಿಹರ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ವಚನಾನಂದ ಮಹಾಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದ್ದಿದ್ದು, ಸಭೆಯಲ್ಲಿ ಸಮಾಜದ ಮುಖಂಡರು ಪಾಲ್ಗೊಂಡಿದ್ದರು. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಲೇಬೇಕು. ಈ ವಿಚಾರವಾಗಿ ಸರ್ಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡಲಾಗಿದೆ. ಮೀಸಲಾತಿ ನೀಡುವವರೆಗೂ ವಿರಮಿಸುವುದು ಬೇಡ. ಸಮಾಜಕ್ಕೆ ನ್ಯಾಯಬದ್ಧವಾಗಿ ಸಿಗಬೇಕಿರುವ ಹಕ್ಕು ಪಡೆಯಲೇಬೇಕಿದೆ. ಆದ್ದರಿಂದ ಸರ್ಕಾರಕ್ಕೆ ಕಾಲಾವಕಾಶ ನೀಡೋಣ. ಯಾರೂ ತಾಳ್ಮೆ ಕಳೆದುಕೊಳ್ಳಬೇಡಿ. ನಮ್ಮದೇ ಆದ ರೀತಿಯಲ್ಲಿ ಹೋರಾಟ ಮಾಡಿ ಮೀಸಲಾತಿ ಪಡೆದುಕೊಳ್ಳೋಣ ಎಂದು ಸಮಾಜದ ಮುಖಂಡರು ಅಭಿಪ್ರಾಯಪಟ್ಟರು.
ಪ್ರಾಣ ಬಿಟ್ಟೇವು, ಮೀಸಲಾತಿ ಬಿಡಲಾರೆವು
ಇದಕ್ಕೆ ಪ್ರತಿಕ್ರಿಯಿಸಿದ ವಚನಾನಂದ ಶ್ರೀಗಳು, ಪ್ರಾಣಬಿಟ್ಟೇವು, ಮೀಸಲಾತಿ ಬಿಡಲಾರೆವು. ಮೀಸಲಾತಿ ಕೊಡಿ, ಇಲ್ಲ ಮಡಿ ಎಂಬುದು ನಮ್ಮ ಧ್ಯೇಯವಾಕ್ಯವಾಗಬೇಕು. ಹೆಚ್ಚು ಕೃಷಿಕರನ್ನೇ ಹೊಂದಿರುವ ಪಂಚಮಸಾಲಿ ಸಮಾಜಕ್ಕೆ ಆರ್ಥಿಕ, ಶೈಕ್ಷಣಿಕ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ಮೀಸಲಾತಿ ಸಿಗಬೇಕಾದರೆ 2ಎ ಮೀಸಲಾತಿ ಸಿಗಲೇಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚುನಾವಣೆಗೆ ಮುನ್ನವೇ ಯಾವುದೇ ಕಾನೂನು ತೊಡಕು ಎದುರಾಗದಂತೆ ನಮ್ಮ ಸಮಾಜಕ್ಕೆ ಮೀಸಲಾತಿ ದೊರಕಿಸಿಕೊಡುವ ವಿಶ್ವಾಸ ಇದೆ ಎಂದು ಹೇಳಿದರು.

ಬೃಹತ್ ಮೀಸಲಾತಿ ಜನಜಾಗೃತಿ ಸಮಾವೇಶ
ಇದೇ ಸಂಧರ್ಭದಲ್ಲಿ ಜನವರಿ 14 ಮತ್ತು 15ರ ಹರಜಾತ್ರೆ ನಿಮಿತ್ಯ ನಡೆಯುವ ಬೃಹತ್ ಮೀಸಲಾತಿ ಜನಜಾಗೃತಿ ಸಮಾವೇಶ ಸಮಿತಿಯ ಅಧ್ಯಕ್ಷರಾಗಿ ಪ್ರಕಾಶ್ ಪಾಟೀಲ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಂದ್ರ ಕಡಕೋಳ, ಜಂಟಿ ಕಾರ್ಯದರ್ಶಿಯಾಗಿ ಮಂಜುನಾಥ ಮಾಗಡಿ, ಸಂಘ ಮತ್ತು ಪೀಠದ ಸಮನ್ವಯಕಾರರಾಗಿ ಸೋಮನಗೌಡ ಪಾಟೀಲ, ಖಜಾಂಚಿಯಾಗಿ ಮಲ್ಲಿನಾಥ ಹಾಗೂ ಜ್ಯೋತಿ ಪ್ರಕಾಶ್ ಅವರನ್ನು ಸರ್ವಸಮ್ಮತವಾಗಿ ಆಯ್ಕೆ ಮಾಡಲಾಯಿತು.
ಸಭೆಯಲ್ಲಿ ಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ .ಉಮಾಪತಿ, ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯಾಧ್ಯಕ್ಷ ಜಿ. ಪಿ. ಪಾಟೀಲ್, ಮಾಜಿ ರಾಜ್ಯಾಧ್ಯಕ್ಷರಾದ ಬಾವಿ ಬೆಟ್ಟಪ್ಪ, ಬಸವರಾಜ್ ದಿಂಡೂರ, ಉಪಾಧ್ಯಕ್ಷರಾದ ಶಂಕರಗೌಡ, ಕಾರ್ಯಾಧ್ಯಕ್ಷ ಸೋಮನಗೌಡ ಪಾಟೀಲ್, ಧರ್ಮದರ್ಶಿ ಪಿ. ಡಿ. ಶಿರೂರ, ಮಹೇಶ್ ಹಾವೇರಿ, ನಾಗರಾಜ್, ಕಳಕನಗೌಡ, ಜ್ಯೋತಿ ಪ್ರಕಾಶ್, ಚಂದ್ರಶೇಖರ್ ಪೂಜಾರ, ಯುವಘಟಕದ ರಾಜ್ಯಾಧ್ಯಕ್ಷ ಮಂಜುನಾಥ್ ನವಲಗುಂದ ಹಾಗೂ ವಿವಿಧ ಜಿಲ್ಲೆಯ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ವಿವಿಧ ಜಿಲ್ಲೆಯ ಮಹಿಳಾ ಘಟಕದವರು, ಪದಾಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications