ಹರಿಹರದಲ್ಲಿ ನಿರ್ಗತಿಕರಿಗೆ ಊಟ ವಿತರಿಸಿ ಮಾನವೀಯತೆ ಮೆರೆದ ಪಿಎಸ್ಐ
ದಾವಣಗೆರೆ, ಏಪ್ರಿಲ್ 07: ದೇಶದಲ್ಲಿ ಕೊರೊನಾ ಮಹಾಮಾರಿ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮನೆ ತೊರೆದಿರುವ ವಲಸಿಗರು, ನಿರಾಶ್ರಿತರು ಹಾಗೂ ನಿರ್ಗತಿಕರು ಅತಂತ್ರರಾಗಿದ್ದಾರೆ.
ಊಟವಿಲ್ಲದೆ, ಅಡುಗೆ ಮಾಡಲು ಆಹಾರ ಪದಾರ್ಥಗಳಿಲ್ಲದೇ ಪರದಾಡುತ್ತಿದ್ದಾರೆ. ಇಂಥವರ ಕಷ್ಟಕ್ಕೆ ಖಾಕಿ ಪಡೆ ಸಹಾಯಕ್ಕೆ ನಿಂತಿದೆ. ದಾವಣಗೆರೆ ಜಿಲ್ಲೆಯ ಹರಿಹರ ಗ್ರಾಮಾಂತರ ಠಾಣೆಯ ಪಿಎಸ್ ಐ ಡಿ.ರವಿಕುಮಾರ್ ಅಲೆಮಾರಿಗಳಿಗೆ ಹಾಗೂ ನಿರ್ಗತಿಕರಿಗೆ ಊಟ ವಿತರಿಸಿ ಮಾನವೀಯ ಕಾರ್ಯ ಮಾಡುತ್ತಿದ್ದಾರೆ.

ತಾಲೂಕಿನ ಗುತ್ತೂರು ಬಳಿಯ ನೂರಾರು ವಲಸಿಗರಿಗೆ ಮತ್ತು ಹನಗವಾಡಿ ಬೈಪಾಸ್ ಬಳಿ ಇರುವ ಹತ್ತಾರು ನಿರ್ಗತಿಕ ಕುಟುಂಬಗಳಿಗೆ ಮಧ್ಯಾಹ್ನದ ಊಟದ ಪ್ಯಾಕೆಟ್ ಗಳನ್ನು ವಿತರಿಸಿದ್ದಾರೆ. ಅಲ್ಲದೆ ಮನೆಗಳಿಗೆ ಅವಶ್ಯಕವಾಗಿ ಬೇಕಾಗಿರುವ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡುತ್ತಿದ್ದಾರೆ. ಹಸಿದವರಿಗೆ ಅನ್ನ ನೀಡುವ, ಅವರ ಕಣ್ಣೀರೊರೆಸುವಲ್ಲಿ ಪಿಎಸ್ಐ ಮುಂದಾಗಿರುವುದಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.












Click it and Unblock the Notifications