₹50,000 ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ
ದಾವಣಗೆರೆ, ಡಿಸೆಂಬರ್ 29: ಶಾಲೆಯೊಂದರ ಸಿ.ಬಿ.ಎಸ್.ಇ. ಮಾನ್ಯತೆ ನವೀಕರಣ ಮಾಡಿಕೊಡಲು 15 ಸಾವಿರ ರೂಪಾಯಿ ಲಂಚ ಪಡೆದುಕೊಳ್ಳುಲು ಮುಂದಾದ ಹರಿಹರ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ದಾವಣಗೆರೆಯ ಹರಿಹರದಲ್ಲಿ ನಡೆದಿದೆ.
ಬಿ.ಸಿ. ಸಿದ್ದಪ್ಪ ಲಂಚ ಪಡೆಯುವಾಗ ಸಿಕ್ಕಿಬಿದ್ದ ಅಧಿಕಾರಿ ಎಂದು ಗುರುತಿಸಲಾಗಿದೆ.
ಹರಿಹರ ಪಟ್ಟಣದ ಕೆ. ಆರ್. ನಗರದ ಶ್ರೀ ದುರುಗೋಜಿ ಗೋಪಾಲರಾವ್ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ನ ಚೇರ್ಮನ್ ಡಿ. ರಘುನಾಥ್ ಎನ್ನುವವರು ತಮ್ಮ ವಿದ್ಯಾದಾಯಿನಿ ಶಾಲೆಯ ಸಿ.ಬಿ.ಎಸ್.ಇ. ಮಾನ್ಯತೆ ನವೀಕರಣಕ್ಕಾಗಿ ಆನ್ಲೈನ್ನಲ್ಲಿ ದಾಖಲೆ ಸಲ್ಲಿಸಿದ್ದರು. ಹರಿಹರ ಬಿ.ಇ.ಓ. ಕಚೇರಿಯಿಂದ ಸರ್ಟಿಫಿಕೇಟ್ ಆಫ್ ರೆಕಗ್ನಿಷನ್ ಅಪೆಂಡಿಕ್ಸ್ 15 ನಮೂನೆಯಲ್ಲಿ ಭರ್ತಿ ಮಾಡಿಕೊಡಲು ಹಾಗೂ ಶಾಲಾ ಶುಲ್ಕ ನಿಗದಿ ಮಾಡಿಕೊಡಲು ಮನವಿ ಸಲ್ಲಿಸಿದ್ದರು. ಇದಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬಿ. ಸಿ. ಸಿದ್ದಪ್ಪ 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಕಳೆದ ಡಿಸೆಂಬರ್ 13 ನೇ ತಾರೀಖಿನಂದು ಮುಂಗಡವಾಗಿ 10 ಸಾವಿರ ರೂಪಾಯಿ ಪಡೆದಿದ್ದ ಸಿದ್ದಪ್ಪ, ಡಿಸೆಂಬರ್ 28ರಂದು 30,000 ರೂಪಾಯಿ ಕೊಡಲು ಬೇಡಿಕೆ ಇಟ್ಟಿದ್ದರು. ಡಿಸೆಂಬರ್ 29ರಂದು ಮಧ್ಯಾಹ್ನ ಡಿ. ರಘುನಾಥ್ ಅವರಿಂದ 15,000 ರೂಪಾಯಿ ಲಂಚ ಪಡೆಯುವಾಗ ದಾವಣಗೆರೆ ಲೋಕಾಯುಕ್ತ ಘಟಕದ ಪೊಲೀಸ್ ಆಧೀಕ್ಷಕ ಎಂ.ಎಸ್.ಕೌಲಾಪುರರವರ ನೇತೃತ್ವದಲ್ಲಿ ಅಧಿಕಾರಿಗಳು, ಸಿಬ್ಬಂದಿ ದಾಳಿ ನಡೆಸಿ ರೆಡ್ಹ್ಯಾಂಡ್ ಆಗಿ ಹಿಡಿದು, ಹಣವನ್ನು ವಶಕ್ಕೆ ಪಡೆದಿದ್ದಾರೆ.
ಡಿವೈಎಸ್ಪಿ ಕೆ. ಜಿ. ರಾಮಕೃಷ್ಣ, ಪೊಲೀಸ್ ಇನ್ಸ್ಪೆಕ್ಟರ್ ಆಂಜನೇಯ ಎನ್.ಹೆಚ್, ಹೆಚ್. ಎಸ್.ರಾಷ್ಟ್ರಪತಿ, ಸಿಬ್ಬಂದಿ ಚಂದ್ರಶೇಖರ್, ಆಂಜನೇಯ, ಧನರಾಜ್, ಮುಜೀಬ್ ಖಾನ್, ಬಸವರಾಜ್, ಮೋಹನ್ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
-
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ












Click it and Unblock the Notifications