ಮೋದಿ ಜನತಾ ಕರ್ಫ್ಯೂಗೆ ಎಚ್ ಡಿಡಿ ಸ್ವಾಗತ
ದಾವಣಗೆರೆ, ಮಾರ್ಚ್ 21: ಪ್ರಧಾನಿ ನರೇಂದ್ರ ಮೋದಿಯವರು ಕರೆ ಕೊಟ್ಟಿರುವ ಜನತಾ ಕರ್ಫ್ಯೂವನ್ನು ಎಲ್ಲಾ ವಿರೋಧ ಪಕ್ಷದವರು ಸ್ವಾಗತಿಸಿದ್ದಾರೆ. ಅದರಲ್ಲೂ ಮಾಜಿ ಪ್ರಧಾನಿ ದೇವೇಗೌಡರು ಸ್ವಾಗತಿಸಿದ್ದಾರೆ. ಯಾರೂ ವಿರೋಧಿಸಿಲ್ಲ ಎಂದು ದಾವಣಗೆರೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯೆ ನೀಡಿದರು.
ದಾವಣಗೆರೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೊರೊನಾ ಜಾಗೃತಿ ಬಗ್ಗೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, "ದಾವಣಗೆರೆಯ ಜಿಲ್ಲೆಯಲ್ಲಿ ಸಾಕಷ್ಟು ಕೊರೊನಾ ಭೀತಿ ಇದೆ. ಜಾಗೃತಿ ಮೂಡಿಸುವ ಕೆಲಸವನ್ನು ಚೆನ್ನಾಗಿ ನಿರ್ವಹಿಸಿದ್ದೀರಿ, ತುಂಬಾ ಸಂತೋಷವಾಗಿದೆ" ಎಂದರು.
"ಜಿಲ್ಲೆಯಲ್ಲಿ ಅಂಗಡಿ ಬಂದ್ ಮಾಡಿದರೆ ಅಂಗಡಿ ಮಾಲೀಕರಿಗೆ ವೈಯಕ್ತಿಕವಾಗಿ ಒಳ್ಳೆಯದಾಗುತ್ತದೆ. ಕೊರೋನಾ ಬಗ್ಗೆ ದೇವಸ್ಥಾನ, ಮಸೀದಿ, ಚರ್ಚ್ ಗೆ ಹೋಗುವವರಿಗೆ ಮಾಹಿತಿ ನೀಡಿ. ಇದೇ ಮೊದಲ ಬಾರಿ ದೇವಸ್ಥಾನ, ಚರ್ಚ್, ಮಸೀದಿ ಬಂದ್ ಆಗಿದೆ. ಅದರಲ್ಲೂ ಪ್ರಾಣದ ಹಂಗು ತೊರೆದು ಅಮರನಾಥನ ದರ್ಶನ ಪಡೆಯಲು ಹೋಗುತ್ತಿದ್ದರು. ಆದರೆ ಅದನ್ನು ಕೂಡ ಬಂದ್ ಮಾಡಿರುವುದು ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ" ಎಂದರು.

"ಕೊರೊನಾ ದೇಶದಲ್ಲಿ ಮೂರನೇ ಹಂತಕ್ಕೆ ಬಂದರೆ ನಾವು ಇಲ್ಲಿ ಸಭೆ ಮಾಡಲೂ ಆಗುವುದಿಲ್ಲ. ಜನರಿಗೆ ಜಾಗೃತಿ ಮಾಡುತ್ತಿದ್ದೀರಿ ನಿಜ. ಹಳ್ಳಿ ಜನರಿಗೆ ಇದರ ಬಗ್ಗೆ ಕಲ್ಪನೆ ಇಲ್ಲ. ನಾವು ಸಮಾಜ ಸೇವೆ ಮಾಡುತ್ತಿದ್ದೇವೆ. ಜಾಗೃತಿ ಮಾಡಿದರೆ ಸಾಲದು, ಅವರಿಗೆ ಮನಸ್ಸಿನಲ್ಲಿ ಬರುವಂತೆ ತಿಳಿ ಹೇಳಬೇಕು. ಏನೂ ಆಗೋಲ್ಲ ಎನ್ನುವ ದೇಶದಲ್ಲಿ ಕೊರೊನಾ ತಾಂಡವವಾಡುತ್ತಿದೆ. ಆದರೆ ನಾವು ಮೊದಲೇ ಜಾಗೃತಿ ಮೂಡಿಸಿದ್ದರಿಂದ ಸೇಫ್ ಆಗಿದ್ದೇವೆ" ಎಂದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications