ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಳ್ಳು ಹೇಳುವ ಎಚ್‌ಡಿಕೆ, ಸಿದ್ದರಾಮಯ್ಯಗೆ ನೊಬೆಲ್ ನೀಡಬೇಕು: ಈಶ್ವರಪ್ಪ

|
Google Oneindia Kannada News

Recommended Video

ಎಚ್‌ಡಿಕೆ, ಸಿದ್ದರಾಮಯ್ಯಗೆ ನೊಬೆಲ್ ನೀಡಬೇಕು..! | Oneindia Kannada

ದಾವಣಗೆರೆ, ಡಿಸೆಂಬರ್ 21: ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾದ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಬ್ಬರಿಗೂ ನೊಬೆಲ್ ಪ್ರಶಸ್ತಿ ಕೊಡಿಸಬೇಕು ಎಂದು ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ತಲೆಯಲ್ಲಿ ಮೆದುಳಿಲ್ಲ: ಕೆಎಸ್ ಈಶ್ವರಪ್ಪ ವಾಗ್ದಾಳಿ ಸಿದ್ದರಾಮಯ್ಯ ತಲೆಯಲ್ಲಿ ಮೆದುಳಿಲ್ಲ: ಕೆಎಸ್ ಈಶ್ವರಪ್ಪ ವಾಗ್ದಾಳಿ

ರಾಜ್ಯ ಸರ್ಕಾರ ಕೇವಲ ಘೋಷಣೆಗಳನ್ನು ಮಾಡುತ್ತಿದೆ. ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆ ರೈತರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಉತ್ತರ ಕರ್ನಾಟಕದ ಬಗ್ಗೆ ಚರ್ಚಿಸಲು ಸದನದಲ್ಲಿ ಅವಕಾಶವನ್ನೇ ನೀಡಿಲ್ಲ. ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ವಿಚಾರದಲ್ಲಿ ಸ್ಪಷ್ಟ ನಿಲುವು ಇಲ್ಲ. ಇದು ವ್ಯರ್ಥ ಅಧಿವೇಶನ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಪರೇಷನ್ ಕಮಲ : ಕೆ.ಎಸ್.ಈಶ್ವರಪ್ಪ ಹೇಳಿದ್ದೇನು? ಆಪರೇಷನ್ ಕಮಲ : ಕೆ.ಎಸ್.ಈಶ್ವರಪ್ಪ ಹೇಳಿದ್ದೇನು?

ಬಿಜೆಪಿ ಬರಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುತ್ತಿದೆ. ಅನೇಕ ತಾಲ್ಲೂಕುಗಳಲ್ಲಿ ಕುಡಿಯಲು ನೀರಿಲ್ಲ. ಬೆಳೆದ ಬೆಳೆ ಒಣಗಿಹೋಗಿವೆ. ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗಿದೆ. ಇಷ್ಟೆಲ್ಲ ಆದರೂ ಸಮ್ಮಿಶ್ರ ಸರ್ಕಾರದ ಯಾವ ನಾಯಕರೂ ಈ ಪ್ರದೇಶಗಳತ್ತ ತಲೆ ಹಾಕಿಲ್ಲ.

ಸಂಪುಟ ವಿಸ್ತರಣೆ ಆದ ದಿನವೇ ಸರ್ಕಾರ ಪತನ: ಈಶ್ವರಪ್ಪ ಸಂಪುಟ ವಿಸ್ತರಣೆ ಆದ ದಿನವೇ ಸರ್ಕಾರ ಪತನ: ಈಶ್ವರಪ್ಪ

hd kumaraswamy siddaramaiah should be awarded nobel for lies eshwarappa

ಸಿದ್ದರಾಮಯ್ಯ ಮತ್ತು ದೇವೇಗೌಡ ಅವರು ಬರಪೀಡಿತ ಪ್ರದೇಶಗಳಿಗೆ ಜಂಟಿ ಪ್ರವಾಸ ಮಾಡಲಿ. ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಿ. ಆದರೆ, ಜೆಡಿಎಸ್ ಮತ್ತು ಕಾಂಗ್ರೆಸ್ ಕೇವಲ ಅಧಿಕಾರಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿವೆ ಎಂದು ಆರೋಪಿಸಿದರು.

English summary
BJP MLA KS Eshwarappa criticised HD Kumaraswamy and Siddaramaiah, they are experts in saying lies. Nobel prize should be awarded to both of them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X