ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯ ಹಲವೆಡೆ ಮುಂಗಾರು ಮಳೆ ಆರ್ಭಟ-ಉಕ್ಕಿ ಹರಿದ ಹಳ್ಳ-ಕೊಳ್ಳಗಳು
ದಾವಣಗೆರೆ, ಜೂನ್, 07: ರಾಜ್ಯಾದ್ಯಂತ ಮುಂಗಾರು ಚುರುಕು ಪಡೆದಿದ್ದು, ಇದರಿಂದ ಅನ್ನದಾತರು ಸಂತಸಗೊಂಡಿದ್ದರೆ, ಮತ್ತೊಂದೆಡೆ ಮಳೆರಾಯ ಅವಾಂತರಗಳನ್ನೇ ಸೃಷ್ಟಿಸಿ ಭೀತಿ ಹುಟ್ಟಿಸಿದ್ದಾನೆ. ಹಾಗೆಯೇ ಬೆಣ್ಣೆನಗರಿ ದಾವಣಗೆರೆ ಜಿಲ್ಲೆಯ ಹಲವೆಡೆ ಸುರಿದ ಭಾರೀ ಮಳೆಯಿಂದ ಅನಾಹುತಗಳು ಸೃಷ್ಟಿಯಾಗಿವೆ.
ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ನಗರದಲ್ಲಿ ನಿನ್ನೆ ಮತ್ತು ಇಂದು ಧಾರಾಕಾರ ಮಳೆ ಸುರಿದಿದ್ದು, ಇದರಿಂದಾಗಿ ವಿದ್ಯಾರ್ಥಿಗಳು, ವಾಹನ ಸವಾರರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.

ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಎವಿಕೆ ರಸ್ತೆ ಸೇರಿದಂತೆ ಹಲವೆಡೆ ನೀರು ನಿಂತಿದ್ದು, ಜನರಿಗೆ ತೊಂದರೆ ಆಯಿತು. ಮಧ್ಯಾಹ್ನ ಶುರುವಾದ ಮಳೆಯು ಸುಮಾರು ಒಂದೂವರೆ ಗಂಟೆಗಳ ಕಾಳ ಸುರಿಯಿತು. ಇನ್ನು ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಸಿಟಿ ಮಂದಿಗೆ ಕೂಲ್ ಕೂಲ್ ವಾತಾವರಣ ಇತ್ತು. ಗ್ರಾಮೀಣ ಪ್ರದೇಶದಲ್ಲಿಯೂ ವರುಣ ಆರ್ಭಟಿಸಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
ಸುಮಾರು ಒಂದೂವರೆ ಗಂಟೆಗಳ ಕಾಲ ಧಾರಾಕಾರ ಸುರಿಯಿತಲ್ಲದೇ, ಶಾಲೆ ಬಿಡುವ ವೇಳೆಯಲ್ಲಿ ಮಳೆ ಬಂದಿದ್ದರಿಂದ ವಿದ್ಯಾರ್ಥಿಗಳು ಮಳೆಯಲ್ಲಿ ತೊಯ್ದುಕೊಂಡು ಮನೆಗೆ ಹೋಗುವಂತಾಯಿತು. ಕೆಲ ಬಡಾವಣೆಗಳಲ್ಲಿ ನೀರು ನಿಂತು ಜನರು ಪರದಾಡಿದ ಘಟನೆಗಳು ನಡೆದಿವೆ.
ಕಳೆದ ಒಂದು ವಾರ ಬಿಡುವು ನೀಡಿದ್ದ ವರುಣ ಮತ್ತೆ ಆರ್ಭಟಿಸಿದ್ದು, ರೈತರು ಮುಂಗಾರು ಹಂಗಾಮಿನ ಬಿತ್ತನೆಗೆ ಸಜ್ಜಾಗಿದ್ದಾರೆ. ಜಗಳೂರು ತಾಲೂಕಿನ ಹಲವೆಡೆಯೂ ಮಳೆಯಾಗಿದ್ದು, ಬಿಳಿಚೋಡು ಹೋಬಳಿ ವ್ಯಾಪ್ತಿಯ ಪಲ್ಲಾಗಟ್ಟೆ, ಸೊಕ್ಕೆ ಹೋಬಳಿ ಮತ್ತು ಕಸಬಾ ಹೋಬಳಿ ವ್ಯಾಪ್ತಿಯಲ್ಲಿ ಮಳೆರಾಯ ಆರ್ಭಟಿಸಿದ್ದಾರೆ.
ಅಸಗೋಡು, ದಿದ್ದಿಗೆ, ಪಲ್ಲಾಗಟ್ಟೆ, ಮೆದಿಕೇರನಹಳ್ಳಿ, ಗಡಿಮಾಕುಂಟೆ, ಗೊಡೆ ತಾರೇಹಳ್ಳಿ, ಜಗಳೂರು, ಹುಚ್ಚೆಂಗಿಪುರ ಮುಂತಾದ ಕಡೆ ಉತ್ತಮ ಮಳೆ ಬಿದ್ದಿದೆ. ಪಲ್ಲಾಗಟ್ಟೆ ಗ್ರಾಮದ ಸಮೀಪ ಸಣ್ಣ ನೀರಾವರಿ ಇಲಾಖೆಯ ವತಿಯಿಂದ ಇತ್ತೀಚೆಗೆ 50,00,000 ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದ ಚನ್ನಪ್ಪನಕಟ್ಟೆ ಹಳ್ಳವು ದೊಡ್ಡ ಚೆಕ್ ಡ್ಯಾಂನಂತೆ ತುಂಬಿ ಹರಿಯುತ್ತಿದೆ.
ಹೊನ್ನಾಳಿಯಲ್ಲಿಯೂ ಭಾರೀ ಮಳೆಯಾಗಿದ್ದು, ಪಟ್ಟಣದ ಖಾಸಗಿ ಬಸ್ ನಿಲ್ದಾಣವು ಕೆರೆಯಂತೆ ಮಾರ್ಪಟ್ಟಿತ್ತು. ಇನ್ನು ಹತ್ತಾರು ವರ್ಷಗಳ ಹಿಂದೆ ಬಸ್ ನಿಲ್ದಾಣದ ಸುತ್ತಮುತ್ತ ನಿರ್ಮಿಸಿದ್ದ ಅವೈಜ್ಞಾನಿಕ ಚರಂಡಿಗಳಿಂದಾಗಿ ನೀರು ಸರಾಗವಾಗಿ ಹರಿದು ಹೋಗದಿರುವುದು ಮತ್ತು ಚರಂಡಿಯೊಳಗೆ ವ್ಯಾಪಕವಾಗಿ ಕಸಕಡ್ಡಿಗಳನ್ನು ಹಾಕುತ್ತಿರುವುದರಿಂದ ನೀರು ನಿಲ್ಲುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications