ವನ್ಯಜೀವಿ ಪತ್ತೆ ಪ್ರಕರಣದಲ್ಲಿ ಎಫ್ಐಆರ್ ರದ್ದು: ನ್ಯಾಯಕ್ಕೆ ಸಂದ ಜಯ ಎಂದ ಎಸ್.ಎಸ್ ಮಲ್ಲಿಕಾರ್ಜುನ್
ದಾವಣಗೆರೆ, ಅಕ್ಟೋಬರ್ 09: ನ್ಯಾಯಕ್ಕೆ ಸಂದ ಜಯ. ಹೈಕೋರ್ಟ್ ಆದೇಶ ಪ್ರತಿ ಕೈ ಸೇರಿಲ್ಲ. ಅದು ಕೈ ಸೇರಿದ ಬಳಿಕ ಪ್ರತಿಕ್ರಿಯೆ ನೀಡುತ್ತೇನೆ. ಯಾರ್ಯಾರು ಎಲ್ಲೆಲ್ಲಿ ಏನು ಮಾಡಿದ್ದಾರೆ. ಎಲ್ಲವನ್ನೂ ಹೇಳುತ್ತೇನೆ. ಕಾದು ನೋಡಿ ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ವನ್ಯಜೀವಿ ಮೃಗಗಳ ಪತ್ತೆ ಪ್ರಕರಣ ಸಂಬಂಧ ಹೈಕೋರ್ಟ್ ಎಫ್ಐಆರ್ ರದ್ದುಪಡಿಸಿರುವ ಕುರಿತು ಮಾತನಾಡಿದ ಅವರು,ಸ್ವಲ್ಪ ದಿನ ಕಾದು ನೋಡಿ. ಯಾರ್ಯಾರು ಏನು ಮಾಡಿದ್ದಾರೆ ಎಂಬುದರ ಮಾಹಿತಿ ತೆಗೆಯುತ್ತಿದ್ದೇವೆ. ಎಲ್ಲವನ್ನೂ ಬಹಿರಂಗಪಡಿಸುತ್ತೇನೆ. ಆದೇಶ ಪ್ರತಿ ಸಿಗದೇ ಏನೂ ಮಾತನಾಡಲ್ಲ. ಇದಕ್ಕೆ ಟೈಂ ಇದೆ. ಈಗಲೇ ಮಾತನಾಡಲ್ಲ. ಪ್ರತಿ ಸಿಕ್ಕ ಬಳಿಕ ಎಲ್ಲಾ ವಿಚಾರಗಳ ಕುರಿತು ಮಾತನಾಡುತ್ತೇನೆ ಎಂದು ಹೇಳಿದರು.

ಮುಂಬರುವ ಲೋಕಸಭೆ ಚುನಾವಣೆಗೆ ಯಾರು ಕಾಂಗ್ರೆಸ್ ಕಾರ್ಯಕರ್ತರಾಗಿ ದುಡಿದಿರುತ್ತಾರೋ ಅವರಿಗೆ ಟಿಕೆಟ್ ಸಿಗುತ್ತದೆ. ಬಾವುಟ ಹಿಡಿದುಕೊಂಡು, ಪೋಸ್ಟರ್ ಹಚ್ಚಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಯಾರು ಕೆಲಸ ಮಾಡಿರುತ್ತಾರೋ ಅವರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತದೆ. ಎಲ್ಲೋ ಇದ್ದುಕೊಂಡು ಬಂದು ಟಿಕೆಟ್ ನನಗೆ ಸಿಗುತ್ತೆ ಎಂದು ಹೇಳಲು ಆಗದು ಎಂದು ಹೇಳಿದರು.
ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಹೇಳಿಕೆ ಗಮನಿಸಿದ್ದೇನೆ. ಎಲ್ಲರೂ ಕಾರ್ಯಕರ್ತರೇ. ಮೊದಲು ಅವರನ್ನು ಗುರುತಿಸುವ ಕೆಲಸ ಆಗಬೇಕಿದೆ. ಮಲ್ಲಪ್ಪ, ಬೋಳಪ್ಪ, ಕಾಳಪ್ಪ, ಸಿದ್ದಪ್ಪ ಯಾರು ಎಂಬುದು ಗೊತ್ತಾಗಬೇಕಲ್ವಾ. ಎಲ್ಲಿಂದಲೋ ಬಂದು ನಿಂತುಕೊಂಡು ಮಾತನಾಡುವುದು ಸರಿಯಲ್ಲ. ಎಲ್ಲರನ್ನೂ ಕೇಳಬೇಕು, ಕಾಣಬೇಕು. ಕಾರ್ಯಕರ್ತರನ್ನು ಭೇಟಿಯಾಗಬೇಕು, ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಬ್ಲಾಕ್ ಅಧ್ಯಕ್ಷರು, ಮುಖಂಡರನ್ನು ಭೇಟಿಯಾಗಿ ಅಭಿಪ್ರಾಯ ಸಂಗ್ರಹಿಸಬೇಕು. ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತದೆಯೋ ಅವರು ಸ್ಪರ್ಧೆ ಮಾಡಲಿ. ಯಾರೂ ಸಹ ಬೇಡ ಎನ್ನುವುದಿಲ್ಲ ಎಂದು ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಲಿಂಗಾಯತ ಅಧಿಕಾರಿಗಳ ಕಡೆಗಣನೆ ಮಾಡಲಾಗುತ್ತಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರಾಧ್ಯಕ್ಷ ಶಾಮನೂರು ಶಿವಶಂಕರಪ್ಪರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಇದು ಮುಗಿದ ಅಧ್ಯಾಯ. ಈ ವಿಚಾರವನ್ನು ಹೆಚ್ಚಾಗಿ ಪ್ರಚಾರ ನೀಡಿದ್ದಾರೆ ಎಂದು ಹೇಳಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications