ಬೆಣ್ಣೆನಗರಿ ದಾವಣಗೆರೆಯಲ್ಲಿ ಬಣ್ಣದೋಕುಳಿಯ ಸಡಗರ ಹೀಗಿತ್ತು, ಇಲ್ಲಿದೆ ವಿವರ
ದಾವಣಗೆರೆ, ಮಾರ್ಚ್, 08: ಜಿಲ್ಲೆಯಾದ್ಯಂತ ಬಣ್ಣದೋಕುಳಿ ಸಂಭ್ರಮ, ಸಡಗರ ಮನೆ ಮಾಡಿತ್ತು. ಇಂದು ಬೆಣ್ಣೆನಗರಿಯ ಜನ ಬಣ್ಣದ ಲೋಕದಲ್ಲಿ ಮಿಂದೆದಿದ್ದರು. ರಾಮ್ ಅಂಡ್ ಕೋ ಸರ್ಕಲ್ನಲ್ಲಿ ಯುವಕ, ಯುವತಿಯರು, ಮಹಿಳೆಯರ ನೃತ್ಯವಂತೂ ನೋಡುಗರ ಗಮನ ಸೆಳೆಯಿತು. ಪರಸ್ಪರ ಬಣ್ಣ ಎರಚಿಕೊಳ್ಳುತ್ತಾ ಡಿಜೆ ಸೌಂಡ್ಗೆ ಸಖತ್ತಾಗಿಯೇ ಸ್ಟೆಪ್ ಹಾಕಿ ಸಂಭ್ರಮಿಸಿದರು.
ಸಖತ್ ಹೆಜ್ಜೆ ಹಾಕಿದ ಯುವಸಮೂಹ
ಕಣ್ಣಿಗೆ ಮುದನೀಡುವ ವಸ್ತ್ರಾಲಂಕಾರವನ್ನು ಹಾಕಿ ಡಿಜೆ ಹಾಡುಗಳಿಗೆ ನೃತ್ಯ ಮಾಡಿ ಗಮನಸೆಳೆದರು. ಬಣ್ಣ ಬಣ್ಣದ ವೇಷ ತೊಟ್ಟವರ ಬಟ್ಟೆಗಳೆಲ್ಲವೂ ಬಣ್ಣಗಳಿಂದ ಕಂಗೊಳಿಸುತ್ತಿದ್ದವು. ಇನ್ನು ಬಣ್ಣದಲ್ಲಿ ಮಿಂದೆದ್ದ ಯುವಸಮೂಹ ಡಿಜೆ ಸೌಂಡ್ಗೆ ಸಖತ್ ಸ್ಟೆಪ್ ಹಾಕಿದ್ದು, ಚಿಣ್ಣರ ಸಂಭ್ರಮವೂ ಕೂಡ ಮುಗಿಲು ಮುಟ್ಟಿತ್ತು.

ಹೋಳಿಯಲ್ಲಿ ಮಿಂದೆದ್ದ ದೇವನಗರಿ
ಹೋಳಿ ಹಬ್ಬದ ಹಿನ್ನೆಲೆಯಲ್ಲಿ ರಾಮ್ ಅಂಡ್ ಕೋ ಸರ್ಕಲ್ನಲ್ಲಿ ಕಾಲೇಜು ಯುವಕ, ಯುವತಿಯರ ಡ್ಯಾನ್ಸ್ ಮತ್ತಷ್ಟು ಕಳೆಗಟ್ಟುವಂತೆ ಮಾಡಿತ್ತು. ನಗರದಾದ್ಯಂತ ಯುವಕರು ಬಣ್ಣ ಹಚ್ಚಿಕೊಂಡು ಸಂಭ್ರಮಿಸುತ್ತಿದ್ದರೆ, ಬಡಾವಣೆಗಳಲ್ಲಿ ತಾವೇನೂ ಕಡಿಮೆ ಇಲ್ಲ ಎನ್ನುವಂತೆ ಜನರು ಮನೆಯಿಂದ ಹೊರ ಬಂದು ಬಣ್ಣದೋಕುಳಿ ಆಡಿ ಸಂಭ್ರಮಿಸಿದರು.
ವಿವಿಧ ಬಡಾವಣೆಗಳಲ್ಲಿ ಹೋಳಿ ಆಚರಣೆ
ವಿವಿಧ ಬಡಾವಣೆಗಳಲ್ಲಿ ಮಕ್ಕಳು, ಹಿರಿಯರೆನ್ನದೆ ಎಲ್ಲರೂ ಹಬ್ಬದ ಸಡಗರದಲ್ಲಿ ಮುಳುಗಿದ್ದರು. ಕುಟುಂಬದವರು, ಸ್ನೇಹಿತರು ಬಣ್ಣ ಹಚ್ಚಿಕೊಂಡು ಸಂಭ್ರಮಿಸಿದರು. ಪ್ರತಿ ಬಾರಿಯೂ ರಾಮ್ ಅಂಡ್ ಕೋ ವೃತ್ತ ಸೇರಿದಂತೆ ಹಲವೆಡೆ ವಿವಿಧ ಸಮಿತಿ ವತಿಯಿಂದ ಹೋಳಿ ಹಬ್ಬ ಆಚರಿಸಲಾಗುತ್ತದೆ. ಬಣ್ಣ ಹಚ್ಚಿಕೊಂಡು, ತಮಟೆ ಮತ್ತು ಹಾಡಿಗೆ ಯುವ ಸಮೂಹ ಸಖತ್ ಡಾನ್ಸ್ ಮಾಡಿ ಸಂಭ್ರಮಿಸುವುದು ಇಲ್ಲಿನ ಪದ್ಧತಿಯಾಗಿದೆ.

ಬಣ್ಣದ ಓಕುಳಿಯಲ್ಲಿ ಮಿಂದೆದ್ದ ಯುವಕರು ದಾವಣಗೆರೆ ನಗರದ ವಿವಿಧೆಡೆ ಬೈಕ್ನಲ್ಲಿ ಸುತ್ತಾಡಿದರು. ಹೋಳಿ ಹಬ್ಬದ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ನಿಷೇಧಿಸಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications