ಬೆಣ್ಣೆನಗರಿ ದಾವಣಗೆರೆಯಲ್ಲಿ ಮಾರ್ಚ್ 14ಕ್ಕೆ ಹೋಳಿಹಬ್ಬ ಫಿಕ್ಸ್
ದಾವಣಗೆರೆ, ಮಾರ್ಚ್, 10: ಮುಂಬೈ ಬಿಟ್ಟರೆ, ಬೆಣ್ಣೆನಗರಿ ದಾವಣಗೆರೆಯಲ್ಲೇ ಅದ್ಧೂರಿಯಾಗಿ ಹೋಳಿ ಹಬ್ಬವನ್ನು ಆಚರಣೆ ಮಾಡುತ್ತಾರೆ. ಇನ್ನೂ ಈ ಬಾರಿ ಆಚರಣೆ ಮಾಡಲ್ಲ ಎನ್ನುವ ವದಂತಿಗಳು ಹರಡಿದ್ದವು. ಅದರೆ, ನಿಗದಿತ ದಿನಾಂಕದಂತೆ ಮಾರ್ಚ್ 14ರಂದೇ ರಾಂ ಅಂಡ್ ಕೋ ಸರ್ಕಲ್ನ ಗೆಳೆಯರ ಬಳಗದಿಂದ ಆಚರಣೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ರಾಂ ಅಂಡ್ ಕೋ ಸರ್ಕಲ್ ನ ಗೆಳೆಯರ ಬಳಗದಿಂದ ಮಾರ್ಚ್ 14ರಂದು ಹೋಳಿ ಹಬ್ಬ ಆಚರಣೆ ನಡೆಸಲಾಗುವುದು. ಈ ವರ್ಷ ರಾಂ ಅಂಡ್ ಕೋ ವೃತ್ತದಲ್ಲಿ ಹೋಳಿ ಆಚರಣೆ ಮಾಡಲಾಗುತ್ತಿಲ್ಲ ಎಂದು ಕೆಲವರು ಗಾಳಿ ಸುದ್ದಿ ಹರಡಿದ್ದರು. ಈ ರೀತಿಯ ಗಾಳಿ ಸುದ್ದಿಗೆ ಯಾರೂ ಕಿವಿಗೊಡಬೇಡಿ. ಪ್ರತಿ ವರ್ಷದಂತೆ ಈ ಬಾರಿಯೂ ಸಹ ರಾಂ ಅಂಡ್ ಕೋ ಸರ್ಕಲ್ನಲ್ಲಿಯೇ ಹೋಳಿ ಹಬ್ಬನ್ನು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಶ್ರೀ ವರಸಿದ್ಧಿ ವಿನಾಯಕ ಮಹೋತ್ಸವ ಸಮಿತಿ ಅಧ್ಯಕ್ಷ ಕೆ.ನಾಗೇಂದ್ರರೆಡ್ಡಿ ಅವರು ಹೇಳಿದರು.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ 27 ವರ್ಷಗಳಿಂದ ರಾಂ ಅಂಡ್ ಕೋ ವೃತ್ತದಲ್ಲಿ ಹೋಳಿ ಅಚರಣೆ ನಡೆಸಿಕೊಂಡು ಬರಲಾಗುತ್ತಿದೆ. ಈ ವರ್ಷ ಕೂಡ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಶಾಸಕ ಶಾಮನೂರು ಶಿವಶಂಕರಪ್ಪ ಹೋಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಮಾರ್ಚ್ 13ರಂದು ಸಂಜೆ 7ಕ್ಕೆ ಕಾಮದಹನ ಮಾಡಲಾಗುವುದು. ಮಾರ್ಚ್ 14ರ ಶುಕ್ರವಾರ ಬೆಳಗ್ಗೆ 7ರಿಂದ ಮಧ್ಯಾಹ್ನ 1ರ ವರೆಗೆ ಹೋಳಿ ಆಚರಣೆ ಮಾಡಲಾಗುತ್ತದೆ. 2,000ಕ್ಕೂ ಅಧಿಕ ಹೆಚ್ವು ಯುವಕ-ಯುವತಿಯರು ಇದರಲ್ಲಿ ಭಾಗಿ ಆಗಲಿದ್ದು, ಯುವತಿಯರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಪ್ರತ್ಯೇಕ ಸ್ಥಳಾವಕಾಶ ಮಾಡಿಕೊಡಲಾಗುತ್ತದೆ.
ಇನ್ನು ಈ ಬಾರಿ ಬೆಳಗಾವಿಯಿಂದ ಡಿಜೆ ತರಿಸಲಾಗುವುದು. ಕಾಮದಹನ ಮಾಡುವ ವೇಳೆ ಕಾಮದಹನದ ಹಿಂದಿರುವ ಪುರಾಣ ಕತೆಯನ್ನು ಡಿವಿಡಿ ಮೂಲಕ ಪ್ರಸಾರ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೇಳಿದರು. ಇನ್ನು ಈ ದಿನ ಜಿಲ್ಲೆಯ ಹಲವು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗುತ್ತದೆ.
ಮಾರ್ಚ್-ಏಪ್ರಿಲ್ ರಜೆಗಳು: ಪುಣೆಯಲ್ಲಿ ಮಾರ್ಚ್ನಲ್ಲಿ ಹಲವು ಸಾರ್ವಜನಿಕ ರಜಾದಿನಗಳು ಬರಲಿವೆ. ಮಾರ್ಚ್ 13ರಂದು ಹೋಳಿ ಹಬ್ಬ, ಮಾರ್ಚ್ 14ರಂದು ಧುಲಿ ವಂದನಾ ಇರಲಿದ್ದು, ಈ ದಿನಗಳಂದು ಈ ಭಾಗದ ಶಾಲೆಗಳಿಗೆ ರಜೆ ಇರಲಿದೆ. ಮರಾಠಿ ಕ್ಯಾಲೆಂಡರ್ ಪ್ರಕಾರ, ಮಾರ್ಚ್ 17ರಂದು ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿ, ಮಾರ್ಚ್ 30 ಗುಡಿ ಪಾಡ್ವಾ ಮತ್ತು ಮಾರ್ಚ್ 31 ರಂಜಾನ್ ಹಿನ್ನೆಲೆ ಶಲಾಗಳಿಗೆ ರಜೆ ಇರಲಿದೆ. ಇನ್ನು ಇಲ್ಲಿ ಹಲವು ಶಾಲೆಗಳಿಗೆ ಶನಿವಾರ ಕೂಡ ರಜೆಗಳು ಇರಲಿವೆ ಎನ್ನುವ ಮಾಹಿತಿ ಇದೆ.
ಮತ್ತೊಂದೆಡೆ ಏಪ್ರಿಲ್ 6ರಂದು ರಾಮನವಮಿ, ಏಪ್ರಿಲ್ 10ರಂದು ಮಹಾವೀರ ಜಯಂತಿ ಮತ್ತು ಏಪ್ರಿಲ್ 18ರಂದು ಗುಡ್ ಫ್ರೈಡೇ ಸೇರಿ ಸರಣಿ ರಜೆಗಳು ಇರಲಿವೆ. ಇದನ್ನು ಹೊರತು ಪಡಿಸಿದರೆ ಭಾನುವಾರದಂದು ಶಾಲೆಗಳಿಗೆ ರಜೆ ಇರಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications