ಹೊನ್ನಾಳಿ ಕ್ಷೇತ್ರದ ಚುನಾವಣಾ ಫಲಿತಾಂಶ 2023: ಎಂಪಿ ರೇಣುಕಾಚಾರ್ಯ ಹಿನ್ನಡೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು (ಶನಿವಾರ, ಮೇ 13) ಪ್ರಕಟವಾಗುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುವ ಆಶಾವಾದದಲ್ಲಿದ್ದರೆ, ಅತಂತ್ರವಾದರೆ ತಾನೇ ಕಿಂಗ್ ಮೇಕರ್ ಎನ್ನುವ ಉತ್ಸಾಹದಲ್ಲಿ ಜೆಡಿಎಸ್ ಪಕ್ಷವಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಪಿ ರೇಣುಕಾಚಾರ್ಯ ಅವರು ಅಂಚೆ ಮತ ಎಣಿಕೆಯಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿರುವ ಡಿಜಿ ಶಾಂತನಗೌಡ ಮುನ್ನಡೆ ಪಡೆದಿದ್ದಾರೆ.
ಇನ್ನು ರಾಜ್ಯದ ಹೈ-ವೋಲ್ಟೇಜ್ ಮತ್ತು ಪ್ರತಿಷ್ಠೆಯ ಕಣಗಳಲ್ಲಿ ಒಂದಾಗಿರುವ ಹೊನ್ನಾಳಿ ಕ್ಷೇತ್ರದಲ್ಲಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಸ್ಪರ್ಧಿಸಿರುವುದು ರಾಜ್ಯದ ಗಮನ ಸೆಳೆದಿದೆ. ತುಂಗಭದ್ರಾ ನದಿ ತೀರದ ಕ್ಷೇತ್ರದಲ್ಲಿ ಮತದಾರ ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ಪರ್ಧಿಸಿದ್ದರೆ, ಕಾಂಗ್ರೆಸ್ನಿಂದ ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಎದುರಾಳಿಯಾಗಿ ಕಣಕ್ಕಿಳಿದಿದ್ದಾರೆ. ಕುಂಕೋವ ಕೃಷ್ಣಪ್ಪ ಅವರು ಬಿಎಸ್ಪಿಯಿಂದ ಅಖಾಡಕ್ಕಿಳಿದಿದ್ದಾರೆ. ಎಎಪಿಯಿಂದ ನರಸಿಂಹಪ್ಪ ಕೆ ಸ್ಪರ್ಧೆ ಮಾಡಿದ್ದಾರೆ.
2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ 80,624 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಡಿ.ಜಿ. ಶಾಂತನಗೌಡ 76,391 ಮತಗಳನ್ನು ಪಡೆದಿದ್ದರು. ಆಗ ಎಂ.ಪಿ. ರೇಣುಕಾಚಾರ್ಯ ಗೆಲುವಿನ ಅಂತರ 4233 ಮತಗಳಾಗಿತ್ತು.

ಇನ್ನು 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಡಿ.ಜಿ. ಶಾಂತನಗೌಡ ಹೊನ್ನಾಳಿ ಕ್ಷೇತ್ರದಲ್ಲಿ ಗೆದ್ದಿದ್ದರು. ಆಗ ಬಿಜೆಪಿಯಿಂದ ಹೊರ ಹೋಗಿ ಕೆಜೆಪಿ ಸೇರಿದ್ದ ಎಂ.ಪಿ. ರೇಣುಕಾಚಾರ್ಯ ಎರಡನೇ ಸ್ಥಾನ ಪಡೆದಿದ್ದರು.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 1,90,715 ಅರ್ಹ ಮತದಾರರಿದ್ದು, ಅದರಲ್ಲಿ 96,566 ಪುರುಷರು, 94,145 ಮಹಿಳೆಯರು ಮತ್ತು 4 ತೃತೀಯ ಲಿಂಗಿ ಮತದಾರರಿದ್ದಾರೆ. 2023ರ ಚುನಾವಣೆಯಲ್ಲಿ ಹೊನ್ನಾಳಿ ಕ್ಷೇತ್ರದಲ್ಲಿ ಶೇ.84.21ರಷ್ಟು ಮತದಾನವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications