ಹೊನ್ನಾಳಿ ಕ್ಷೇತ್ರದ ಚುನಾವಣಾ ಫಲಿತಾಂಶ 2023: ಎಂಪಿ ರೇಣುಕಾಚಾರ್ಯ ಹಿನ್ನಡೆ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು (ಶನಿವಾರ, ಮೇ 13) ಪ್ರಕಟವಾಗುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುವ ಆಶಾವಾದದಲ್ಲಿದ್ದರೆ, ಅತಂತ್ರವಾದರೆ ತಾನೇ ಕಿಂಗ್ ಮೇಕರ್ ಎನ್ನುವ ಉತ್ಸಾಹದಲ್ಲಿ ಜೆಡಿಎಸ್ ಪಕ್ಷವಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂಪಿ ರೇಣುಕಾಚಾರ್ಯ ಅವರು ಅಂಚೆ ಮತ ಎಣಿಕೆಯಲ್ಲಿ ಹಿನ್ನಡೆ ಸಾಧಿಸಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿರುವ ಡಿಜಿ ಶಾಂತನಗೌಡ ಮುನ್ನಡೆ ಪಡೆದಿದ್ದಾರೆ.
ಇನ್ನು ರಾಜ್ಯದ ಹೈ-ವೋಲ್ಟೇಜ್ ಮತ್ತು ಪ್ರತಿಷ್ಠೆಯ ಕಣಗಳಲ್ಲಿ ಒಂದಾಗಿರುವ ಹೊನ್ನಾಳಿ ಕ್ಷೇತ್ರದಲ್ಲಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಸ್ಪರ್ಧಿಸಿರುವುದು ರಾಜ್ಯದ ಗಮನ ಸೆಳೆದಿದೆ. ತುಂಗಭದ್ರಾ ನದಿ ತೀರದ ಕ್ಷೇತ್ರದಲ್ಲಿ ಮತದಾರ ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಹಾಲಿ ಶಾಸಕ ಎಂ.ಪಿ. ರೇಣುಕಾಚಾರ್ಯ ಸ್ಪರ್ಧಿಸಿದ್ದರೆ, ಕಾಂಗ್ರೆಸ್ನಿಂದ ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಎದುರಾಳಿಯಾಗಿ ಕಣಕ್ಕಿಳಿದಿದ್ದಾರೆ. ಕುಂಕೋವ ಕೃಷ್ಣಪ್ಪ ಅವರು ಬಿಎಸ್ಪಿಯಿಂದ ಅಖಾಡಕ್ಕಿಳಿದಿದ್ದಾರೆ. ಎಎಪಿಯಿಂದ ನರಸಿಂಹಪ್ಪ ಕೆ ಸ್ಪರ್ಧೆ ಮಾಡಿದ್ದಾರೆ.
2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯ ಎಂ.ಪಿ. ರೇಣುಕಾಚಾರ್ಯ 80,624 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ನಿಂದ ಸ್ಪರ್ಧಿಸಿದ್ದ ಡಿ.ಜಿ. ಶಾಂತನಗೌಡ 76,391 ಮತಗಳನ್ನು ಪಡೆದಿದ್ದರು. ಆಗ ಎಂ.ಪಿ. ರೇಣುಕಾಚಾರ್ಯ ಗೆಲುವಿನ ಅಂತರ 4233 ಮತಗಳಾಗಿತ್ತು.

ಇನ್ನು 2013ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಡಿ.ಜಿ. ಶಾಂತನಗೌಡ ಹೊನ್ನಾಳಿ ಕ್ಷೇತ್ರದಲ್ಲಿ ಗೆದ್ದಿದ್ದರು. ಆಗ ಬಿಜೆಪಿಯಿಂದ ಹೊರ ಹೋಗಿ ಕೆಜೆಪಿ ಸೇರಿದ್ದ ಎಂ.ಪಿ. ರೇಣುಕಾಚಾರ್ಯ ಎರಡನೇ ಸ್ಥಾನ ಪಡೆದಿದ್ದರು.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ದಾವಣಗೆರೆ ಹೊನ್ನಾಳಿ ಕ್ಷೇತ್ರದಲ್ಲಿ ಒಟ್ಟು 1,90,715 ಅರ್ಹ ಮತದಾರರಿದ್ದು, ಅದರಲ್ಲಿ 96,566 ಪುರುಷರು, 94,145 ಮಹಿಳೆಯರು ಮತ್ತು 4 ತೃತೀಯ ಲಿಂಗಿ ಮತದಾರರಿದ್ದಾರೆ. 2023ರ ಚುನಾವಣೆಯಲ್ಲಿ ಹೊನ್ನಾಳಿ ಕ್ಷೇತ್ರದಲ್ಲಿ ಶೇ.84.21ರಷ್ಟು ಮತದಾನವಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications