ಹೊನ್ನಾಳಿ ಮಾಜಿ ಶಾಸಕ ಶಾಂತನಗೌಡ ಮಹಿಳೆಯರ ಕ್ಷಮೆಯಾಚಿಸಿದ್ದು ಯಾಕೆ?
ದಾವಣಗೆರೆ, ಜೂನ್ 17: ಕೋವಿಡ್ ಕೇರ್ ಸೆಂಟರ್ನಲ್ಲಿ ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಯಾರ್ಯಾರ ಜೊತೆಗೆ ಮಲಗುತ್ತಾರೋ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ನ ಮಾಜಿ ಶಾಸಕ ಶಾಂತನಗೌಡರನ್ನು ತರಾಟೆಗೆ ತೆಗೆದುಕೊಂಡ ಘಟನೆ ಹೊನ್ನಾಳಿ ತಾಲೂಕಿನ ಅರಬಗಟ್ಟೆಯ ಕೋವಿಡ್ ಕೇರ್ ಸೆಂಟರ್ನಲ್ಲಿ ನಡೆದಿದೆ.
ಕೋವಿಡ್ ಸೆಂಟರ್ಗೆ ಬಂದ ಮಾಜಿ ಶಾಸಕ ಶಾಂತನಗೌಡ, ಸೋಂಕಿತರಿಗೆ ಹಣ್ಣು ನೀಡಲು ಮುಂದಾದರು. ಈ ವೇಳೆ ಸೋಂಕಿತರು ಪಡೆಯಲು ನಿರಾಕರಿಸಿದರು. ಮತ್ತೆ ಒತ್ತಾಯಪೂರ್ವಕವಾಗಿ ನೀಡಲು ಮುಂದಾದಾಗ ಮಹಿಳೆಯರ ಸಿಟ್ಟು ನೆತ್ತಿಗೇರಿತು.
ಕೋವಿಡ್ ಕೇರ್ ಸೆಂಟರ್ನಲ್ಲಿ ವಾಸ್ತವ್ಯ ಹೂಡಿದ್ದ ಶಾಸಕ ಎಂ.ಪಿ. ರೇಣುಕಾಚಾರ್ಯ ಬಗ್ಗೆ ಶಾಂತನಗೌಡ ಅವಹೇಳನಕಾರಿಯಾದ ಹೇಳಿಕೆ ನೀಡಿದ್ದರು. ಅಲ್ಲದೇ, ಎಲ್ಲೆಲ್ಲೋ ಮಲಗುತ್ತಾರೆ, ಯಾರ್ಯಾರ ಜೊತೆ ಮಲಗುತ್ತಾರೋ ಎಂಬ ಮಾತು ಹೇಳಿದ್ದರು. ಇದನ್ನು ರೇಣುಕಾಚಾರ್ಯ ಖಂಡಿಸಿದ್ದರು. ಸೋಂಕಿತರು ಸಹ ಆಕ್ರೋಶ ವ್ಯಕ್ತಪಡಿಸಿದ್ದರು.

ಕೋವಿಡ್ ಕೇರ್ ಸೆಂಟರ್ಗೆ ಡಿ.ಜೆ. ಶಾಂತನಗೌಡ ಬರುತ್ತಿದ್ದಂತೆ ಮಹಿಳೆಯರು ಸಿಟ್ಟಿಗೆದ್ದು ತರಾಟೆಗೆ ತೆಗೆದುಕೊಂಡರು. ಮಾಜಿ ಶಾಸಕರು ಬರುತ್ತಿದ್ದಂತೆ ಶಾಸಕ ರೇಣುಕಾಚಾರ್ಯ ಅವರ ಜನಸೇವೆಯನ್ನು ಸಹಿಸದೆ ಕೀಳು ಮಟ್ಟದಲ್ಲಿ ಮಾತನಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಮಹಿಳೆಯರು ಪ್ರಶ್ನಿಸುತ್ತಿದ್ದಂತೆ ಶಾಂತನಗೌಡ ಅವರು ಮಹಿಳೆಯರ ಕ್ಷಮೆಯಾಚಿಸಿದರು.

"ಸೋಂಕಿತರಿಗೆ ಹಣ್ಣು ನೀಡಲು ಮುಂದಾದರೂ ನಮಗೆ ಬೇಡ ಎಂದು ಸೋಂಕಿತರು ಹೇಳಿದರು. ಶಾಸಕರಿಲ್ಲದಾಗ ಕೋವಿಡ್ ಕೇರ್ ಸೆಂಟರ್ಗೆ ಬಂದ್ರಾ. ಇಷ್ಟು ದಿನ ನಾವು ಹೇಗಿದ್ದೀವಿ ಎಂಬುದನ್ನು ವಿಚಾರಿಸಲು ಬಂದಿರಲಿಲ್ಲ. ನಮಗೆ ಯೋಗ, ವ್ಯಾಯಾಮ, ಒಳ್ಳೆಯ ಊಟ, ನೀರಿನ ವ್ಯವಸ್ಥೆ ಸೇರಿದಂತೆ ನಾವೆಲ್ಲರೂ ಚೆನ್ನಾಗಿದ್ದೇವೆ. ಮಹಿಳೆಯರ ಬಗ್ಗೆ ನೀವು ಎಷ್ಟು ಕೆಟ್ಟದಾಗಿ ಮಾತನಾಡಿದ್ದೀರಾ. ನಿಮ್ಮಂತವರಿಗೆ ಶೋಭೆ ತರುವುದಿಲ್ಲ,'' ಎಂದು ಮಹಿಳೆಯರು ಕೆಂಡಾಮಂಡಲರಾದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ












Click it and Unblock the Notifications