ದಾವಣಗೆರೆ; ನೀರು, ಆಹಾರವಿಲ್ಲದೇ ರಸ್ತೆಯಲ್ಲೇ ಕಾದು ಕುಳಿತಿವೆ ಮಂಗಗಳು
ದಾವಣಗೆರೆ, ಏಪ್ರಿಲ್ 23: ಅಂಗಡಿಗಳ ಮುಂದೆ ಇಟ್ಟಿರುವ ಹಣ್ಣುಗಳನ್ನು ಹೊತ್ತೊಯ್ದು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕೋತಿಗಳು ಇದೀಗ ನೀರು ಮತ್ತು ಆಹಾರವಿಲ್ಲದೆ ಪರದಾಡುತ್ತಿರುವ ದೃಶ್ಯ ನಗರದ ಪ್ರಮುಖ ರಸ್ತೆಗಳಲ್ಲಿ ಕಂಡುಬರುತ್ತಿದೆ. ಲಾಕ್ಡೌನ್ನಿಂದಾಗಿ ಮನುಷ್ಯನೇ ಆಹಾರ ಗಿಟ್ಟಿಸಿಕೊಳ್ಳುವುದು ಕಷ್ಟವಾಗಿರುವ ಈ ಪರಿಸ್ಥಿತಿಯಲ್ಲಿ, ಕೋತಿಗಳು ಹಸಿವು ತಾಳಲಾರದೆ ರಸ್ತೆಯಲ್ಲಿ ಆಹಾರಕ್ಕೆ ಕಾದು ಕುಳಿತಿರುವ ದೃಶ್ಯ ಮನಕಲುಕುವಂತಿದೆ.
ಜಿಲ್ಲೆಯಲ್ಲಿ ಲಾಕ್ಡೌನ್ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳು ಬಿಕೋ ಎನ್ನುತ್ತಿವೆ. ಇಂದು ಲಾಕ್ ಡೌನ್ ಸಡಿಲಿಸಿದ ಕಾರಣ ಬಡಾವಣೆಗಳ ರಸ್ತೆಗಳಲ್ಲಿ ಆಗೊಂದು ಈಗೊಂದು ಬೈಕ್ ಗಳ ಸಂಚಾರ ಕಂಡುಬಂದಿತ್ತು. ಇದನ್ನು ಕಂಡು ಕೋತಿಗಳು ತಮಗೆ ಯಾರಾದರೂ ಆಹಾರ ನೀಡುತ್ತಾರೆ ಎಂದು ಅತ್ತಿಂದಿತ್ತ ಓಡಾಡುತ್ತಿದ್ದ ದೃಶ್ಯವೂ ಕಂಡುಬಂತು.

ಕೋತಿಗಳು ಆಹಾರಕ್ಕಾಗಿ ಹೋಟೆಲ್ ಮುಂಭಾಗ, ಹಣ್ಣು ಮಾರಾಟ ಮಳಿಗೆ ಮತ್ತು ದೇವಸ್ಥಾನಗಳ ಬಳಿ ವಾಸ ಮಾಡಿಕೊಂಡು ಅಲ್ಲಿ ಬರುವ ಭಕ್ತರಿಂದ ಆಹಾರವನ್ನು ಪಡೆಯುತ್ತಿದ್ದವು. ದೇವಸ್ಥಾನಗಳಿಗೆ ಬರುವ ಭಕ್ತರು ಸಹ ಕೋತಿಗಳನ್ನು ಕಂಡು ಬಾಳೆಹಣ್ಣು, ಕಾಯಿ, ಪ್ರಸಾದವನ್ನು ಕೋತಿಗಳಿಗೆ ನೀಡುತ್ತಿದ್ದರು. ಆದರೆ ಕೊರೊನಾ ಸೋಂಕು ತಡೆಯಲು ರಾಜ್ಯವೇ ಲಾಕ್ಡೌನ್ ಆಗಿರುವುದರಿಂದ ಯಾರೂ ಹೊರಗೆ ಬರುವಂತಿಲ್ಲ. ಹೀಗಾಗಿ ಕೋತಿಗಳಿಗೂ ಆಹಾರ ದೊರಕದಂತಾಗಿದೆ.
ಈ ಮೂಕ ಪ್ರಾಣಿಗಳಿಗೆ ಜಿಲ್ಲಾಡಳಿತ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ನೀರು ಮತ್ತು ಆಹಾರವನ್ನು ಒದಗಿಸಿ ರಕ್ಷಿಸುವ ಕೆಲಸ ನಡೆಯಬೇಕಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications