ದಲಿತನಾಗಿರುವುದಕ್ಕೆ 3 ಬಾರಿ ಸಿಎಂ ಪಟ್ಟ ಕೈತಪ್ಪಿತು: ಪರಮೇಶ್ವರ್
ದಾವಣಗೆರೆ, ಫೆಬ್ರವರಿ 25: 'ನಾನು ದಲಿತ ಎಂಬ ಕಾರಣಕ್ಕೆ ಮುರು ಬಾರಿ ಮುಖ್ಯಮಂತ್ರಿ ಹುದ್ದೆ ಕಳೆದುಕೊಂಡೆ' ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯಲ್ಲಿ ಭಾನುವಾರ ಕಾರ್ಯಕ್ರಮವೊಂದನ್ನುದ್ದೇಶಿಸಿ ಮಾತನಾಡುತ್ತಿದ್ದ ಪರಮೇಶ್ವರ್, "ನಾನು ದಲಿತ ಸಮುದಾಯಕ್ಕೆ ಸೇರಿದವನಾಗಿರುವ ಕಾರಣ ಮೂರು ಬಾರು ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಪಿಕೆ ಬಸವಲಿಂಗಪ್ಪ, ಕೆ ಎಚ್ ರಂಗನಾಥ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಮುಖ್ಯಮಂತ್ರಿ ಹುದ್ದೆ ಕೈತಪ್ಪಿತು. ಏನೇ ಆಗಲಿ, ನನ್ನನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಿದರು" ಎಂದು ಪರಂ ಹೇಳಿದ್ದರು.

ಕಾಂಗ್ರೆಸ್ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಜಿ ಪರಮೇಶ್ವರ್ ಅವರು ಕೊರಟಗೆರೆಯಲ್ಲಿ ಸೋಲನುಭವಿಸಲು ಮತ್ತು ಅವರಿಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಲು ಸಿದ್ದರಾಮಯ್ಯ ಅವರೇ ಕಾರಣ ಎನ್ನಲಾಗಿತ್ತು. ಆದರೆ ಹೊಸ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗುವಂತೆ ಒತ್ತಾಯಿಸಿದ್ದೇ ನಾವು. ನಮ್ಮ ನಡುವೆ ಯಾವುದೇ ಕಂದಕ ಇರಲಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದರು. ಆದರೆ ಇದೀಗ ಪರಮೇಶ್ವರ್ ನೀಡಿದ ಹೇಳಿಕೆ ಕಾಂಗ್ರೆಸ್ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.












Click it and Unblock the Notifications