ನಾನೇ ದಾವಣಗೆರೆ ಲೋಕಸಭೆಗೆ ಬಿಜೆಪಿ ಅಭ್ಯರ್ಥಿ ನನಗೆ ಟಿಕೆಟ್ ಸಿಗುತ್ತೆ: ಸಂಸದ ಜಿ.ಎಂ. ಸಿದ್ದೇಶ್ವರ
ದಾವಣಗೆರೆ, ಆಗಸ್ಟ್ 29: ಮುಂಬರುವ 2024ರ ಲೋಕಸಭೆ ಚುನಾವಣೆಗೆ ದಾವಣಗೆರೆಯಿಂದ ಬಿಜೆಪಿಯ ಅಭ್ಯರ್ಥಿ ನಾನೇ. ನನಗೆ ಟಿಕೆಟ್ ನೀಡುವ ವಿಶ್ವಾಸ ಇದೆ. ಹೊನ್ನಾಳಿ ಮಾಜಿ ಶಾಸಕ ಎಂ. ಪಿ. ರೇಣುಕಾಚಾರ್ಯ ಪ್ರಬಲ ಟಿಕೆಟ್ ಆಕಾಂಕ್ಷಿ ಎಂದೇಳಿರುವ ಬಗ್ಗೆ ನನಗೆ ಗೊತ್ತಿಲ್ಲ ಎಂದು ಸಂಸದ ಜಿ. ಎಂ. ಸಿದ್ದೇಶ್ವರ ಹೇಳಿದರು.
ಜಿಎಂಐಟಿ ವಸತಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯ ಹೇಳಿಕೆ ಕುರಿತಂತೆ ನನ್ನನ್ನು ಏನೂ ಕೇಳಬೇಡಿ. ಅವರ ಅಭಿಪ್ರಾಯ ಹೇಳಿರುತ್ತಾರೆ. ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಎಲ್ಲರ ಜೊತೆ ಚೆನ್ನಾಗಿದ್ದೇನೆ. ವಿನಾಕಾರಣ ತಿಕ್ಕಾಟ ತಂದಿಡಬೇಡಿ ಎಂದು ಹೇಳಿದರು.

ಗೆದ್ದವನು ಸೋಲ್ತಾನೆ, ಸೋತವನು ಗೆಲ್ತಾನೆ. ನಾಲ್ಕು ಬಾರಿ ಸಂಸದನಾಗಿ ಆಯ್ಕೆಯಾಗಿದ್ದಾನೆ. ಜನಸೇವೆ ಮಾಡಿದ್ದೇನೆ. ಮುಂದಿನ ಬಾರಿಯೂ ಜನರು ಆಶೀರ್ವಾದ ಮಾಡಿದರೆ ಜನಸೇವೆ ಮಾಡುತ್ತೇನೆ. ಚುನಾವಣೆ ಹತ್ತಿರ ಬರುತ್ತಿದೆ. ಇದಕ್ಕೆ ತಯಾರಿ ನಡೆಯುತ್ತಿದೆ. ಎಲ್ಲಾ ಕಡೆ ಓಡಾಡುತ್ತಿದ್ದೇನೆ. ನಾನು ಹೊಂದಾಣಿಕೆ ಹಾಗೂ ಸಾಫ್ಟ್ ರಾಜಕಾರಣ ಎಂದಿಗೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ತಿಳಿಸಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುವವರು ಆಗಲಿ. ಪಕ್ಷ ಬಿಟ್ಟು ಹೋಗುವವರನ್ನು ಮನವೊಲಿಸುವ ಕೆಲಸ ಮಾಡುತ್ತೇನೆ. ಪಕ್ಷದಲ್ಲಿ ಎಲ್ಲಾ ರೀತಿಯ ಅವಕಾಶಗಳಿವೆ. ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ನಾವು ಸೋತಿರಬಹುದು. ಸೋತವನು ಗೆಲ್ಲುತ್ತಾನೆ, ಗೆದ್ದವನು ಸೋಲುತ್ತಾನೆ ಎಂಬ ಮಾತು ಸಹಜ. ಚುನಾವಣೆ ಎಂದ ಮೇಲೆ ಸೋಲು ಗೆಲುವ ಸಹಜ. ಎರಡನ್ನೂ ಸಮಾನವಾಗಿ ಸ್ವೀಕರಿಸಬೇಕು ಎಂದರು.
ಕೇಂದ್ರ ಸರ್ಕಾರವು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶ ಗುರುತಿಸಿ ಘೋಷಿಸಿದ ಬಳಿಕ ಕೇಂದ್ರದ ಎನ್ಡಿಎಫ್ ಈ ಬಗ್ಗೆ ಪರಿಶೀಲಿಸುತ್ತದೆ. ಆ ನಂತರ ನೆರವು ನೀಡುತ್ತದೆ. ಮೊದಲು ರಾಜ್ಯ ಸರ್ಕಾರ ಈ ಬಗ್ಗೆ ನಿರ್ಧಾರ ಮಾಡಬೇಕು ಎಂದು ಸಂಸದ ಸಿದ್ದೇಶ್ವರ ತಿಳಿಸಿದರು.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿವೇಶನ ಹಂಚಿಕೆ ವಿಚಾರವಾಗಿ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಕಾಮಗಾರಿ ಸೇರಿದಂತೆ ಎಲ್ಲವನ್ನೂ ಮಾಡಿದ್ದು ಶಾಸಕರು. ದಾವಣಗೆರೆ ಉತ್ತರ ಕ್ಷೇತ್ರದಲ್ಲಿ ಶಾಸಕರಾಗಿದ್ದ ಎಸ್. ಎ. ರವೀಂದ್ರನಾಥ್ ಹಾಗೂ ಮಲ್ಲಿಕಾರ್ಜುನ್ ಉತ್ತಮ ಸ್ನೇಹಿತರು. ಕುಂದುವಾಡ ಕೆರೆ ಅಭಿವೃದ್ಧಿಪಡಿಸಿದ್ದು ರವೀಂದ್ರನಾಥ್ ಅವರು ಶಾಸಕರಾಗಿದ್ದಾಗ. ಅವರನ್ನೇ ಕೇಳಲಿ. ಸಂಸದರು ಈ ಕೆಲಸ ಮಾಡುವುದಿಲ್ಲ. ನನ್ನ ವ್ಯಾಪ್ತಿಯಲ್ಲಿ ಬರುವಷ್ಟೇ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಬಿಜೆಪಿ ಸಂಸದೀಯ ಮಂಡಳಿಯ ರಾಷ್ಟ್ರ ಕಾರ್ಯಕಾರಿಣಿ ಸದಸ್ಯರಿದ್ದಾರೆ. ಅವರನ್ನು ಸೈಡ್ ಲೈನ್ ಮಾಡುವ ಪ್ರಶ್ನೆಯೇ ಇಲ್ಲ. ಟಿಕೆಟ್ ನೀಡುವ ಸಮಿತಿಯಲ್ಲಿದ್ದಾರೆ ಎಂದರೆ ಅವರನ್ನು ಕಡೆಗಣಿಸಿದ ರೀತಿನಾ? ಆ ರೀತಿ ಏನೂ ಇಲ್ಲ. ಅವರ ಮಾರ್ಗದರ್ಶನ ಈಗಲೂ ಇದೆ ಎಂದು ಹೇಳಿದರು.
-
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications