ಕ್ಷತ್ರಿಯ ಮರಾಠರೇ, ಬೆಂಗಳೂರು ಚಲೋಗೆ ಸಿದ್ಧರಾಗಿ; ಸಿಂಧ್ಯಾ
ಮರಾಠ ಸಮಾಜದವರನ್ನು 3 ಎ ಯಿಂದ 2ಎಗೆ ಸೇರಿಸಬೇಕೆಂದು ಒತ್ತಾಯಿಸಿ, ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಮರಾಠ ಸಮಾಜದವರು ಸಿದ್ದರಾಗಬೇಕೆಂದು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಸೇರಿದಂತೆ ಅನೇಕ ಮುಖಂಡರು ಒಕ್ಕೊರಲಿನ ಕರೆ ನೀಡಿದರು.
ಚನ್ನಗಿರಿ, ಜನವರಿ 25: ಮರಾಠ ಸಮಾಜದವರನ್ನು 3 ಎ ಯಿಂದ 2ಎಗೆ ಸೇರಿಸಬೇಕೆಂದು ಒತ್ತಾಯಿಸಿ, 'ಬೆಂಗಳೂರು ಚಲೋ' ಕಾರ್ಯಕ್ರಮಕ್ಕೆ ಮರಾಠ ಸಮಾಜದವರು ಸಿದ್ದರಾಗಬೇಕೆಂದು ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ ಸೇರಿದಂತೆ ಅನೇಕ ಮುಖಂಡರು ಒಕ್ಕೊರಲಿನ ಕರೆ ನೀಡಿದರು.
ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯಲ್ಲಿ ನಡೆದ ಶಿವಾಜಿ ಮಹಾರಾಜರ ತಂದೆ ಷಹಾಜಿ ಮಹಾರಾಜರ 353 ನೇ ಪುಣ್ಯತಿಥಿ ಸಮಾರಂಭದಲ್ಲಿ ಸಿಂಧ್ಯಾ ಈ ರೀತಿ ಹೇಳಿದರು.
ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ,ರಾಜಕೀಯವಾಗಿ ಹಿಂದುಳಿದಿರುವ ಮರಾಠ ಸಮಾಜಕ್ಕೆ ರಾಜಕೀಯದಲ್ಲಿ ಸ್ಥಾನ-ಮಾನ ಸಿಕ್ಕಾಗ ಮಾತ್ರ ವಿಧಾನಸಭೆಯಲ್ಲಿ ನಮ್ಮ ಸಮಾಜಕ್ಕೆ ಆಗುತ್ತಿರುವ ಅನ್ಯಾಯ, ವಂಚನೆಯನ್ನು ಸರ್ಕಾರದ ಗಮನಕ್ಕೆ ತರಲು ಸಾಧ್ಯ ಎಂದರು.

ಶಿವಾಜಿಯಾಗಲೀ, ಷಹಾಜಿಯಾಗಲೀ ಯಾವುದೇ ಒಂದು ಜಾತಿಗೆ ಸೀಮಿತವಾಗಿರಲಿಲ್ಲ. ಎಲ್ಲಾ ವರ್ಗದ ಜನರ ಕಲ್ಯಾಣಕ್ಕಾಗಿ ಶ್ರಮಿಸಿದ್ದರು. ರಾಜ್ಯದಲ್ಲಿರುವ 40 ಲಕ್ಷ ಜನ ಮರಾಠಿಗರು ಕನ್ನಡಿಗರೊಂದಿಗೆ ನೆಮ್ಮದಿಯಿಂದ ಜೀವಿಸುತ್ತಿದ್ದಾರೆ ಎಂದರು.
ಮರಾಠರ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಾಗುವಂತೆ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕೆಂದು ಮುಖಂಡ ರಣಧೀರ ರಾವ್ ಪಾಠೆ ಅವರು ಸರ್ಕಾರಕ್ಕೆ ಆಗ್ರಹಪಡಿಸಿದರು.
353 ವರ್ಷಗಳ ಹಿಂದೆ ಷಹಾಜಿ ಮಹಾರಾಜರು ಪ್ರಾಣ ತ್ಯಾಗ ಮಾಡಿದ್ದರು. ಇನ್ನೂ ಅವರನ್ನು ನಾವು ಸ್ಮರಿಸುತ್ತಿರುವುದಕ್ಕೆ ಅವರ ಶೂರತನ, ಧೀರ ನಡೆ, ದೂರದೃಷ್ಟಿ ಕಾರಣವಾಗಿದೆ. ಯಾವುದೇ ಸರ್ಕಾರ ಬಂದರೂ, ಷಹಾಜಿ ಮಹಾರಾಜರ ಸಮಾಧಿ ಸ್ಥಳವನ್ನು
ನಿರೀಕ್ಷಿಸಿದಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಐತಿಹಾಸಿಕ ಸ್ಥಳವಾದ ಹೊದಿಗೆರೆಯನ್ನು ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ. ಹೊದಿಗೆರೆಯಲ್ಲಿ ಸೈನಿಕ ಶಾಲೆ, ಮೂಸಿಯಂ ಸ್ಥಾಪಿಸಲು ಸರ್ಕಾರ ಮುಂದಾಗಬೇಕೆಂದು ಮುಖಂಡರಾದ ಶಾಂತಕುಮಾರ್ ಅವರು ಹೇಳಿದರು.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications