ದಾವಣಗೆರೆ: ಪಾಲಿಕೆ ತೆರಿಗೆ ಪರಿಷ್ಕರಣೆ ಮಾಡುವಂತೆ ಒತ್ತಾಯ
ದಾವಣಗೆರೆ, ಮೇ 29: ದಾವಣಗೆರೆ ಮಹಾನಗರ ಪಾಲಿಕೆಯು ಕಂದಾಯ ಪರಿಷ್ಕರಣೆಯನ್ನು ಮುಂದೂಡಿ, ಈ ಮೊದಲಿದ್ದಂತೆ ಕಂದಾಯ ಪಾವತಿಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿ ಪಾಲಿಕೆ ವಿಪಕ್ಷ ನಾಯಕ ಎ.ನಾಗರಾಜ್ ನೇತೃತ್ವದಲ್ಲಿ ಆಯುಕ್ತ ವಿಶ್ವನಾಥ್ ಮುದ್ದಜ್ಜಿ ಅವರಿಗೆ ಮನವಿ ಸಲ್ಲಿಸಿದರು.
ದಾವಣಗೆರೆ ಮಹಾನಗರ ಪಾಲಿಕೆ ಮುಂಭಾಗದಲ್ಲಿ ಮಹಾನಗರ ಪಾಲಿಕೆಯ ವಿಪಕ್ಷ ಸದಸ್ಯರು ಮನವಿ ಸಲ್ಲಿಸಿದರು. ಪಾಲಿಕೆಯಲ್ಲಿ ಸರ್ವ ಸದಸ್ಯರ ಸಭೆ ಕರೆದು ಕಂದಾಯ ಪರಿಷ್ಕರಣೆ ಮಾಡುವ ನಿಯಮವಿದೆ. ಈ ಬಗ್ಗೆ ಚರ್ಚಿಸಿ ಜನ ಸಾಮಾನ್ಯರಿಗೂ, ಸರ್ಕಾರಕ್ಕೂ ಸೂಕ್ತ ಕಂದಾಯ ಬರುವ ರೀತಿಯಲ್ಲಿ ನಿರ್ಧಾರ ತೆಗೆದುಕೋಳ್ಳಬೇಕು ಎಂದರು.
ಆದರೆ ಪಾಲಿಕೆ ಸದಸ್ಯರನ್ನು ಕಡೆಗಣಿಸಿ ಪಾಲಿಕೆ ಆಡಳಿತಾಧಿಕಾರಿಗಳಾಗಿದ್ದ ಜಿಲ್ಲಾಧಿಕಾರಿಗಳು ಅವೈಜ್ಞಾನಿಕವಾಗಿ ಕಂದಾಯ ಪರಿಷ್ಕರಣೆ ಮಾಡಿದ್ದಾರೆ. ಇದಕ್ಕೆ ಸರ್ಕಾರದ ಮಟ್ಟದಲ್ಲಿ ಅನುಮೋದನೆ ಸಹ ದೊರಕಿದೆ. ಏಕಾಏಕಿ ಕಂದಾಯವನ್ನು ಶೇ.18 ರಷ್ಟು ವಸತಿಗೆ ಹಾಗೂ ಶೇ.24 ರಷ್ಟು ವಾಣಿಜ್ಯ ಮಳಿಗೆಗಳಿಗೆ ದರ ಏರಿಕೆ ಮಾಡಲಾಗಿದೆ ಇದು ಖಂಡನೀಯವಾಗಿದೆ ಎಂದು ವಿಪಕ್ಷ ಸದಸ್ಯರು ತಿಳಿಸಿದರು.

ಕೊರೊನಾ ವೈರಸ್ ನಿಂದಾಗಿ ಕಳೆದ 2 ತಿಂಗಳು ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡು ಜನರು ಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಜಿಲ್ಲಾಧಿಕಾರಿಗಳ ಈ ನಿರ್ಣಯದಿಂದ ಜನತೆಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಹೇಳಿದರು.
ಆದ್ದರಿಂದ ಕಂದಾಯ ಪರಿಷ್ಕರಣೆ ಕೈಬಿಟ್ಟು ಹಳೇ ಕಂದಾಯವನ್ನು ಪಾವತಿಸಲು ಅನುಮತಿ ನೀಡಬೇಕು ಎಂದು ವಿಪಕ್ಷದ ಸದಸ್ಯರು ಒತ್ತಾಯಿಸಿದರು. ಈ ವೇಳೆ ಮಂಜುನಾಥ್ ಗಡಿಗುಡಾಳ್, ಸುಧಾ, ಶಿವಲೀಲ, ಆಶಾ ಸೇರಿದಂತೆ ಪಾಲಿಕೆಯ ವಿಪಕ್ಷ ಸದಸ್ಯರಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications