ದಾವಣಗೆರೆಯ ಪ್ರತಿ ತಾಲ್ಲೂಕು ಕೇಂದ್ರದಲ್ಲೂ ಐಸೋಲೇಶನ್ ವಾರ್ಡ್
ದಾವಣಗೆರೆ. ಏಪ್ರಿಲ್ 24: ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಸಿಜಿ ಆಸ್ಪತ್ರೆಯ ಐಸೋಲೇಶನ್ ವಾರ್ಡ್ ಗಳು, ಲ್ಯಾಬ್, ಗಂಟಲು ದ್ರವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ್ದರು. ಜಿಲ್ಲೆಯಲ್ಲಿ ಯಾವುದೇ ಕೊರಾನಾ ಸೋಂಕಿತರು ಕಂಡುಬಂದಿಲ್ಲ, ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಪ್ರತಿ ತಾಲ್ಲೂಕು ಕೇಂದ್ರಗಳಲ್ಲೂ ಐಸೋಲೇಶನ್ ವಾರ್ಡ್ ಗಳನ್ನು ಸಿದ್ದತೆ ಮಾಡಬೇಕು. ಹೆಚ್ಚುವರಿಯಾಗಿ 110 ಬೆಡ್ ಗಳನ್ನು ಮೀಸಲಿಡಬೇಕೆಂದರು. ದಾವಣಗೆರೆ ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷಾ ಲ್ಯಾಬ್ ಪ್ರಾರಂಭಿಸುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಈಗಾಗಲೇ ತಿಳಿಸಿದ್ದಾರೆ.

ಸಚಿವರ ಸೂಚನೆ ಮೇರೆಗೆ ಪ್ರಯೋಗಾಲಯ ಪ್ರಾರಂಭಿಸುವ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು, ಆಸ್ಪತ್ರೆಗೆ ಬರುವವರಿಗೆ ಫ್ಯಾನ್ ಮೂಲಕ ಸ್ಯಾನಿಟೈಸರ್ ಮಾಡುತ್ತಿರುವ ಕ್ರಮ ಉತ್ತಮವಾಗಿದೆ. ಸ್ಯಾನಿಟೈಸರ್ ಫ್ಯಾನ್ ನೂತನ ಪ್ರಯೋಗವಾಗಿದ್ದು, ಪ್ರತಿಯೊಬ್ಬರಿಗೂ ಸ್ಯಾನಿಟೈಸ್ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಡಿಹೆಚ್ಒ ರಾಘವೇಂದ್ರ ಸ್ವಾಮಿ, ಜಿಲ್ಲಾಸ್ಪತ್ರೆ ಅಧೀಕ್ಷಕ ಡಾ.ನಾಗರಾಜ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
-
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ












Click it and Unblock the Notifications