ದಾವಣಗೆರೆ: ವಾಲ್ಮೀಕಿ ಶ್ರೀಗಳು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿ ಮಾಡಲಿಲ್ಲ ಯಾಕೆ?
ದಾವಣಗೆರೆ, ಜನವರಿ, 06: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಶುಕ್ರವಾರ (ಜನವರಿ 06) ಮಠಗಳ ಭೇಟಿ ಮಾಡಿದರು. ಹರಿಹರ ತಾಲೂಕಿನ ಶಕ್ತಿ ಕೇಂದ್ರೀತ ಪೀಠಗಳಾದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠ, ಕನಕ ಗುರು ಪೀಠಕ್ಕೆ ತೆರಳಿ ಶ್ರೀಗಳ ಆಶೀರ್ವಾದ ಪಡೆದರು. ಆದರೆ ರಾಜನಹಳ್ಳಿಯ ವಾಲ್ಮೀಕಿ ಶ್ರೀಗಳು ಮಾತ್ರ ಜೆ. ಪಿ. ನಡ್ಡಾ ಅವರು ಬಂದರೂ ಮಠದಲ್ಲಿ ಇರಲಿಲ್ಲ.
ಬೆಳಗ್ಗೆ 9:20ಕ್ಕೆ ವಾಲ್ಮೀಕಿ ಪೀಠಕ್ಕೆ ಬರುವಂತೆ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಬಿಜೆಪಿ ಮುಖಂಡರಿಗೆ ತಿಳಿಸಿದ್ದರು. ಬೇರೆ ಕಾರ್ಯಕ್ರಮ ಪೂರ್ವನಿಗದಿಯಾಗಿರುವ ಕಾರಣ ತೆರಳಬೇಕು. ಆದಷ್ಟು ಬೇಗ ಬಂದರೆ ಮಠದಲ್ಲಿ ಇರುವುದಾಗಿ ಹೇಳಿದ್ದರು. ಆದರೆ ನಡ್ಡಾ ಅವರು ಮೊದಲು ಹನಗವಾಡಿಯ ಹರಿಹರ ಪಂಚಮಸಾಲಿ ಪೀಠಕ್ಕೆ ತೆರಳಿದರು. ಬಳಿಕ ಅಲ್ಲಿಂದ ಬೆಳ್ಳೂಡಿಯ ಕಾಗಿನೆಲೆ ಪೀಠಕ್ಕೆ ತೆರಳಿ ನಿರಂಜನಾನಂದ ಪುರಿ ಶ್ರೀಗಳನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಸುಮಾರು ಒಂದು ಗಂಟೆಗಳ ಕಾಲ ಕಾದು ಕುಳಿತಿದ್ದ ಶ್ರೀಗಳು ಅಲ್ಲಿಂದ ತೆರಳಿದರು. ಅಲ್ಲಿಗೆ ಹೋದ ನಡ್ಡಾ ಹಾಗೂ ಬಿಜೆಪಿ ಮುಖಂಡರು ಮಠದಲ್ಲಿದ್ದ ದೇವರಿಗೆ ಪೂಜೆ ಸಲ್ಲಿಸಿ ವಾಪಸ್ ಆದರು.

ವಿಭೂತಿ ಹಚ್ಚಿದ ವಚನಾನಂದ ಶ್ರೀಗಳು
ಪಂಚಮಸಾಲಿ ಪೀಠಕ್ಕೆ ತೆರಳಿದ ನಡ್ಡಾ, ಅರುಣ್ ಸಿಂಗ್, ನಳಿನ್ ಕುಮಾರ್ ಕಟೀಲ್ ಅವರಿಗೆ ವಚನಾನಂದ ಶ್ರೀಗಳು ಹಣೆಗೆ ವಿಭೂತಿ ಇಟ್ಟರು. ಬಳಿಕ ಶ್ರೀಗಳ ಜೊತೆ ನಡ್ಡಾ ಸೇರಿದಂತೆ ಬಿಜೆಪಿ ಮುಖಂಡರು ಮಾತುಕತೆ ನಡೆಸಿದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಬೆಂಬಲಿಸುವಂತೆ ಸಮುದಾಯದವರಿಗೆ ತಿಳಿಸುವಂತೆ ಮನವಿ ಮಾಡಿದರು ಎಂದು ಮೂಲಗಳು ತಿಳಿಸಿವೆ.

ಪ್ರಸ್ತುತ ರಾಜಕಾರಣದ ಬಗ್ಗೆ ಮಾತುಕತೆ
ಅದೇ ರೀತಿಯಲ್ಲಿ ಕಾಗಿನೆಲೆ ಗುರುಪೀಠಕ್ಕೂ ತೆರಳಿದ ನಡ್ಡಾ ಅವರು ಶ್ರೀಗಳ ಜೊತೆ ಸ್ವಲ್ಪ ಹೊತ್ತು ಮಾತುಕತೆ ನಡೆಸಿದರು. ಪ್ರಸ್ತುತ ರಾಜಕಾರಣ ಸೇರಿದಂತೆ ಕೆಲವು ಮಹತ್ವದ ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದರು. ಅಲ್ಲದೆ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು. ಆಗ ಶ್ರೀಗಳು ಕುರುಬ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಮನವಿ ಮಾಡಿದರು ಎನ್ನಲಾಗಿದೆ.

3 ಪೀಠಗಳಿಗೂ ಭೇಟಿ ನೀಡಿದ BJP ರಾಷ್ಟ್ರಾಧ್ಯಕ್ಷ
2023ರ ವಿಧಾನಸಭೆ ಚುನಾವಣೆಗೆ ದಾವಣಗೆರೆಯಿಂದ ರಣಕಹಳೆ ಮೊಳಗಿಸಿರುವ ಜೆ.ಪಿ. ನಡ್ಡಾ ಪ್ರಮುಖ ಮೂರು ಪೀಠಗಳಿಗೆ ಭೇಟಿ ನೀಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡದೇ 2ಡಿ ಮೀಸಲಾತಿ ಕೊಟ್ಟಿರುವುದು ಸಮುದಾಯದವರನ್ನು ಕೆರಳಿಸಿದೆ. ಹಾಗಾಗಿ, ಮನವೊಲಿಸಲು ಮಠಕ್ಕೆ ಭೇಟಿ ನೀಡಿರುವ ಸಾಧ್ಯತೆ ಇದೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಬಿಜೆಪಿಗೆ ಮುಳುವಾಗುತ್ತಾ ಸಿದ್ದರಾಮೋತ್ಸವ?
ಕುರುಬ ಸಮುದಾಯವು ದಾವಣಗೆರೆಯಲ್ಲಿ ಸಿದ್ದರಾಮೋತ್ಸವ ಆದ ಬಳಿಕ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗುತ್ತಾರೆ ಎಂಬ ವಿಶ್ವಾಸದಲ್ಲಿದೆ. ಅಲ್ಲದೆ ಇಲ್ಲಿ ನಡೆದ ಸಮಾವೇಶ ಭಾರಿ ಯಶಸ್ವಿ ಆಗಿರುವ ಹಿನ್ನೆಲೆಯಲ್ಲಿ ಆ ಸಮಾಜದ ಮತಗಳನ್ನು ಬಿಜೆಪಿಯತ್ತ ಸೆಳೆಯುವ ಭಾಗವಾಗಿಯೇ ಹೋಗಿರಬಹುದು ಎಂದೂ ಹೇಳಲಾಗುತ್ತಿದೆ. ಇನ್ನು ವಾಲ್ಮೀಕಿ ಶ್ರೀಗಳು ಮಠದಲ್ಲಿ ಇಲ್ಲದಿರುವುದು ಜೆ.ಪಿ. ನಡ್ಡಾ, ಅರುಣ್ ಸಿಂಗ್ ಹಾಗೂ ನಳಿನ್ ಕುಮಾರ್ ಕಟೀಲ್ ಅವರಿಗೆ ಇರಿಸು ಮುರಿಸು ತಂದಿದ್ದಂತೂ ಸತ್ಯವಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications