ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ: ಡಿ.5ರ ಕರ್ನಾಟಕ ಬಂದ್‌ಗೆ ಬೆಂಬಲ ಸೂಚನೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಡಿಸೆಂಬರ್ 1: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟಣೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಬೆಂಬಲ ಸೂಚಿಸಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಒಕ್ಕೂಟದ ಉಪಾಧ್ಯಕ್ಷ ಎ.ಭದ್ರಪ್ಪ, ಡಿ.5ರ ಬಂದ್ ಬೆಂಬಲಿಸಿ 26 ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಅಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಶಾಂತಿಯುತ ಪ್ರತಿಭಟನೆ ನಡೆಸಿ, ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿ, ಬಂದ್‌ಗೆ ಸಹಕರಿಸಬೇಕೆಂದು ಮನವಿ ಮಾಡಲಾಗುವುದು ಎಂದು ಹೇಳಿದರು.

ಡಿ.5 ರಂದು ಕರ್ನಾಟಕ ಬಂದ್‌ ಯಶಸ್ಸಿಗೆ ಕರ್ನಾಟಕ ರಕ್ಷಣಾ ವೇದಿಕೆ ಕರೆ ಡಿ.5 ರಂದು ಕರ್ನಾಟಕ ಬಂದ್‌ ಯಶಸ್ಸಿಗೆ ಕರ್ನಾಟಕ ರಕ್ಷಣಾ ವೇದಿಕೆ ಕರೆ

ಅನೇಕರ ಹೋರಾಟ, ತ್ಯಾಗ, ಬಲಿದಾನದಿಂದ ಭಾಷಾವಾರು ಪ್ರಾಂತ್ಯಗಳು ರಚನೆಯಾಗಿದ್ದು, ಹಲವು ಜನಾಂಗದವರು ಒಂದೇ ಮನೆಯ ಮಕ್ಕಳಂತೆ ಸೌಹಾರ್ದಯುತವಾಗಿ ನಾಡಿನಲ್ಲಿ ಸಹಬಾಳ್ವೆಯ ಜೀವನ ನಡೆಸುತ್ತಿದ್ದೇವೆ. ಆದರೆ, ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮೂಲಕ ಜನಾಂಗಗಳ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

Davanagere: Kannada Organizations Alliance Support For December 5th Karnataka Bandh

ತಮ್ಮ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿಗೊಂದು ನಿಗಮ ಮಾಡುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ತಾತ್ಕಾಲಿಕವಾಗಿ ಜಯ ಸಿಗಬಹುದು. ಆದರೆ, ಮುಂದೆ ಪರಸ್ಪರ ಕಿತ್ತಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆದ್ದರಿಂದ ರಾಜ್ಯ ಸರ್ಕಾರ ತಕ್ಷಣವೇ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಗೌರವಾಧ್ಯಕ್ಷ ಜೆ.ಎನ್.ಶ್ರೀನಿವಾಸ್, ಜಿಲ್ಲಾಧ್ಯಕ್ಷ ಶಿವಕುಮಾರ್.ಟಿ, ಪ್ರಧಾನ ಕಾರ್ಯದರ್ಶಿ ಎಸ್.ಜಿ.ಸೋಮಶೇಖರ್, ಮುಖಂಡರಾದ ಬಿ.ಪರಮೇಶ್ ಮೇಟಿ, ಕೆ.ಬಿ.ರುದ್ರೇಶ್, ಜಮನಳ್ಳಿ ನಾಗರಾಜ್, ಆದಾಪುರ ನಾಗರಾಜ್, ಸುಂಕಪುರದ ಶಿವಕುಮಾರ್, ಪಿ.ಪ್ರಕಾಶ್, ಶುಭಮಂಗಳ, ಸುವರ್ಣಮ್ಮ, ಸೀಮೆಎಣ್ಣೆ ಬಸವರಾಜ್ ಮತ್ತಿತರರಿದ್ದರು.

English summary
The Alliance of Kannada Organizations has backed the Karnataka Bandh, which had called on the December 5 to oppose the formation of the Maratha Development Authority by the state government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X