Harapanahalli constituency; ಕಾಂಗ್ರೆಸ್, ಬಿಜೆಪಿ ಪೈಪೋಟಿ!
ದಾವಣಗೆರೆ ಜಿಲ್ಲೆಯಲ್ಲಿದ್ದ ಹರಪನಹಳ್ಳಿ ತಾಲೂಕು 2018ರಲ್ಲಿ ಮತ್ತೆ ಬಳ್ಳಾರಿ ಜಿಲ್ಲೆಗೆ ಸೇರಿದೆ. ಅತ್ತ ಬಳ್ಳಾರಿ ಜಿಲ್ಲೆ ಬಳ್ಳಾರಿ, ವಿಜಯನಗರ ಎಂದು ವಿಭಜನೆಗೊಂಡಿದೆ. 1997ರಲ್ಲಿ ದಾವಣಗೆರೆ ಜಿಲ್ಲೆ ಹೊಸದಾಗಿ ರೂಪಗೊಂಡಾಗ ಬಳ್ಳಾರಿ ಜಿಲ್ಲೆಯಲ್ಲಿದ್ದ ಹರಪನಹಳ್ಳಿ ತಾಲೂಕನ್ನು ದಾವಣಗೆರೆಗೆ ಸೇರಿಸಲಾಯಿತು. ಬಳ್ಳಾರಿ ಜಿಲ್ಲೆಗೆ 371 (ಜೆ) ಸವಲತ್ತು ದೊರೆತ ಬಳಿಕ ಹರಪನಹಳ್ಳಿ ಭಾಗದ ಜನರು ನಮಗೂ ಆ ಸೌಲಭ್ಯ ಬೇಕು ಎಂದು ಪಟ್ಟು ಹಿಡಿದರು. ನಾವು ಬಳ್ಳಾರಿಗೆ ಸೇರಿದವರು, ಆದರೆ ನಮ್ಮನ್ನು ದಾವಣಗೆರೆಗೆ ಸೇರಿಸಲಾಗಿದೆ ಎಂದು ಸರ್ಕಾರದ ಮುಂದೆ ಬೇಡಿಕೆ ಇಟ್ಟರು.
ಅತಿ ಹಿಂದುಳಿದ ತಾಲೂಕು ಹಣೆಪಟ್ಟಿ ಹೊತ್ತಿರುವ ಹರಪನಹಳ್ಳಿ ಅಭಿವೃದ್ಧಿಯಾಗಬೇಕು ಎಂದು ಜನಪ್ರತಿನಿಧಿಗಳು ಸಹ ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ಸೇರಬೇಕು ಎಂದು ಪಕ್ಷಾತೀತ ಹೋರಾಟ ಆರಂಭಿಸಿದರು. ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ದಿ. ಎಂ. ಪಿ. ಪ್ರಕಾಶ್ ಪುತ್ರ ಎಂ. ಪಿ. ರವೀಂದ್ರ ಸಿದ್ದರಾಮಯ್ಯ ಸರ್ಕಾರವಿದ್ದಾಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಹರಪನಹಳ್ಳಿ ಜನರ ಜೊತೆ ನಿಲ್ಲಲು ಮುಂದಾದರು. ಅಂತಿಮವಾಗಿ ಕಾಂಗ್ರೆಸ್ ಸರ್ಕಾರ ಹರಪನಹಳ್ಳಿಯನ್ನು ಬಳ್ಳಾರಿ ಜಿಲ್ಲೆಗೆ ಸೇರಿಸಿ ಅಧಿಸೂಚನೆ ಹೊರಡಿಸಿತು.

ರಾಜಕೀಯವಾಗಿ ಕರ್ನಾಟಕ ರಾಜಕಾರಣದ ಸಜ್ಜನ ಎಂ. ಪಿ. ಪ್ರಕಾಶ್ ತವರು ಕ್ಷೇತ್ರ ಹರಪನಹಳ್ಳಿ. ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಕ್ಷೇತ್ರದ ಹಾಲಿ ಶಾಸಕರು ರೆಡ್ಡಿ ಸಹೋದರರ ಹಿರಿಯಣ್ಣ ಜಿ. ಕರುಣಾಕರ ರೆಡ್ಡಿ. 2018ರ ಚುನಾವಣೆಯಲ್ಲಿ 67,603 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿಯೂ ಅವರು ಟಿಕೆಟ್ ಆಕಾಂಕ್ಷಿ. ಆದರೆ ಅವರು ಹೊರಗಿನವರು ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂಬ ಬೇಡಿಕೆ ಇದೆ.
ಜಿ. ಕರುಣಾಕರ ರೆಡ್ಡಿ 2008ರಲ್ಲಿ ಕ್ಷೇತ್ರದಲ್ಲಿ ಮೊದಲ ಬಾರಿಗೆ ಗೆದ್ದರು. ಸರ್ಕಾರದ ಮೇಲಿದ್ದ ರೆಡ್ಡಿ ಸಹೋದರರ ಪ್ರಭಾವದ ಕಾರಣ ಸರ್ಕಾರದಲ್ಲಿ ಕಂದಾಯ ಸಚಿವರಾದರು. 2013ರಲ್ಲಿ ಅವರು 48,548 ಮತಗಳನ್ನು ಪಡೆದು 56,954 ಮತಗಳನ್ನು ಪಡೆದ ಕಾಂಗ್ರೆಸ್ನ ಎಂ. ಪಿ. ರವೀಂದ್ರ ವಿರುದ್ಧ ಸೋಲು ಕಂಡರು. 2018ರಲ್ಲಿ ಹರಪನಹಳ್ಳಿ ಕ್ಷೇತ್ರದಲ್ಲಿ ಮತ್ತೆ ಜಯಗಳಿಸಿದ್ದಾರೆ. ಮಾಜಿ ಸಚಿವ ಬಿ. ಶ್ರೀರಾಮುಲು ಬಿಎಸ್ಆರ್ ಕಾಂಗ್ರೆಸ್ ಸ್ಥಾಪನೆ ಮಾಡಿದಾಗಲೂ ಅವರು ಬಿಜೆಪಿ ಬಿಟ್ಟು ಹೋಗದೇ ಪಕ್ಷ ನಿಷ್ಠೆ ತೋರಿದ್ದಾರೆ. ಈ ಬಾರಿಯೂ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ.

ಹರಪನಹಳ್ಳಿ ಕ್ಷೇತ್ರಕ್ಕೆ ಜಿ. ಕರುಣಾಕರ ರೆಡ್ಡಿ ಹೊರಗಿನವರು, ಸ್ಥಳೀಯರಿಗೆ ಟಿಕೆಟ್ ನೀಡಿ ಎಂಬ ಕೂಗು ಎದ್ದಿದೆ. ಯು. ನಂದನಗೌಡ, ಅರುಂಡಿ ನಾಗರಾಜು, ಚನ್ನಬಸಪ್ಪ ಪಾಟೀಲ್ ಮುಂತಾದವರು ಸ್ಥಳೀಯರು ಎಂಬ ಕೋಟಾದಲ್ಲಿ ಬಿಜೆಪಿ ಟಿಕೆಟ್ ಬಯಸಿದ್ದಾರೆ. ಬಳ್ಳಾರಿಯ ಬಿಜೆಪಿ ಸಂಸದ ವೈ. ದೇವೇಂದ್ರಪ್ಪ ಪುತ್ರ ವೈ. ಡಿ. ಅಣ್ಣಪ್ಪ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ. ಜನಾರ್ದನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಹೊಸ ಪಕ್ಷ ಸ್ಥಾಪನೆ ಮಾಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳು ಜಿ. ಕರುಣಾಕರ ರೆಡ್ಡಿಗೆ ಹಿನ್ನಡೆ ಉಂಟು ಮಾಡಿದರೂ ಮಾಡಬಹುದಾಗಿದೆ.
ಕಾಂಗ್ರೆಸ್ ಟಿಕೆಟ್ ಯಾರಿಗೆ?; 2018ರಲ್ಲಿ ಎಂ. ಪಿ. ರವೀಂದ್ರ ಪಕ್ಷದ ಅಭ್ಯರ್ಥಿಯಾಗಿದ್ದರು. 57,956 ಮತಗಳನ್ನು ಪಡೆದು ಹರಪನಹಳ್ಳಿ ಕ್ಷೇತ್ರದಲ್ಲಿ ಸೋತಿದ್ದರು. ಅವರ ಅಕಾಲಿಕ ಮರಣ ಪಕ್ಷಕ್ಕೆ ಸಹ ಹಿನ್ನಡೆ ಉಂಟು ಮಾಡಿದೆ. ಈ ಬಾರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ಗಾಗಿ 17 ಅರ್ಜಿಗಳು ಸಲ್ಲಿಕೆಯಾಗಿವೆ. ಇವರಲ್ಲಿ ಮಾಜಿ ಉಪಮುಖ್ಯಮಂತ್ರಿ ಎಂ. ಪಿ. ಪ್ರಕಾಶ್ ಪುತ್ರಿಯರಾದ ಎಂ. ಪಿ. ಲತಾ, ಎಂ. ಪಿ. ವೀಣಾ ಸಹ ಸೇರಿದ್ದಾರೆ. ಉಳಿದಂತೆ ಅರಸೀಕೆರೆ ಎನ್. ಕೊಟ್ರೇಶ್, ಪಿ. ಟಿ. ಪರಮೇಶ್ವರ ನಾಯ್ಕ್ ಆಪ್ತ ಶಶಿಧರ ಪೂಜಾರಿ, ಎಸ್. ವಿ. ಪರುಶರಾಮಪ್ಪ ಸೇರಿದ್ದಾರೆ. ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ 37,685 ಮತಗಳನ್ನು ಪಡೆದಿದ್ದ ಅರಸೀಕೆರೆ ಎನ್. ಕೊಟ್ರೇಶ್ ಈ ಬಾರಿ ಕಾಂಗ್ರೆಸ್ನ ಟಿಕೆಟ್ ಬಯಸಿದ್ದಾರೆ.
ಜೆಡಿಎಸ್ನಿಂದ ಬೇಲ್ದಾರ್ ಬಾಷಾ ಅವರು ಅಭ್ಯರ್ಥಿ ಎಂಬ ಮಾತು ಇತ್ತು. ಈಗ ಕೂಡ್ಲಗಿ ಕ್ಷೇತ್ರದ ಮಾಜಿ ಶಾಸಕ ಎನ್. ಎಂ. ನಬಿ ಅವರ ಪುತ್ರ ನೂರ್ ಅಹ್ಮದ್ ಆಕಾಂಕ್ಷಿಯಾಗಿದ್ದಾರೆ. ಇನ್ನು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪನೆ ಮಾಡಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಹರಪನಹಳ್ಳಿ ಕ್ಷೇತ್ರದಲ್ಲಿ ಯಾರನ್ನು ಅಭ್ಯರ್ಥಿ ಮಾಡುತ್ತಾರೆ? ಎಂದು ಕಾದು ನೋಡಬೇಕಿದೆ.
ಹರಪನಹಳ್ಳಿ ಕ್ಷೇತ್ರದ ಒಟ್ಟು ಮತದಾರರು 2,01,133. ಪುರುಷರು 1,03,360, ಮಹಿಳೆಯರು 97,669 ಮತ್ತು ಇತರರು 17.
-
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
Horoscope March 1: ಈ ರಾಶಿಯವರ ವ್ಯಾಪಾರ, ಆರೋಗ್ಯ ವೃದ್ಧಿ, ಇಂದಿನ ದಿನ ಭವಿಷ್ಯ ಇಲ್ಲಿದೆ. -
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಜೋಡಿಯಿಂದ ಕರ್ನಾಟಕ ಸೇರಿ ದೇಶದ ಪ್ರಮುಖ ದೇವಸ್ಥಾನಗಳಲ್ಲಿ ಅನ್ನದಾನ ಸೇವೆ -
ಮದುವೆ ಪೋಸ್ಟ್ನಲ್ಲಿ ರಶ್ಮಿಕಾ ವಿಶೇಷ ಸಾಲುಗಳು: ಕೊಡಗಿನ ಬೆಡಗಿಯ ವಿದ್ಯಾರ್ಹತೆ ಬಗ್ಗೆ ನಿಮಗೆಷ್ಟು ಗೊತ್ತು? -
Ali Khamenei: ಇರಾನ್ ಸುಪ್ರೀಂ ನಾಯಕ ಖಮೇನಿ ಭೇಟಿ ನೀಡಿದ್ದ ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದ ವಿಶೇಷವೇನು -
ಮಧ್ಯಪ್ರಾಚ್ಯದಲ್ಲಿ ವಿಮಾನಗಳ ಸಂಚಾರ ವ್ಯತ್ಯಯ: ಕರ್ನಾಟಕದ ನಾಗರಿಕರಿಗೆ ಸರ್ಕಾರ ನೆರವು -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
Lunar Eclipse: ಮಾರ್ಚ್ 3 ಹುಣ್ಣಿಮೆ: ವರ್ಷದ ಮೊದಲ ಮಹಾ ಚಂದ್ರ ಗ್ರಹಣ – ನಾಲ್ಕು ರಾಶಿಗಳಿಗೆ ಮಹಾ ಶುಭ ಫಲ












Click it and Unblock the Notifications