ನೀತಿ ಸಂಹಿತೆ ಉಲ್ಲಂಘನೆ: ದಾವಣಗೆರೆ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 1.60 ಕೋಟಿ ನಗದು, ಇತರೆ ವಸ್ತುಗಳ ವಶ
ದಾವಣಗೆರೆ, ಏಪ್ರಿಲ್, 14: ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಹಲವೆಡೆ ಪೊಲೀಸರು ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕುತ್ತಲೇ ಇದ್ದಾರೆ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲೂ ಕೂಡ ಪೊಲೀಸರು ಅಲರ್ಟ್ ಆಗಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಮೊತ್ತದ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಚೆಕ್ಪೋಸ್ಟ್ಗಳ ವ್ಯವಸ್ಥೆಯನ್ನು ಮಾಡಲಾಗಿದೆ. ನೀತಿ ಸಂಹಿತೆ ಉಲ್ಲಂಘಿಸಿ ಸಾಗಿಸುತ್ತಿದ್ದ 5,213 ಲೀಟರ್ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಮಾಹಿತಿ ನೀಡಿದ್ದಾರೆ. ಜಿಲ್ಲೆಯಾದ್ಯಂತ ವಿವಿಧ ಚೆಕ್ ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲಾಗುತ್ತಿದ್ದು, ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಗದು, ಚಿನ್ನಾಭರಣ ಸೇರಿದಂತೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದುವರೆಗೂ ವಶಪಡಸಿಕೊಂಡ ಮದ್ಯದ ವಿವರ
ಒಂದು ದಿನದ ಅವಧಿಯಲ್ಲಿ ಸುಮಾರು 58,29,890 ರೂಪಾಯಿ ಮೌಲ್ಯದ 5213.82 ಲೀಟರ್ ಮದ್ಯ, ಮತ್ತೊಂದು ಪ್ರಕರಣದಲ್ಲಿ 4.10 ಲಕ್ಷ ರೂಪಾಯಿ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದುವರೆಗೂ 50,11648 ರೂಪಾಯಿ ಮೌಲ್ಯದ ನಗದು, 61,93,085 ರೂಪಾಯಿ ಮೌಲ್ಯದ 6145.185 ಲೀಟರ್ ಮದ್ಯ ವಶಪಡಿಸಿಕೊಂಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಅಲ್ಲದೇ ಅಂದಾಜು 56,110 ರೂಪಾಯಿ ಮೌಲ್ಯದ 3.209 ಕೆ.ಜಿ ಮಾದಕ ವಸ್ತು ಹಾಗೂ 48,26,735 ರೂಪಾಯಿ ಮೌಲ್ಯದ ಇತರೆ ವಸ್ತುಗಳು ಸೇರಿದಂತೆ ಒಟ್ಟು 1.60 ಕೋಟಿಯಷ್ಟು ನಗದು ಮತ್ತು ಇತರೆ ವಸ್ತುಗಳನ್ನು ನೀತಿ ಸಂಹಿತೆ ಆರಂಭವಾದಾಗಿನಿಂದ ಇಲ್ಲಿಯವರೆಗೆ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಇದರಲ್ಲಿ 67.24 ಲೀಟರ್ ಪೊಲೀಸ್ ಇಲಾಖೆ ಮತ್ತು 6077.945 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆಯಿಂದ ಕಾರ್ಯಾಚರಣೆ ಮಾಡಿ ವಶಪಡಿಸಿಕೊಳ್ಳಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

29 ಚೆಕ್ ಪೋಸ್ಟ್ಗಳ ನಿರ್ಮಾಣ
ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಿದ್ದು, ಇಲ್ಲಿ ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ 29 ಕಡೆ ಚೆಕ್ಪೋಸ್ಟ್ಗಳು ಕಾರ್ಯ ನಿರ್ವಹಿಸುತ್ತಿವೆ. ಚೆಕ್ಪೋಸ್ಟ್ ಗಳಲ್ಲಿ ಸಿಬ್ಬಂದಿ ಮೂರು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ದಿನದ 24 ಗಂಟೆಯು ಕಾರ್ಯನಿರ್ವಹಿಸುತ್ತಿವೆ. ಇದರ ನೇರ ದೃಶ್ಯಾವಳಿಗಳನ್ನು ಸೆರೆಯಿಡಿಯಲು ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಇದರ ದೃಶ್ಯಾವಳಿಗಳ ವೀಕ್ಷಣೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸ್ಥಾಪಿಸಿರುವ ನಿಯಂತ್ರಣ ಕೊಠಡಿಯಲ್ಲಿ ವೀಕ್ಷಣೆ ಮಾಡಲಾಗುತ್ತದೆ.
ಕ್ಷೇತ್ರವಾರು ಚೆಕ್ ಪೋಸ್ಟ್ಗಳ ವಿವರ
ಜಗಳೂರು ವಿಧಾನಸಭಾ ಕ್ಷೇತ್ರ: ಬಿದರಕೆರೆ, ಗಡಿಮಾಕುಂಟೆ, ಮುಸ್ಟೂರು ಚಳ್ಳಕೆರೆ ರಸ್ತೆ, ಕಾನನಕಟ್ಟೆ 13ನೇ ರಸ್ತೆಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ.
ಹರಿಹರ ವಿಧಾನಸಭಾ ಕ್ಷೇತ್ರ: ರಾಘವೇಂದ್ರ ಮಠ, ಹಲಸಬಾಳು ಕ್ರಾಸ್, ಕುರುಬರಹಳ್ಳಿ, ಮಲೆಬೆನ್ನೂರಿನ ನಂದಿಗುಡಿ ಬಳಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.
ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ: ಭೂಮಿಕ ನಗರ, ಲೋಕಿಕೆರೆ, ಶಾಮನೂರು ಕ್ರಾಸ್ -4 ರಸ್ತೆ, ವಿದ್ಯಾನಗರ ಲಾಸ್ಟ್ ಬಸ್ ಸ್ಟಾಂಡ್, ಮಾಗನಹಳ್ಳಿ ರಸ್ತೆಯಲ್ಲಿ ಚೆಕ್ ಪೋಸ್ಟ್ ನಿರ್ಮಿಸಲಾಗಿದೆ.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ: ಬಾಡ ಕ್ರಾಸ್, ಬೇತೂರ್ ರಸ್ತೆ, ಕೊಂಡಜ್ಜಿ ರಸ್ತೆ, ಹರಿಹರ ರಸ್ತೆ (ಸಾಯಿ ಇಂಟರ್ ನ್ಯಾಷನಲ್ ಹೋಟೆಲ್) ಬಳಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.
ಮಾಯಕೊಂಡ ವಿಧಾನಸಭಾ ಕ್ಷೇತ್ರ: ಹೆಬ್ಬಾಳ್ ಟೋಲ್ಗೇಟ್, ಕಾರಿಗನೂರು ಕ್ರಾಸ್, ಹೆಚ್.ಬಸಾಪುರ ಬಳಿ ಚೆಕ್ ಪೋಸ್ಟ್ ನಿರ್ಮಾಣ ಮಾಡಲಾಗಿದೆ.
ಚನ್ನಗಿರಿ ವಿಧಾನಸಭಾ ಕ್ಷೇತ್ರ: ಜೋಳದಾಳ್, ಮಾವಿನಕಟ್ಟೆ, ತಾವರೆಕೆರೆ, ಮಾದಾಪುರ, ಸಂತೆಬೆನ್ನೂರು ಚೆಕ್ ಪೋಸ್ಟ್ ನಿರ್ಮಿಸಲಾಗಿದೆ.
ಹೊನ್ನಾಳಿ ವಿಧಾನಸಭಾ ಕ್ಷೇತ್ರ: ಟಿ.ಜಿ ಹಳ್ಳಿ ಕ್ರಾಸ್, ಸವಳಂಗ, ಹೊಳೆಹರಳಹಳ್ಳಿ ಕ್ರಾಸ್, ಜೀನಹಳ್ಳಿ ಕ್ರಾಸ್ನಲ್ಲಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ.
-
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications