ಪಠ್ಯಪರಿಷ್ಕರಣೆ ಉದ್ದಟತನ ಹೀಗೆ ಬಿಟ್ಟರೆ ಕಷ್ಟ ಎದುರಿಸಲು ಸಿದ್ಧರಾಗಿ: ಸಿಎಂಗೆ ಕಾಗಿನೆಲೆ ಶ್ರೀ ಎಚ್ಚರಿಕೆ!
ದಾವಣಗೆರೆ, ಜೂ.25: ರಾಜ್ಯದಲ್ಲಿ ಪಠ್ಯಕ್ರಮ ಪರಿಷ್ಕರಣೆ ವಿಚಾರ ಸಾಕಷ್ಟು ಗೊಂದಲಕ್ಕೆ ಕಾರಣವಾಗಿದೆ. ಈಗ ಆಗಿರುವ ಲೋಪದೋಷ ಸರಿಪಡಿಸಿ. ಇದೇ ರೀತಿಯ ಉದ್ಧಟತನ ಹಾಗೂ ಕಾರ್ಯವೈಖರಿ ಇದೇ ರೀತಿಯಲ್ಲಿ ಮುಂದುವರಿದರೆ ಮುಂಬರುವ ದಿನಗಳಲ್ಲಿ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ಬೆಳ್ಳೂಡಿಯ ಕಾಗಿನೆಲೆ ಮಠದ ಪೀಠಾಧಿಪತಿ ನಿರಂಜನಾನಂದಪುರಿ ಮಹಾಸ್ವಾಮೀಜಿ ಎಚ್ಚರಿಕೆ ನೀಡಿದರು.
ಹರಿಹರದ ಬೆಳ್ಳೂಡಿಯ ಕನಕ ಪೀಠದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ಸಚಿವರು ಉದ್ಧಟತನ ಬಿಟ್ಟು ಗೊಂದಲ ಪರಿಹರಿಸಬೇಕು. ಆಗಿರುವ ಪ್ರಮಾದ ಸರಿಪಡಿಸಬೇಕು ಎಂದು ಆಗ್ರಹಿಸಿದರು.
ಕುರುಬ ಸಮುದಾಯವನ್ನು ಎಸ್ಟಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ನಾವು ಸುಮ್ಮನೆ ಕುಳಿತಿಲ್ಲ. ಬುಡಕಟ್ಟು ಸಮುದಾಯ ಕೇಂದ್ರದವರು ಈಗಾಗಲೇ ಸಂಶೋಧನೆ ನಡೆಸುತ್ತಿದ್ದು, ಇನ್ನು ಕೆಲವೇ ತಿಂಗಳಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಮಾಧ್ಯಮಗಳ ಮುಂದೆ ಎಲ್ಲವನ್ನೂ ಹೇಳಲು ಆಗದು. ಕೆಲ ವಿಚಾರಗಳನ್ನು ಗೌಪ್ಯವಾಗಿಡುವಂತೆ ಹೇಳಲಾಗಿದೆ. ನಿರಂತರವಾಗಿ ಈ ಬಗ್ಗೆ ಹೋರಾಟ ಮಾಡಲಾಗುತ್ತಿದೆ.

ನಾವು ಎಲ್ಲರ ಜೊತೆಗೂಡಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ
ಯಾವುದೇ ಒಂದು ಜಾತಿಗೆ ಶಿಕ್ಷಣ ಸೀಮಿತ ಮಾಡಬಾರದು. ಕುವೆಂಪು, ಜಗಜ್ಯೋತಿ ಬಸವಣ್ಣ, ಕನಕದಾಸರು ಸೇರಿದಂತೆ ಮಹಾನ್ ಮಾನವತವಾದಿಗಳ ಸತ್ಯವಾದ ಜೀವನ ಚರಿತ್ರೆಯನ್ನು ಸಮುದಾಯಕ್ಕೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸವನ್ನು ಸರ್ಕಾರ ಮಾಡಬೇಕು. ಪಠ್ಯದಲ್ಲಿ ಕೆಲವೊಂದು ಅಂಶಗಳನ್ನು ಮುಚ್ಚಿಟ್ಟು ಇಲ್ಲಸಲ್ಲದ ಅಂಶಗಳನ್ನು ಸೇರಿಸಲು ಮುಂದಾದರೆ ಸಹಿಸಲು ಸಾಧ್ಯವಿಲ್ಲ. ಇಂಥ ಕೆಲಸ ಅಕ್ಷಮ್ಯ ಅಪರಾಧ. ಲೋಪದೋಷಗಳನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳುತ್ತೀರಾ ಎಂಬ ವಿಶ್ವಾಸ ಇದೆ. ನಾವು ಎಲ್ಲರ ಜೊತೆಗೂಡಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಿದರು.

ಮಠಕ್ಕೆ ರಾಜಕಾರಣಿಗಳಿಗೆ ಬರಬೇಡಿ ಎನ್ನಲು ಆಗದು
ರಾಜ್ಯಾದ್ಯಂತ ಬುಡಕಟ್ಟು ಸಂಶೋಧನಾ ಕೇಂದ್ರದಿಂದ ಸಂಶೋಧನೆ ಮಾಡಿಸಿ ಎಲ್ಲಾ ವರದಿಗಳನ್ನು ಸಮರ್ಪಕ ಹಾಗೂ ಕರಾರುವಕ್ಕಾದ ವರದಿ ಒಂದು ತಿಂಗಳೊಳಗೆ ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ. ಆ ಬಳಿಕ ರಾಜ್ಯ ಸರ್ಕಾರದ ಮೇಲೆ ಒತ್ತಡ ಹಾಕುತ್ತೇವೆ. ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಟ್ಟು ಬೇಡಿಕೆ ಈಡೇರಿಸುವಂತೆ ಆಗ್ರಹಿಸುತ್ತೇವೆ ಎಂದು ತಿಳಿಸಿದರು.
ಮಠ ರಾಜಕೀಯಕ್ಕೆ ಮಾರ್ಗದರ್ಶನ ಕೇಂದ್ರವಾಗಬೇಕೇ ವಿನಾ ರಾಜಕೀಯ ಶಕ್ತಿ ಕೇಂದ್ರ ಆಗಬಾರದು. ಮಠಕ್ಕೆ ರಾಜಕಾರಣಿಗಳಿಗೆ ಬರಬೇಡಿ ಎನ್ನಲು ಆಗದು. ಅವರು ಬಂದಾಗ ಸಲಹೆಗಳನ್ನು ಸ್ವೀಕರಿಸಬೇಕು. ಯಾವುದೇ ಪಕ್ಷದ ರಾಷ್ಟ್ರಾಧ್ಯಕ್ಷರು ಬಂದರೆ ಮಠಗಳು ಹೇಗೆ ಬೇಡ ಎನ್ನಲು ಆಗುತ್ತೆ ಎಂದು ಪ್ರಶ್ನಿಸಿದರು.

ಇದೊಂದು ಬುಡುಬುಡಿಕೆಯ ಆಳ್ವಿಕೆ
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ವಾಕ್ಸಮರ ಮುಂದುವರೆದಿದೆ. "ಎಳೆ ವಯಸ್ಸಿನ ಮಕ್ಕಳಿಗೆ ವಿಷ ಉಣ್ಣಿಸಲಾಗುತ್ತಿದೆ" ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದರು.
ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ದಾರ್ಶನಿಕರಿಗೆ ಬಿಜೆಪಿ ಅಪಮಾನ ಮಾಡುತ್ತಿದೆ ಎಂಬ ಪ್ರಶ್ನೆಗೆ ಉತ್ತರ ನೀಡಿದರು.
ಮಕ್ಕಳು ಓದುವ ಪಠ್ಯಗಳಲ್ಲಿ ಕೋಮುವಾದದ ಅಟ್ಟಹಾಸ ಮೆರೆಯುತ್ತಿದೆ. ದೇಶದ ಬಗ್ಗೆ ಕಿಂಚಿತ್ತೂ ಗೌರವ ಹೊಂದಿರುವ ಮತ್ತು ಕೋಮುವಾದಿ ವಿಷವನ್ನೇ ಜೀವಾಳ ಮಾಡಿಕೊಂಡಿದ್ದ ಆರ್ಎಸ್ಎಸ್ ಸಂಸ್ಥಾಪಕ ಕೇಶವ ಬಲಿರಾಮ್ ಹೆಗಗೆವಾರ್ ವಿಚಾರಗಳು ಪಠ್ಯ ಸೇರುತ್ತಿದ್ದರೂ ಕಾಂಗ್ರೆಸ್ ಒಂದು ಸಣ್ಣ ಪ್ರತಿಭಟನೆಯನ್ನೂ ತೋರದಿರುವುದು ಅಚ್ಚರಿ ತಂದಿದೆ ಎಂದು ಅವರು ಈ ವೇಳೆ ಹೇಳಿದ್ದಾರೆ.
ಇಂದು ದೇಶದ ಆಡಳಿತ ಚುಕ್ಕಾಣಿ ಬಹುವೇಷ ತೊಟ್ಟವರು, ಬಹುಮೂರ್ತಿಗಳ ಕೈಯಲ್ಲಿದೆ. ಬಹುರೂಪಿಗಳೇ ದೇಶದ ಸೂತ್ರ ಹಿಡಿದಿದ್ದಾರೆ. ಜನಹಿತದ ಕಾಳಜಿ ಮತ್ತು ಕೆಲಸಗಳಿಂತ ಜನರಿಗೆ ಮಂಕುಬೂದಿ ಎರಚಿ ಮರಳು ಮಾಡುವ ಮಾತುಗಾರಿಕೆಯೇ ಎಲ್ಲೆಡೆ ವಿಜೃಂಭಿಸುತ್ತಿದೆ.ಇದೊಂದು ಬುಡುಬುಡಿಕೆಯ ಆಳ್ವಿಕೆಯಾಗಿದೆ.

ಪಠ್ಯ ಪುಸ್ತಕ ಪರಿಷ್ಕರಣೆಗೆ ನೂರೆಂಟು ಆಕ್ಷೇಪ..!
ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಪುಸ್ತಕ ರಚನಾ ಸಮಿತಿ, ಶಾಲಾ ಪಠ್ಯದ ಪರಿಷ್ಕರಣೆ ಮಾಡಿತ್ತು. ಈ ಸಮಿತಿಯು ಪಠ್ಯದಲ್ಲಿ ಕೆಲವೊಂದು ಲೋಪ ದೋಷಗಳನ್ನು ಮಾಡಿದೆ ಎಂದು ಆಕ್ಷೇಪಿಸಿ, ರಾಜ್ಯ ಬಿಜೆಪಿ ಸರ್ಕಾರವು ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿ ರಚಿಸಿತ್ತು. ಈ ಸಮಿತಿಗೆ 6 ರಿಂದ 10ನೇ ತರಗತಿವರೆಗಿನ ಸಮಾಜ ವಿಜ್ಞಾನ ಪಠ್ಯ ಪುಸ್ತಕ ಪರಿಷ್ಕರಣೆ, 6 ರಿಂದ 10ನೇ ತರಗತಿವರೆಗಿನ ಕನ್ನಡ ಪಠ್ಯ ಪುಸ್ತಕ ಪರಿಷ್ಕರಣೆ ಹಾಗೂ 3ನೇ ತರಗತಿಯ ಪರಿಸರ ಅಧ್ಯಯನ ಪಠ್ಯ ಪುಸ್ತಕಗಳ ಪರಿಷ್ಕರಣೆಯ ಜವಾಬ್ದಾರಿ ನೀಡಲಾಗಿತ್ತು.
ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯು ಪಠ್ಯ ಪುಸ್ತಕಗಳ ಪರಿಷ್ಕರಣೆ ಮಾಡುವ ವೇಳೆ ಟಿಪ್ಪು ಸುಲ್ತಾನ್ ಕುರಿತಾಗಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಅನ್ನೋದು ಮೊದಲ ಆರೋಪ. ಇನ್ನು ಆರ್ಎಸ್ಎಸ್ ಸಂಸ್ಥಾಪಕ ಹೆಡಗೇವಾರ್ ಅವರ ಕುರಿತಾದ ಲೇಖನ ಸೇರ್ಪಡೆ, ಚಕ್ರವರ್ತಿ ಸೂಲಿಬೆಲೆ ಬರೆದಿರುವ 'ತಾಯಿ ಭಾರತಿಯ ಅಮರ ಪುತ್ರರು' ಎಂಬ ಅಧ್ಯಾಯವನ್ನು ಸೇರ್ಪಡೆ ಮಾಡಿರೋದು ವಿರೋಧಿಗಳ ಕೆಂಗಣ್ಣಿಗೆ ಗುರಿಯಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications