ಕಳೆದ ವರ್ಷ ಮೋದಿಗೆ, ಈ ವರ್ಷ ಅಮೆರಿಕ ಅಧ್ಯಕ್ಷರಿಗೆ ಮಾಸ್ಕ್ ಕಳುಹಿಸಿದ ದಾವಣಗೆರೆ ಕುಟುಂಬ!
ದಾವಣಗೆರೆ, ಮೇ 10: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಸ್ಕ್ ಕಳುಹಿಸಿಕೊಟ್ಟು ಗಮನ ಸೆಳೆದಿದ್ದ ದಾವಣಗೆರೆ ನಗರದ ಎಂಸಿಸಿ ಬಿ ಬ್ಲಾಕ್ ನ ನಿವಾಸಿ ಕೆ.ಪಿ ವಿವೇಕಾನಂದ ಕುಟುಂಬ, ಈ ಬಾರಿ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಾಗೂ ಉಪಾಧ್ಯಕ್ಷೆ ಕಮಲ ಹ್ಯಾರಿಸ್ ಅವರಿಗೂ ವಿಶೇಷ ಮುಖಗವಸು(ಮಾಸ್ಕ್) ತಯಾರಿಸಿ ಕಳುಹಿಸಿಕೊಟ್ಟಿದ್ದಾರೆ. ತಲುಪಿರುವ ಬಗ್ಗೆ ಅಲ್ಲಿಂದ ಉತ್ತರವೂ ಬಂದಿದೆ.
ಟೈಲರಿಂಗ್ ಕೆಲಸ ಮಾಡುವ ವಿವೇಕಾನಂದ ಅವರಿಗೆ ಅವರ ಪತ್ನಿ ಶಾಂತ ಹಾಗೂ ಪುತ್ರಿ ಕಾವ್ಯ ಸಾಥ್ ಕೊಟ್ಟಿದ್ದಾರೆ. ಇನ್ನು ಮಾಸ್ಕ್ ಅನ್ನು ಮನೆಯಲ್ಲಿ ರೂಪಿಸಲಾಗಿದ್ದು, ಮೂರು ಲೇಯರ್ ಹೊಂದಿದೆ. ಉಸಿರಾಟಕ್ಕೂ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ. ಮೂಗು, ಬಾಯಿಗೆ ಸರಿಯಾಗಿ ಕೂರುವುದು ಈ ಮಾಸ್ಕ್ ನ ಸ್ಪೆಷಾಲಿಟಿ.
ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಘಟಾನುಘಟಿ ನಾಯಕರಿಗೆ ಮಾಸ್ಕ್ ಕಳುಹಿಸಿಕೊಡಲಾಗಿದೆ. ಇನ್ನು ಮಾಸ್ಕ್ ಸಿಕ್ಕಿರುವ ಬಗ್ಗೆ ಪ್ರತಿಕ್ರಿಯೆಯನ್ನು ಕಳುಹಿಸಿಕೊಟ್ಟಿದ್ದಾರೆ. ವೆಂಕಯ್ಯ ನಾಯ್ಡು ಅವರು ಮಾಸ್ಕ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕಳೆದ ವರ್ಷ ಲಾಕ್ ಡೌನ್ ವೇಳೆ ಮನೆಯಲ್ಲಿಯೇ ಇದ್ದ ವಿವೇಕಾನಂದ ಅವರು ಮಾಸ್ಕ್ ತಯಾರಿಸಲು ಮುಂದಾದರು. ಆಗ ಧರಿಸಿದವರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಸರಿ, ಬಿಳಿ ಹಾಗೂ ಹಸಿರು ಬಣ್ಣದ ಮಾಸ್ಕ್ ರೂಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಕಳುಹಿಸಿಕೊಟ್ಟಿದ್ದರು.

ಅದನ್ನು ಮೋದಿ ಅವರು ಧರಿಸಿದ ಫೋಟೋ ಸಾಕಷ್ಟು ವೈರಲ್ ಆಗಿತ್ತು. ಬಳಿಕ ಎಲ್ಲೆಡೆಯಿಂದ ಮಾಸ್ಕ್ ಗೆ ಬೇಡಿಕೆಗೆ ಬಂದಿತ್ತು. ಆದರೆ ಈಗ ಅಮೆರಿಕ ಅಧ್ಯಕ್ಷರಿಗೆ ಮಾಸ್ಕ್ ಕಳುಹಿಸಿಕೊಡುವ ಮೂಲಕ ದಾವಣಗೆರೆ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದೆ.

Recommended Video
"ನಾನು ನನ್ನ ಕುಟುಂಬದವರೆಲ್ಲರೂ ಸೇರಿ ಮಾಸ್ಕ್ ರೂಪಿಸುವ ಕಾರ್ಯದಲ್ಲಿ ತೊಡಗಿದ್ದೇವೆ. ಮೋದಿ ಅವರು ನಾವು ತಯಾರಿಸಿದ ಮಾಸ್ಕ್ ಧರಿಸಿದ್ದು ತುಂಬಾ ಖುಷಿ ನೀಡಿದೆ. ಅಮೆರಿಕ ಅಧ್ಯಕ್ಷರಿಗೆ ತಲುಪಿರುವ ಬಗ್ಗೆ ಉತ್ತರ ಬಂದಿರುವುದು ತುಂಬಾ ಸಂತಸ ತಂದಿದೆ. ಇದಕ್ಕೆಲ್ಲಾ ನನ್ನ ಪುತ್ರಿ ಕಾವ್ಯಳ ಪರಿಶ್ರಮವೇ ಕಾರಣ'' ಎಂದು ವಿವೇಕಾನಂದ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications