ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊರ ರಾಜ್ಯದಿಂದ ಬಂದವರ ಮೇಲೆ ಕಣ್ಣಿಡಲು ಕೆ.ಎಸ್.ಈಶ್ವರಪ್ಪ ಸೂಚನೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಏಪ್ರಿಲ್ 03: ಅನಗತ್ಯವಾಗಿ ರಸ್ತೆಗಳಲ್ಲಿ ಸಂಚಾರ ಮಾಡುವವರನ್ನು ನಿಯಂತ್ರಿಸಲು ಪೊಲೀಸರು ಕಟ್ಟುನಿಟ್ಟಿನ ಕ್ರಮ ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಸೂಚನೆ ನೀಡಿದ್ದಾರೆ.

ಮಾಯಕೊಂಡದ ಸಮುದಾಯ ಭವನದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, "ಪೊಲೀಸ್ ಇಲಾಖೆ ಅಧಿಕಾರಿಗಳು ಅನಗತ್ಯವಾಗಿ ಸಂಚಾರ ಮಾಡುವವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಸರ್ಕಾರಿ ನೌಕರರು ಯಾವುದಕ್ಕೂ ಚಿಂತಿಸದೆ ದೇಶಕ್ಕೆ ಸೇವೆ ಸಲ್ಲಿಸುವ ಸಮಯ ಬಂದಿದೆ. ಆದ್ದರಿಂದ ಯಾವುದೇ ಭೀತಿಗೆ ಒಳಗಾಗದೇ ಸೇವೆ ಸಲ್ಲಿಸಬೇಕು. ತಮ್ಮ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡುತ್ತಿರುವ ಆಶಾ ಕಾರ್ಯಕರ್ತೆಯರನ್ನು ರಕ್ಷಣೆ ಮಾಡಬೇಕು" ಎಂದರು.

ದಾವಣಗೆರೆಯಲ್ಲಿ ಮಿಲಿಟರಿ ನಿಯೋಜನೆ ಎಂದ ಸಚಿವ ಈಶ್ವರಪ್ಪದಾವಣಗೆರೆಯಲ್ಲಿ ಮಿಲಿಟರಿ ನಿಯೋಜನೆ ಎಂದ ಸಚಿವ ಈಶ್ವರಪ್ಪ

"ಹೊರ ರಾಜ್ಯಗಳಿಂದ ಬಂದವರ ಮೇಲೆ ಗಮನವಿರಬೇಕು. ವಿನಾ ಕಾರಣ ಪೆಟ್ರೋಲ್ ನೀಡದಂತೆ ಜಾಗೃತಿ ವಹಿಸಿ ಅಂತಹವರ ಮೇಲೆ ಅಗತ್ಯ ಕ್ರಮ ಕೈಗೊಳ್ಳಿ. ಮಸೀದಿಗಳಲ್ಲಿ ಹೆಚ್ಚು ಜನ ಸೇರದಂತೆ ನಿಗಾವಹಿಸಿ" ಎಂದು ಸೂಚಿಸಿದರು.

KS Eshwarappa Instructed To Keep Eye On Other States People

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏ. 5 ರಂದು ರಾತ್ರಿ 9 ಗಂಟೆಗೆ ಕರೆ ನೀಡಿರುವಂತೆ ನಾವೆಲ್ಲರೂ ಮೇಣದ ಬತ್ತಿ ಹಚ್ಚಿ ಒಗ್ಗಟ್ಟು ತೋರಿಸೋಣ ಎಂದರು.

English summary
KS Eshwarappa instructed officials to keep eye on other states people who are coming to district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X