ದಾವಣಗೆರೆ: ಕ್ಷತ್ರಿಯ ಮರಾಠ ಸಮಾಜದಿಂದ ಬೃಹತ್ ಪ್ರತಿಭಟನೆ
ದಾವಣಗೆರೆ, ಸೆ. 08: ರಾಜ್ಯ ಕ್ಷತ್ರಿಯ ಮರಾಠ ಸಮಾಜವನ್ನು ಪ್ರವರ್ಗ 3 (ಬಿ) ಯಿಂದ 2(ಎ) ಪ್ರವರ್ಗಕ್ಕೆ ಸೇರ್ಪಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕ್ಷತ್ರಿಯ ಮರಾಠ ವಿದ್ಯಾವರ್ಧಕ ಸಂಘದ ನೇತೃತ್ವದಲ್ಲಿ ಸಕಲ ಮರಾಠ ಸಮಾಜ, ಏಕ್ ಮರಾಠ ಲಾಕ್ ಮರಾಠಾ ಕ್ರಾಂತಿ ಮೋರ್ಚಾದಿಂದ ಬೃಹತ್ ಪ್ರತಿಭಟನಾ ಜಾಥಾ ನಡೆಸಲಾಗಿದೆ.
ನಗರದ ದುರ್ಗಾಂಬಿಕ ದೇವಸ್ಥಾನದ ಹತ್ತಿರದ ಛತ್ರಪತಿ ಶಿವಾಜಿ ಸರ್ಕಲ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು, ಉಪ ವಿಭಾಗಾಧಿಕಾರಿಗಳ ಮುಖೇನ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಪ್ರವರ್ಗ 3 (ಬಿ) ಯಲ್ಲಿ ಅನೇಕ ಮುಂದುವರೆದ ಮತ್ತು ಬಲ ಸಮಾಜಗಳಿರುವುದರಿಂದ ಕ್ಷತ್ರಿಯ ಮರಾಠ ಸಮಾಜ ಬಾಂಧವರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಲು ಹಾಗೂ ಸರ್ಕಾರದ ಸೌಲಭ್ಯಗಳನ್ನು ಪಡೆಯುವಲ್ಲಿ ವಂಚಿತರಾಗಿದ್ದಾರೆ.
ಮರಾಠ ಸಮಾಜವನ್ನು ಸದ್ಯ 3ಬಿಯಲ್ಲಿ ಸೇರಿಸಲಾಗಿದೆ. ಇದರಿಂದ ಸಮಾಜದ ವಿದ್ಯಾರ್ಥಿಗಳು ಸರ್ಕಾರಿ ಹಾಗೂ ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಶೇ.95ಕ್ಕಿಂತಲೂ ಹೆಚ್ಚು ಅಂಕ ಪಡೆದರೂ ಸೌಲಭ್ಯ ದೊರೆಯುತ್ತಿಲ್ಲ ಎಂದು ಪ್ರತಿಭಟನೆಯ ಮುಂದಾಳತ್ವ ವಹಿಸಿದ್ದ ಸಂಘದ ಗೌರವಾಧ್ಯಕ್ಷ ಯಶವಂತರಾವ್ ಜಾಧವ್ ಹೇಳಿದರು.
* ಉಪ ಪಂಗಡಗಳಾದ ಭಾವಸಾರ ಕ್ಷತ್ರಿಯ, ಸೂರ್ಯವಂಶಿ ಕ್ಷತ್ರಿಯ, ನಾಮದೇವ ಸಿಂಪಿ, ಸ್ವಕುಳಸಾಳಿ ಸಮಾಜ, ಸಹಸ್ರಾರ್ಜುನ ಆರ್ಯ ಕ್ಷತ್ರಿಯ, ಲಾಡ್ ಸಮಾರ ಈಗಾಗಲೇ 2ಎ ಪ್ರವರ್ಗದಲ್ಲಿವೆ. ಕರ್ನಾಟಕ ರಾಜ್ಯ ಸರ್ಕಾರದ ಹಿಂದುಳಿದ ಆಯೋಗದ ಶಿಫಾರಸ್ಸಿನಂತೆ ಕ್ಷತ್ರೀಯ ಸಮಾಜವನ್ನು 2ಎಗೆ ಸೇರಿಸಬೇಕೆಂದು ಆಗ್ರಹಿಸಿದರು.
* ಚನ್ನಗಿರಿ ತಾಲ್ಲೂಕಿನ ಹೊದಿಗೆರೆಯಲ್ಲಿರುವ ಷಹಾಜಿ ರಾಜೇ ಭೋಂಸ್ಲೆ ಅವರ ಸಮಾಧಿ ಸ್ಥಳವನ್ನು ಪುಣ್ಯ ಸ್ಥಳವೆಂದು ಘೋಷಿಸಿ ಸಮಗ್ರ ವಿಕಾಸಕ್ಕೆ ಪ್ರಾತಿನಿಧ್ಯ ಹಾಗೂ ಪ್ರೇಕ್ಷಣಿಯ ಸ್ಥಳದ ಮಾನ್ಯತೆ ನೀಡಬೇಕು. ಇಲ್ಲಿಯೇ ಸೈನಿಕ ಶಾಲೆಯನ್ನು ಆರಂಭಿಸಬೇಕು.
* ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಷಹಾಜಿ ರಾಜೇ ಭೋಂಸ್ಲೆ ಅವರ ಅಧ್ಯಯನ ಪೀಠ ಸ್ಥಾಪಿಸಬೇಕು. ದಾವಣಗೆರೆ ವಿವಿಗೆ ಛತ್ರಪತಿ ಶಿವಾಜಿ ಮಹಾರಾಜರ ಹೆಸರು ನಾಮಕರಣ ಮಾಡಬೇಕು.
* ಕಾಗಿನೆಲೆ, ಬಸವಕಲ್ಯಾಣ ಅಭಿವೃದ್ಧಿ ಪ್ರಾಧಿಕಾರ ರಚನೆಯಂತೆ ರಾಜ್ಯ ಕ್ಷತ್ರಿಯ ಪ್ರಾಧಿಕಾರ ರಚಿಸಬೇಕೆಂದು ಒತ್ತಾಯಿಸಿದರು.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications