ದಾವಣಗೆರೆಯಲ್ಲಿ ಕೆಎಸ್ಆರ್ಟಿಸಿ ನೌಕರರ ಧರಣಿ ಸತ್ಯಾಗ್ರಹ: ಸರ್ಕಾರದ ಮುಂದಿಟ್ಟ ಬೇಡಿಕೆಗಳೇನು..?
ರಾಜ್ಯದಲ್ಲಿ ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಾಗ ಪ್ರತಿಭಟನೆ ನಡೆಸುತ್ತಲೇ ಇದ್ದು, ಮಂಗಳವಾರ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ದಾವಣಗೆರೆ, ಜನವರಿ 24: ಹತ್ತು ವರ್ಷಕ್ಕೊಮ್ಮೆ ಆಯ್ಕೆ ಶ್ರೇಣಿಯ ಬಡ್ತಿ ಸೇವಾವಧಿ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ನೂತನ ಕಟ್ಟಡದ ಮುಂಭಾಗದಲ್ಲಿ ಸರ್ಕಾರಿ ನೌಕರರು ಧರಣಿ ಸತ್ಯಾಗ್ರಹ ನಡೆಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕೆಎಸ್ಆರ್ಟಿಸಿ ನೌಕರರು ಮೂಲ ವೇತನಕ್ಕೆ ಬಿಡಿಎ ಸಮ್ಮಿಳಿತಗೊಳಿಸಿ ಪರಿಷ್ಕೃತ ವೇತನ ಹೆಚ್ಚಳ ಮಾಡಿ ವೇತನ ಶ್ರೇಣಿ ಸಿದ್ಧಪಡಿಸಬೇಕು. ಮೂಲ ವೇತನಕ್ಕೆ ಬಿ.ಡಿ.ಎ ಸಮ್ಮಿಳಿತಗೊಳಿಸಿ ಪರಿಷ್ಕೃತ ಮೂಲ ವೇತನದ ಶೇ. 25 ರವನ್ನು ಹೆಚ್ಚಳ ಮಾಡಿ, ವೇತನ ಶ್ರೇಣಿಯನ್ನು ಸಿದ್ಧಪಡಿಸಬೇಕು. ಇನ್ಕ್ರಿಮೆಂಟ್ ದರ ಪರಿಷ್ಕೃತ ಮೂಲ ವೇತನದ ಶೇ.3 ಇರಬೇಕು. ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನು ಸಿದ್ಧಪಡಿಸಬೇಕು ಎಂದು ಆಗ್ರಹಿಸಿದರು.
ಚಾಲಕ, ನಿರ್ವಾಹಕರು, ತಾಂತ್ರಿಕ ಹಾಗೂ ಆಡಳಿತ ಸಿಬ್ಬಂದಿ, ಇತರ ಎಲ್ಲಾ ನೌಕರರಿಗೆ ಹಾಲಿ ಇರುವ ಬಾಟಾ, ಮಾಸಿಕ, ದೈನಂದಿನ ಭತ್ಯೆಗಳನ್ನು ಐದು ಪಟ್ಟು ಹೆಚ್ಚಿಸಬೇಕು. ಹೊಲಿಗೆ ಭತ್ಯೆ, ಶೂ, ಜೆರ್ಸಿ, ರೈನ್ ಕೋಟ್ ಇತ್ಯಾದಿಗಳಿಗೆ ಕೊಡಲಾಗುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು. ಎಲ್ಲಾ ನಿರ್ವಾಹಕರಿಗೆ ಕ್ಯಾಷಿಯರ್ಗಳಿಗೆ ಸಮಾನವಾದ ಕ್ಯಾಷ್ ಆಲೋವೆನ್ಸ್ ನೀಡಬೇಕು ಎಂದು ಒತ್ತಾಯಿಸಿದರು.

ಇ.ಎಸ್.ಐ ಮಾದರಿಯಲ್ಲಿ ಆಡಳಿತ ವರ್ಗದವರಿಂದ ನೌಕರರ ಮೂಲ ವೇತನದ ಶೇ. 35 ಹಾಗೂ ಕಾರ್ಮಿಕರಿಂದ ಶೇ. 0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಆ ಮೂಲಕ ಸಾರಿಗೆ ನೌಕರರಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಬೇಕು. ಈ ಸೌಲಭ್ಯವನ್ನು ನಿವೃತ್ತ ಕಾರ್ಮಿಕರಿಗೆ ಮತ್ತು ಅವರ ಪತಿ ಅಥವಾ ಪತ್ನಿಗೂ ನೀಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.
ಧರಣಿ ಮುಷ್ಕರದಲ್ಲಿ ದಾವಣಗೆರೆ ಸಾರಿಗೆ ವಿಭಾಗದ ಅಧ್ಯಕ್ಷ ಹೆಚ್.ಜಿ.ಉಮೇಶ್, ಪ್ರಧಾನ ಕಾರ್ಯದರ್ಶಿ ಮಿರ್ಜಾ ರೆಹಮತ್ ಉಲ್ಲಾ, ಪ್ರಕಾಶ್, ಹೆಚ್.ಹನುಮಂತಪ್ಪ, ಉಮೇದ್ ಉಲ್ಲಾ, ಕರಿಗೌಡಪ್ಪ, ಆನಂದ ನಾಯ್ಕ, ಎಂ.ಎನ್.ಲೋಕಪ್ಪ, ವಸಂತ್, ರಾಜೇಶ್ವರಿ ಹಾಗೂ ಇತರ ಸಾರಿಗೆ ನೌಕರರು ಪಾಲ್ಗೊಂಡಿದ್ದರು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್












Click it and Unblock the Notifications