ದಾವಣಗೆರೆಯಲ್ಲಿ ಕೆಎಸ್ಆರ್ಟಿಸಿ ನೌಕರರ ಧರಣಿ ಸತ್ಯಾಗ್ರಹ: ಸರ್ಕಾರದ ಮುಂದಿಟ್ಟ ಬೇಡಿಕೆಗಳೇನು..?
ರಾಜ್ಯದಲ್ಲಿ ಸಾರಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಾಗ ಪ್ರತಿಭಟನೆ ನಡೆಸುತ್ತಲೇ ಇದ್ದು, ಮಂಗಳವಾರ ದಾವಣಗೆರೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ದಾವಣಗೆರೆ, ಜನವರಿ 24: ಹತ್ತು ವರ್ಷಕ್ಕೊಮ್ಮೆ ಆಯ್ಕೆ ಶ್ರೇಣಿಯ ಬಡ್ತಿ ಸೇವಾವಧಿ ನೀಡಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೆಎಸ್ಆರ್ಟಿಸಿ ನೂತನ ಕಟ್ಟಡದ ಮುಂಭಾಗದಲ್ಲಿ ಸರ್ಕಾರಿ ನೌಕರರು ಧರಣಿ ಸತ್ಯಾಗ್ರಹ ನಡೆಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕೆಎಸ್ಆರ್ಟಿಸಿ ನೌಕರರು ಮೂಲ ವೇತನಕ್ಕೆ ಬಿಡಿಎ ಸಮ್ಮಿಳಿತಗೊಳಿಸಿ ಪರಿಷ್ಕೃತ ವೇತನ ಹೆಚ್ಚಳ ಮಾಡಿ ವೇತನ ಶ್ರೇಣಿ ಸಿದ್ಧಪಡಿಸಬೇಕು. ಮೂಲ ವೇತನಕ್ಕೆ ಬಿ.ಡಿ.ಎ ಸಮ್ಮಿಳಿತಗೊಳಿಸಿ ಪರಿಷ್ಕೃತ ಮೂಲ ವೇತನದ ಶೇ. 25 ರವನ್ನು ಹೆಚ್ಚಳ ಮಾಡಿ, ವೇತನ ಶ್ರೇಣಿಯನ್ನು ಸಿದ್ಧಪಡಿಸಬೇಕು. ಇನ್ಕ್ರಿಮೆಂಟ್ ದರ ಪರಿಷ್ಕೃತ ಮೂಲ ವೇತನದ ಶೇ.3 ಇರಬೇಕು. ಆಯ್ಕೆ ಶ್ರೇಣಿ ಹಾಗೂ ಉನ್ನತ ಶ್ರೇಣಿಗಳ ವೇತನ ಶ್ರೇಣಿಯನ್ನು ಸಿದ್ಧಪಡಿಸಬೇಕು ಎಂದು ಆಗ್ರಹಿಸಿದರು.
ಚಾಲಕ, ನಿರ್ವಾಹಕರು, ತಾಂತ್ರಿಕ ಹಾಗೂ ಆಡಳಿತ ಸಿಬ್ಬಂದಿ, ಇತರ ಎಲ್ಲಾ ನೌಕರರಿಗೆ ಹಾಲಿ ಇರುವ ಬಾಟಾ, ಮಾಸಿಕ, ದೈನಂದಿನ ಭತ್ಯೆಗಳನ್ನು ಐದು ಪಟ್ಟು ಹೆಚ್ಚಿಸಬೇಕು. ಹೊಲಿಗೆ ಭತ್ಯೆ, ಶೂ, ಜೆರ್ಸಿ, ರೈನ್ ಕೋಟ್ ಇತ್ಯಾದಿಗಳಿಗೆ ಕೊಡಲಾಗುವ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಬೇಕು. ಎಲ್ಲಾ ನಿರ್ವಾಹಕರಿಗೆ ಕ್ಯಾಷಿಯರ್ಗಳಿಗೆ ಸಮಾನವಾದ ಕ್ಯಾಷ್ ಆಲೋವೆನ್ಸ್ ನೀಡಬೇಕು ಎಂದು ಒತ್ತಾಯಿಸಿದರು.

ಇ.ಎಸ್.ಐ ಮಾದರಿಯಲ್ಲಿ ಆಡಳಿತ ವರ್ಗದವರಿಂದ ನೌಕರರ ಮೂಲ ವೇತನದ ಶೇ. 35 ಹಾಗೂ ಕಾರ್ಮಿಕರಿಂದ ಶೇ. 0.5 ವಂತಿಗೆ ಸಂಗ್ರಹಿಸಿ ಟ್ರಸ್ಟ್ ರಚಿಸಿ ಆ ಮೂಲಕ ಸಾರಿಗೆ ನೌಕರರಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡುವಂತೆ ಯೋಜನೆ ರೂಪಿಸಬೇಕು. ಈ ಸೌಲಭ್ಯವನ್ನು ನಿವೃತ್ತ ಕಾರ್ಮಿಕರಿಗೆ ಮತ್ತು ಅವರ ಪತಿ ಅಥವಾ ಪತ್ನಿಗೂ ನೀಡುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿದರು.
ಧರಣಿ ಮುಷ್ಕರದಲ್ಲಿ ದಾವಣಗೆರೆ ಸಾರಿಗೆ ವಿಭಾಗದ ಅಧ್ಯಕ್ಷ ಹೆಚ್.ಜಿ.ಉಮೇಶ್, ಪ್ರಧಾನ ಕಾರ್ಯದರ್ಶಿ ಮಿರ್ಜಾ ರೆಹಮತ್ ಉಲ್ಲಾ, ಪ್ರಕಾಶ್, ಹೆಚ್.ಹನುಮಂತಪ್ಪ, ಉಮೇದ್ ಉಲ್ಲಾ, ಕರಿಗೌಡಪ್ಪ, ಆನಂದ ನಾಯ್ಕ, ಎಂ.ಎನ್.ಲೋಕಪ್ಪ, ವಸಂತ್, ರಾಜೇಶ್ವರಿ ಹಾಗೂ ಇತರ ಸಾರಿಗೆ ನೌಕರರು ಪಾಲ್ಗೊಂಡಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications