KSRTC: ದಾವಣಗೆರೆ-ಮಂತ್ರಾಲಯಕ್ಕೆ ಪ್ರತಿನಿತ್ಯ ಎಸಿ ವೋಲ್ವೊ ಬಸ್ ಸೇವೆ
KSRTC: ಕೆಎಸ್ಆರ್ಟಿಸಿ ರಾಜ್ಯದ ಜೀವನಾಡಿ ಸಾರಿಗೆ ಆಗಿದೆ. ಇದು ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೊಸ ಮಾರ್ಗಗಳಿಗೆ ತನ್ನ ಸೇವೆಯನ್ನು ವಿಸ್ತರಿಸುತ್ತಲಿರುತ್ತದೆ. ಹಾಗೆಯೇ ಇದೀಗ ದಾವಣಗೆರೆ-ಮಂತ್ರಾಲಯಕ್ಕೆ ಪ್ರತಿ ನಿತ್ಯ ಹವಾನಿಯಂತ್ರಿತ ವೋಲ್ಟ್ ಬಸ್ ಸೌಲಭ್ಯವನ್ನು ಆರಂಭಿಸಿದೆ. ಹಾಗಾದ್ರೆ ಸಮಯ ಹಾಗೂ ಮಾರ್ಗಗಳ ವಿವರನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕರುನಾಡ ರಥ ಅಂತಲೇ ಹೆಸರುವಾಸಿಯಾಗಿರುವ ಕೆಎಸ್ಆರ್ಟಿಸಿ ಆಗಾಗ ಕೈಗೆಟಕುವ ದರದಲ್ಲಿ ಟೂರ್ ಪ್ಯಾಕೇಜ್ಗಳನ್ನು ಘೋಷಣೆ ಮಾಡುತ್ತಲಿರುತ್ತದೆ. ಜೊತೆಗೆ ಪ್ರಯಾಣಿಕರ ಬೇಡಿಕೆ ತಕ್ಕಂತೆ ಹೊಸ ಮಾರ್ಗಗಳಲ್ಲಿ ಬಸ್ ಸೇವೆಯನ್ನು ನೀಡುತ್ತಲೇ ಬಂದಿದೆ. ಹಾಗೆಯೇ ಇದೀಗ ದಾವಣಗೆರೆ-ಮಂತ್ರಾಲಯಕ್ಕೆ ಪ್ರತಿ ನಿತ್ಯ ಹವಾನಿಯಂತ್ರಿತ ವೋಲ್ಟ್ ಬಸ್ ಸೇವೆ ಆರಂಭ ಮಾಡಿದೆ.

ದಾವಣಗೆರೆ ಜಿಲ್ಲೆ ಪ್ರಯಾಣಿಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಕೆಎಸ್ಆರ್ಟಿಸಿ ಮಂತ್ರಾಲಯಕ್ಕೆ ಪ್ರತಿ ನಿತ್ಯ ಹವಾನಿಯಂತ್ರಿತ (AC) ವೋಲ್ಟ್ ಬಸ್ ಸೌಲಭ್ಯವನ್ನು ಕಲ್ಪಿಸಿದೆ. ಈ ಬಸ್ ಪ್ರತಿ ನಿತ್ಯ ರಾತ್ರಿ 9 ಗಂಟೆಗೆ ದಾವಣಗೆರೆ ಹೊಸ ಬಸ್ ನಿಲ್ದಾಣದಿಂದ ಹೊರಡುತ್ತದೆ. ಬಸ್ ಚಿತ್ರದುರ್ಗ, ಬಳ್ಳಾರಿ ಮೂಲಕ ಬೆಳಗ್ಗೆ 4ಗಂಟೆಗೆ ಮಂತ್ರಾಲಯಕ್ಕೆ ತಲುಪಲಿದೆ. ನಂತರ ಅದೇ ದಿನ ಬೆಳಗ್ಗೆ 11 ಗಂಟೆಗೆ ಮಂತ್ರಾಲಯದಿಂದ ಹೊರಡಲಿದ್ದು, ಸಂಜೆ 6 ಗಂಟೆಗೆ ದಾವಣಗೆರೆಗೆ ವಾಪಾಸ್ ಆಗಲಿದೆ.
ದಾವಣಗೆರೆಯಿಂದ ಮಂತ್ರಾಲಯ ರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವವರಿಗೆ ಈ ಸೇವೆ ತುಂಬಾ ಅನುಕೂಲ ಆದಂತಾಗಲಿದೆ. ಇನ್ಮುಂದೆ ದಾವಣಗೆರೆಯಿಂದ ಮಂತ್ರಾಲಯಕ್ಕೆ ಹೋಗುವವರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕೌಂಟರ್ ಅಥವಾ ksrtc.karnataka.gov.in ಸಂಪರ್ಕಿಸಿ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದಾಗಿದೆ ಎಂದು ಕೆಎಸ್ಆರ್ಟಿಸಿ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಎಸ್.ಶಿವಕುಮಾರಯ್ಯ ತಿಳಿಸಿದ್ದಾರೆ.
ಈಗಾಗಲೇ ಈ ಬಸ್ಗೆ ಸಂಸದೆ ಡಾ.ಪ್ರಭಾಮಲಿಕಾರ್ಜುನ್ ನವೆಂಬರ್ 25ರ ಮಂಗಳವಾರ ಚಲಾನೆ ನೀಡಿದ್ದಾರೆ. ಪ್ರಯಾಣಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕೆಎಸ್ಆರ್ಟಿಸಿ ಮನವಿ ಮಾಡಿದೆ. ಕೆಎಸ್ಆರ್ಟಿಸಿ ಇಂತಹ ಸೇವೆಗಳನ್ನು ಕಲ್ಪಿಸುತ್ತಿರುವುದು ಇದೇ ಮೊದಲೇನಲ್ಲ. ಹಿಂದಿನಿಂದಲೂ ಸಹ ಪ್ರಯಾಣಿಕರ ಬೇಡಿಕೆ ಮೇರೆ ತನ್ನ ಸೇವೆಯನ್ನು ವಿಸ್ತರಣೆ ಮಾಡುತ್ತಾ ಬಂದಿದೆ.
ದಾವಣಗೆರೆ-ಶ್ರೀಶೈಲಕ್ಕೆ 'ಪಲ್ಲಕ್ಕಿ' ಸೇವೆ: ಇತ್ತೀಚೆಗಷ್ಟೇ ಕೆಎಸ್ಆರ್ಟಿಸಿ ದಾವಣಗೆರೆ ವಿಭಾಗದಿಂದ ಪ್ರತಿನಿತ್ಯ ಹವಾನಿಯಂತ್ರಿತ ರಹಿತ ಸ್ಲೀಪರ್ ಪಲ್ಲಕ್ಕಿ ಸಾರಿಗೆ ಸೌಕರ್ಯವನ್ನು ಪ್ರಯಾಣಿಕರ ಹಿತದೃಷ್ಠಿಯಿಂದ ದಾವಣಗೆರೆಯಿಂದ ಶ್ರೀಶೈಲಕ್ಕೆ ಆರಂಭಿಸಲಾಗಿದೆ. ಸಮಯ, ದರ, ಯಾವ ಮಾರ್ಗಗಲ್ಲಿ ಸಂಚಾರ ಮಾಡಲಿದ ಎನ್ನುವ ಪ್ರಶ್ನೆಗಳಿಗೆ ಉತ್ತರವನ್ನು ಇಲ್ಲಿ ನೀಡಲಾಗಿದೆ.
ದಾವಣಗೆರೆಯಿಂದ-ಹರಿಹರ-ಹರಪನಹಳ್ಳಿ-ಹೊಸಪೇಟೆ-ಬಳ್ಳಾರಿ-ಶ್ರೀಶೈಲಂಗೆ ಸಂಜೆ 5:15ಕ್ಕೆ ಹೊರಟು ಬೆಳಗ್ಗೆ 6.30 ಗಂಟೆಗೆ ತಲುಪುತ್ತದೆ. ಪ್ರಯಾಣ ದರ 1,216 ರೂಪಾಯಿ ನಿಗದಿಪಡಿಸಲಾಗಿದೆ. ಶ್ರೀಶೈಲ-ಬಳ್ಳಾರಿ-ಹೊಸಪೇಟೆ-ಹರಪನಹಳ್ಳಿ-ಹರಿಹರ-ದಾವಣಗೆರೆಗೆ ಸಂಜೆ 5:15ಕ್ಕೆ ಹೊರಟು ಬೆಳಗ್ಗೆ 6.30ಕ್ಕೆ ತಲುಪುತ್ತದೆ. ಮುಂಗಡ ಬುಕ್ಕಿಂಗ್ ಕೌಂಟರ್ಳಲ್ಲಿ ಹಾಗೂ ksrtc.karnataka.gov.inಗೆ ಭೇಟಿ ನೀಡಿ ಆನ್ಲೈನ್ನಲ್ಲಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ. ಹೀಗೆ ಕೆಎಸ್ಆರ್ಟಿಸಿ ಪ್ರಯಾಣಿಕೆ ಬೇಡಿಕೆ ಮೇರೆಗೆ ಅವರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಹೊಸ ಮಾರ್ಗಗಳಲ್ಲಿ ಬಸ್ ಸೇವೆಯನ್ನು ಕಲ್ಪಿಸುತ್ತಲೇ ಬಂದಿದೆ. ಇಂತಹ ಸೇವೆಗಳಿಗೆ ಪ್ರಯಾಣಿಕರಿಂದ ಭಾರೀ ಮೆಚ್ಚುಗೆಗಳ ಸರಮಾಲೆಯೇ ಹರಿದುಬರುತ್ತಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications