ದಾವಣಗೆರೆ ಜಿ.ಪಂ ನೂತನ ಅಧ್ಯಕ್ಷರಾಗಿ ಕೆ.ವಿ ಶಾಂತಕುಮಾರಿ ಆಯ್ಕೆ
ದಾವಣಗೆರೆ, ಡಿಸೆಂಬರ್ 23: ದಾವಣಗೆರೆ ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಜಗಳೂರು ತಾಲ್ಲೂಕು ದೊಣ್ಣೆಹಳ್ಳಿ ಕ್ಷೇತ್ರದ ಜಿ.ಪಂ ಸದಸ್ಯೆ ಕೆ.ವಿ. ಶಾಂತಕುಮಾರಿ ಅವರು ಆಯ್ಕೆಯಾದರು.
ಈ ಹಿಂದೆ ಜಿಲ್ಲಾ ಪಂಚಾಯತಿ ಅಧ್ಯಕ್ಷರಾಗಿದ್ದ ದೀಪಾ ಜಗದೀಶ್ ಅವರ ರಾಜೀನಾಮೆಯಿಂದ ಕಳೆದ ಡಿ.8 ರಿಂದ ತೆರವಾಗಿದ್ದ ಸ್ಥಾನಕ್ಕೆ ಬುಧವಾರದಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಚುನಾವಣೆ ಪ್ರಕ್ರಿಯೆ ಜರುಗಿತು.
ಅಧ್ಯಕ್ಷ ಸ್ಥಾನ ಸಾಮಾನ್ಯ (ಮಹಿಳೆ) ವರ್ಗಕ್ಕೆ ಮೀಸಲಿರಿಸಲಾಗಿತ್ತು. ಬುಧವಾರ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ನಿಗದಿಪಡಿಸಲಾಗಿದ್ದ ಕಾಲಮಿತಿಯಲ್ಲಿ ಕೆ.ವಿ ಶಾಂತಕುಮಾರಿ ಅವರು ಮಾತ್ರ ಎರಡು ನಾಮಪತ್ರವನ್ನು ಸಲ್ಲಿಸಿದರು.

ಮಧ್ಯಾಹ್ನ 3 ಗಂಟೆಗೆ ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರು ನಾಮಪತ್ರ ಪರಿಶೀಲಿಸಿ, ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಪ್ರಕಟಿಸಿದರು. ಒಬ್ಬರೇ ಅಭ್ಯರ್ಥಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ, ಕೆ.ವಿ.ಶಾಂತಕುಮಾರಿ ಅವರು ಜಿಲ್ಲಾ ಪಂಚಾಯತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ನವೀನ್ ರಾಜ್ ಸಿಂಗ್ ಅವರು ಘೋಷಿಸಿದರು.
ಜಿಲ್ಲಾ ಪಂಚಾಯತಿಯ ಒಟ್ಟು 29 ಸದಸ್ಯರ ಪೈಕಿ, ಸಂತೆಬೆನ್ನೂರು ಕ್ಷೇತ್ರದ ಜಿ.ಪಂ ಸದಸ್ಯ ಪಿ.ವಾಗೀಶ್ ಅವರು ಕಳೆದ ನ.5 ರಂದು ಮರಣ ಹೊಂದಿದ್ದರಿಂದ ಜಿ.ಪಂ ಸದಸ್ಯರ ಸಂಖ್ಯಾಬಲ 28ಕ್ಕೆ ಇಳಿದಿದೆ. ಚುನಾವಣೆ ಸಂದರ್ಭದಲ್ಲಿ ಒಟ್ಟು 28 ಜಿ.ಪಂ ಸದಸ್ಯರುಗಳ ಪೈಕಿ 19 ಸದಸ್ಯರು ಹಾಜರಿದ್ದರು.
ಎಂ.ಆರ್.ಮಹೇಶ್, ಅರ್ಚನಾ ಬಸವರಾಜ, ಬಸವರಾಜ ಕೆ.ಎಸ್., ಜಿ.ಸಿ. ನಿಂಗಪ್ಪ ಹದಡಿ, ರೇಣುಕ ಕರಿಬಸಪ್ಪ, ಕೆ.ಹೆಚ್.ಓಬಳಪ್ಪ, ಬಿ.ಫಕೀರಪ್ಪ, ತೇಜಸ್ವಿ ವಿ.ಪಾಟೀಲ್, ಎಂ.ಯೋಗೇಶ ಸೇರಿದಂತೆ ಜಿಲ್ಲಾ ಪಂಚಾಯತಿಯ ಒಟ್ಟು 9 ಸದಸ್ಯರು ಗೈರು ಹಾಜರಾಗಿದ್ದರು.

ಜಿಲ್ಲಾ ಪಂಚಾಯತ್ ನೂತನ ಅಧ್ಯಕ್ಷರ ಅಧಿಕಾರ ಅವಧಿಯು 2020ರ ಡಿಸೆಂಬರ್ 23 ರಿಂದ 2021ರ ಮೇ. 2 ರವರೆಗೆ ಸೀಮಿತವಾಗಿರುತ್ತದೆ ಎಂದು ಚುನಾವಣಾಧಿಕಾರಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ರಾಜ್ ಸಿಂಗ್ ಅವರು ಘೋಷಿಸಿದರು, ಅಲ್ಲದೆ ನೂತನ ಅಧ್ಯಕ್ಷರಿಗೆ ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ ಬಸವಂತಪ್ಪ, ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Recommended Video
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications