ದಾವಣಗೆರೆ: ಸರ್ಕಾರಿ ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ, ಇದರಿಂದ ಏನೆಲ್ಲಾ ಪ್ರಯೋಜನೆಗಳಾಗಲಿವೆ?
ದಾವಣಗೆರೆ, ಫೆಬ್ರವರಿ, 28: ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ, ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್ ಬೀಟ್ ವ್ಯವಸ್ಥೆ ಜಾರಿಗೆ ಬಂದಿದ್ದು, ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ತಿಗಳ ಒತ್ತುವರಿಗೆ ಅವಕಾಶ ಇಲ್ಲ.
ದಾವಣಗೆರೆ ಕಸಬಾ ಹೋಬಳಿಯ ದೊಡ್ಡಬಾತಿ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್ ಅವರು, ಭೇಟಿ ನೀಡಿ ಅಲ್ಲಿನ ಸರ್ವೆ ನಂಬರ್ 34ರಲ್ಲಿನ ಸರ್ಕಾರಿ ಸ್ಮಶಾನದ ಜಮೀನನ್ನು ಸ್ವತಃ ಆಪ್ ಮೂಲಕ ಸರ್ವೆ ಮಾಡಿ ಒತ್ತುವರಿ ಇಲ್ಲದಿರುವುದನ್ನು ಖಚಿತಪಡಿಸಿಕೊಂಡು ಜಿಯೋ ಫೆನ್ಸಿಂಗ್ ಮಾಡಿದ್ದಾರೆ.

ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಸರ್ಕಾರ ಹೊಸ ತಂತ್ರಾಂಶವನ್ನು ಅಭಿವೃದ್ದಿಪಡಿಸಿದೆ. ಈ ತಂತ್ರಾಂಶದ ಮೂಲಕ ಗ್ರಾಮ ಆಡಳಿತಾಧಿಕಾರಿಗಳು ಸರ್ಕಾರದ ಎಲ್ಲಾ ಜಮೀನುಗಳಿಗೆ ಜಿಯೋಫೆನ್ಸಿಂಗ್ ಮಾಡುತ್ತಾರೆ. ಈ ಆಪ್ ಮೂಲಕ ಜಿಯೋ ಫೆನ್ಸಿಂಗ್ ಮಾಡಿ, ಒತ್ತುವರಿ ಮಾಡಿದ್ದಲ್ಲಿ ಅಂತಹ ಆಸ್ತಿಗಳ ವಿವರ ಲಭ್ಯವಾಗುತ್ತದೆ. ಈ ಸ್ಥಳಗಳಿಗೆ ನಿಗದಿತ ಅವಧಿಯಲ್ಲಿ ಭೇಟಿ ನೀಡಲು ಯಾವ ರೀತಿ ಪೊಲೀಸ್ ಬೀಟಿಂಗ್ ವ್ಯವಸ್ಥೆ ಇರುತ್ತದೆ, ಅದೇ ರೀತಿ ಸರ್ಕಾರಿ ಆಸ್ತಿಗಳ ಸಂರಕ್ಷಣೆ ಮಾಡಲು ಬೀಟಿಂಗ್ ವ್ಯವಸ್ಥೆಯನ್ನು ಆಪ್ನಲ್ಲಿ ಕಲ್ಪಿಸಲಾಗಿದೆ.
ಈ ಆಪ್ ಮೂಲಕ ಪ್ರಾಯೋಗಿಕ ಸರ್ವೆಯನ್ನು ದೊದ್ದಬಾತಿಯಲ್ಲಿ ಜಿಲ್ಲಾಧಿಕಾರಿಯವರು ಖುದ್ದು ಕೈಗೊಂಡು ಸರ್ವೆ ನಂಬರ್ 34ರಲ್ಲಿ ಸರ್ಕಾರಿ ಸ್ಮಶಾನ ಭೂಮಿ ಒತ್ತುವರಿಯಾಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಖಚಿತಪಡಿಸಿಕೊಂಡರು.
ಈ ಭೂಮಿಯು ಒತ್ತುವರಿಯಾಗಿರುವುದಿಲ್ಲ ಎಂಬುದು ಇದರಿಂದ ಮಾಹಿತಿ ಲಭ್ಯವಾಯಿತು. ಆಪ್ ಮೂಲಕ ಎಲ್ಲಾ ಸರ್ಕಾರಿ ಜಮೀನು, ಜಾಗಗಳನ್ನು ಸರ್ವೆ ಮಾಡಿ ಜಿಯೋ ಫೆನ್ಸಿಂಗ್ ಮಾಡುವ ಮೂಲಕ ದತ್ತಾಂಶ ಸಂಗ್ರಹಕ್ಕೆ ಸೂಚನೆ ನೀಡಲಾಗಿದೆ ಎಂದು ವೆಂಕಟೇಶ್ ಅವರು ತಿಳಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳೊಂದಿಗೆ ತಹಶೀಲ್ದಾರ್ ಡಾ.ಅಶ್ವತ್ಥ್ ಹಾಗೂ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತಾಧಿಕಾರಿಗಳು ಸೇರಿದಂತೆ ಮತ್ತತರರು ಉಪಸ್ಥಿತರಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications