ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ; ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದವನಿಗೆ ಜೀವಾವಧಿ ಶಿಕ್ಷೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಅಕ್ಟೋಬರ್ 16: ಪತ್ನಿ ಶೀಲ ಶಂಕಿಸಿ ಆಕೆಯನ್ನು ಕೊಲೆ ಮಾಡಿದ್ದ ವ್ಯಕ್ತಿಗೆ ದಾವಣಗೆರೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 1 ಲಕ್ಷದ 5,500 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ನಗರದ ಕೆಟಿಜೆ ನಗರ ವಾಸಿ ಶಂಕರ ಶಿಕ್ಷೆಗೆ ಗುರಿಯಾಗಿರುವ ಆರೋಪಿ. 2016ರ ನವೆಂಬರ್ 5ರಂದು ಈತ ಪತ್ನಿ ವೀಣಾಳೊಂದಿಗೆ ಜಗಳ ಮಾಡಿ, ಆಕೆಯ ಶೀಲ ಶಂಕಿಸಿ ಈಳಿಗೆ ಮಣೆ, ಬಿದುರಿನ ಕೋಲಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದ. ಜಗಳ ಬಿಡಿಸಲು ಬಂದ ಮಕ್ಕಳಿಗೂ ಪ್ರಾಣ ಬೆದರಿಕೆ ಹಾಕಿದ್ದ. ಈ ಬಗ್ಗೆ ಕೆಟಿಜೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Davanagere: Life Imprisonment For Man Allegedly Killing His Wife

 ದಾವಣಗೆರೆ: ಮುದ್ದೆಯಲ್ಲಿ ನಿದ್ದೆ ಮಾತ್ರೆ ಹಾಕಿ ಪತಿ ಕೊಲೆ ದಾವಣಗೆರೆ: ಮುದ್ದೆಯಲ್ಲಿ ನಿದ್ದೆ ಮಾತ್ರೆ ಹಾಕಿ ಪತಿ ಕೊಲೆ

Recommended Video

Political Popcorn with Lavanya : Dr BL Shankar, ನನ್ ಜೀವನದಲ್ಲಿ ನಾನು ಮಾಡಿದ ಎರಡು ತಪ್ಪು ಯಾವುದು ಗೊತ್ತಾ??

ಆಗಿನ ಸಿಪಿಐ ಜಿ. ಸಂಗನಾಥ ಪ್ರಕರಣದ ತನಿಖೆ ನಡೆಸಿ, ಆರೋಪಿ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ಸುದೀರ್ಘ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ. ಗೀತಾ ಅವರು ಇಂದು ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿದ್ದಾರೆ. ಮೃತಳ ಮಕ್ಕಳಿಗೆ ಪರಿಹಾರವಾಗಿ ತಲಾ 20 ಸಾವಿರ ನೀಡುವಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರ ಸರ್ಕಾರಿ ಅಭಿಯೋಜಕರಾದ ಎಸ್.ವಿ. ಪಾಟೀಲ್, ಕೆ.ನಾಗರಾಜ ಆಚಾರ್ ವಾದ ಮಂಡಿಸಿದ್ದರು.

English summary
The district and sessions court in Davanagere have sentenced a man life imprisonment for allegedly murdering his wife in 2016
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X