ಸೆಪ್ಟೆಂಬರ್ 20ರಂದು ದಾವಣಗೆರೆಯಲ್ಲಿ ಮದ್ಯ ಮಾರಟ ನಿಷೇಧ: ಕಾರಣ ತಿಳಿಯಿರಿ
ದಾವಣಗೆರೆ, ಸೆಪ್ಟೆಂಬರ್ 19: ವಿಶೇಷ ಕಾರ್ಯಕ್ರಮಗಳು, ಕೆಲ ಹಬ್ಬಗಳ ದಿನದಂದು ಮುಂಜಾಗ್ರತಾ ಕ್ರಮವಾಗಿ ಬಾರ್ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ. ಹಾಗೆಯೇ ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 20ರ ಶನಿವಾರದಂದು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಹಾಗಾದ್ರೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗಣೇಶ ಹಬ್ಬವನ್ನು ದೇಶಾದ್ಯಂತ ಆಚರಣೆ ಮಾಡುತ್ತಿದ್ದಾರೆ. ಆದರೆ, ಮೆರವಣಿಗೆ ದಿನಾಂಕಗಳು ಒಂದೇ ದಿನ ಇರುವುದಿಲ್ಲ. ಈಗಾಗಲೇ ಹಲವೆಡೆ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಗಳು ಮುಗಿದಿದ್ದು, ಕೆಲವೆಡೆ ಯಾವುದೇ ಅಹಿತಕರ ನಡೆಯದಂತೆ ಶಾಂತಿಯಿಂದ ಮೆರವಣಿಗೆಗಳು ನಡೆದಿವೆ. ಇನ್ನೂ ಕೆಲವು ಕಡೆಗಳಲ್ಲಿ ಗಲಾಟೆಗಳು ನಡೆದಿವೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಂದಿನ ದಿನಗಳಲ್ಲಿ ಇರುವ ಗಣೇಶ ವಿಸರ್ಜನೆ ಮೆರವಣಿಗೆಗಳಿಗೆ ಸೂಕ್ತ ಭದ್ರತೆಯನ್ನು ಪೊಲೀಸ್ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ.

ಯಾವುದೇ ಅನಾಹುತಗಳು ಸಂಭವಿಸಬಾರದು ಎನ್ನುವ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತಿದೆ. ಹಾಗೆಯೇ ಇದೀಗ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಸೆಪ್ಟೆಂಬರ್ 20ರಂದು ನಡೆಯಲಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ. ಯಾಕಂದ್ರೆ, ಕೆಲವರು ಮದ್ಯ ಸೇವನೆ ಮಾಡಿ ಗಲಾಟೆ ಮಾಡಬಹುದು ಎನ್ನುವ ಕಾರಣದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.
ಬಹುತೇಕ ಕಡೆಗಳಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಗಳು ಮುಗಿದಿದ್ದು, ಕೆಲವೆಡೆ ಇನ್ನೂ ಬಾಕಿ ಇವೆ. ಹಾಗೆಯೇ ಶನಿವಾರ ದಾವಣಗೆರೆಯಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಇದ್ದು, ಈ ಹಿನ್ನೆಲೆ ನಗರದಲ್ಲಿ ಪೊಲೀಸರು ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ದೃಷ್ಟಿಯಿಂದ ಈ ದಿನ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಪಕ್ಕದ ಜಿಲ್ಲೆ ಚಿತ್ರದುರ್ಗದಲ್ಲೂ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬರೀ ಚಿತ್ರದುರ್ಗ ಅಷ್ಟೇ ಅಲ್ಲದೆ, ಅಕ್ಕಪಕ್ಕದ ಜಿಲ್ಲೆಗಳಿಂದಲೂ ಸಹ ಅಪಾರ ಸಂಖ್ಯೆಯಲ್ಲಿ ಜನರು ಬಂದು ಇಲ್ಲಿನ ಡಿಜೆಗೆ ಹೆಜ್ಜೆ ಹಾಕಿದರು. ಜೊತೆಗೆ ಯುವಕ, ಯುವತಿಯರು ಸಹ ಡಿಜೆ ಸೌಂಡ್ಗೆ ಹೆಜ್ಜೆ ಹಾಕಿ ಗಮನ ಸೆಳೆದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ











Click it and Unblock the Notifications