ಲಾಕ್ ಡೌನ್ ಘೋಷಣೆ; ಮದ್ಯ ಖರೀದಿಗೆ ಮುಗಿಬಿದ್ದ ಜನ!
ದಾವಣಗೆರೆ, ಏಪ್ರಿಲ್ 26; ಕರ್ನಾಟಕ ಸರ್ಕಾರ ಕೋವಿಡ್ ಹರಡುವಿಕೆ ತಡೆಯಲು 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ. ಬುಧವಾರ ರಾತ್ರಿಯಿಂದ ಲಾಕ್ ಡೌನ್ ಜಾರಿಗೆ ಬರಲಿದೆ.
ಲಾಕ್ ಡೌನ್ ಘೋಷಣೆಯಾಗುತ್ತಿದ್ದಂತೆ ಮದ್ಯ ಖರೀದಿಸಲು ಮದ್ಯಪ್ರಿಯರು ಬೆಣ್ಣೆನಗರಿ ದಾವಣಗೆರೆಯಲ್ಲಿ ಮುಗಿಬಿದ್ದಿದ್ದಾರೆ. ನಗರದಲ್ಲಿ ವೈನ್ ಶಾಪ್ ಹಾಗೂ ಎಂಐಎಸ್ಎಲ್ಗಳ ಮುಂದೆ ಜನರು ಜಮಾಯಿಸಿದ ದೃಶ್ಯ ಕಂಡು ಬರುತ್ತಿದೆ.
ದಾವಣಗೆರೆ ನಗರದಲ್ಲಿ ಮದ್ಯದಂಗಡಿಗಳು ಫುಲ್ ರಶ್ ಆಗಿದ್ದು, ಮದ್ಯದ ವಹಿವಾಟು ಜೋರಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಲಾಕ್ ಡೌನ್ ಘೋಷಣೆ ಮಾಡಿದ ಬಳಿಕ ಪಾನಪ್ರಿಯರು ಮದ್ಯದಂಗಡಿಗಳಿಗೆ ಆಗಮಿಸುತ್ತಿದ್ದಾರೆ.

ಚೀಲದಲ್ಲಿ, ಡಬ್ಬಗಳಲ್ಲಿ, ಸ್ಕೂಟಿ ಹಾಗೂ ಕಾರ್ ಗಳಲ್ಲಿ ಬಂದು ಅಗತ್ಯಕ್ಕೆ ತಕ್ಕಷ್ಟು ಪಾರ್ಸೆಲ್ ತೆಗೆದುಕೊಂಡು ಹೋಗುತ್ತಿದ್ದಾರೆ. ಪರಿಣಾಮ ದಾವಣಗೆರೆಯ ಬಾರ್ಗಳು ಇದೀಗ ಪಾನಪ್ರಿಯರಿಂದ ತುಂಬಿ ತುಳುಕುತ್ತಿವೆ.
ಲಾಕ್ಡೌನ್ ಮಾಡಿದರೆ ಮುಂದೆ ಮದ್ಯದ ಸಿಗಲ್ಲ ಎಂಬ ಭಯದಿಂದ ವಾರ ಮತ್ತು ಎರಡು ವಾರಕ್ಕೆ ಸ್ಟಾಕ್ ಇರಲಿ ಎಂದು ಇಂದೇ ಸಂಗ್ರಹವನ್ನು ಆರಂಭಿಸಿದ್ದಾರೆ. ಕಳೆದ ವರ್ಷ ಲಾಕ್ ಡೌನ್ ಮಾಡಿದಾಗ ಮದ್ಯಪ್ರಿಯರು ಪರದಾಡಿದ್ದರು.
ಲಾಕ್ ಡೌನ್ ಘೋಷಣೆ ಮಾಡಿದರೂ ಬೆಳಗ್ಗೆ 6 ರಿಂದ 10 ಗಂಟೆಯ ತನಕ ಮದ್ಯದಂಗಡಿಗಳು ತೆರೆದಿರುತ್ತವೆ ಎಂದು ಸ್ಪಷ್ಟನೆ ನೀಡಲಾಗಿದೆ. ಆದರೆ, ಜನರು ಮಾತ್ರ ಈಗಲೇ ಖರೀದಿಗೆ ತಾ ಮುಂದು ನಾ ಮುಂದು ಎಂದು ಮುಗಿಬಿದ್ದಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications