ಲಾಕ್ ಡೌನ್ ಹಿನ್ನೆಲೆ: ಬೆಂಗಳೂರಿನಿಂದ ದಾವಣಗೆರೆಗೆ ಬಂದಿರುವ ಜನರೆಷ್ಟು?
ದಾವಣಗೆರೆ, ಜುಲೈ 15: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಎರಡನೇ ಅವಧಿಗೆ ಲಾಕ್ಡೌನ್ ಜಾರಿಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಿಂದ ಎರಡು ದಿನಗಳ ಅವಧಿಯಲ್ಲಿ ಸುಮಾರು ಒಂದೂವರೆ ಸಾವಿರ ಜನ ದಾವಣಗೆರೆ ಜಿಲ್ಲೆಗೆ ಬಂದಿದ್ದಾರೆ.
Recommended Video
ಮಂಗಳವಾರ ರಾತ್ರಿಯಿಂದ ಬೆಂಗಳೂರು ನಗರ ಲಾಕ್ಡೌನ್ ಆಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಕೂಲಿ ಕಾರ್ಮಿಕರು, ಜನಸಾಮಾನ್ಯರು ಮೂರು ದಿನಗಳಿಂದ ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ರಾಜಧಾನಿಯಲ್ಲಿ ಕೋವಿಡ್ ನ ತೀವ್ರತೆಯಿಂದ ಆತಂಕಕ್ಕೊಳಗಾಗಿ ಹಲವರು ಕುಟುಂಬ ಸಮೇತ ಬಸ್ ಹಾಗೂ ಖಾಸಗಿ ವಾಹನಗಳಲ್ಲೂ ಜಿಲ್ಲೆಗೆ ಮರಳುತ್ತಿದ್ದಾರೆ.
'ಲಾಕ್ಡೌನ್ ಹಿನ್ನೆಲೆಯಲ್ಲಿ ಜನ ಊರಿಗೆ ಬರುತ್ತಿದ್ದಾರೆ. ಹೀಗಾಗಿ 50 ಬಸ್ಗಳನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿತ್ತು. ಸೋಮವಾರ ಬೆಂಗಳೂರಿನಿಂದ 34 ಬಸ್ಗಳಲ್ಲಿ ಸುಮಾರು ಒಂದು ಸಾವಿರ ಜನ ದಾವಣಗೆರೆಗೆ ಬಂದಿದ್ದರು.'

'ಮಂಗಳವಾರ ಬೆಳಿಗ್ಗೆಯೂ 20 ಬಸ್ಗಳನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಸಂಜೆ 4 ಗಂಟೆ ಹೊತ್ತಿಗೆ 10 ಬಸ್ಗಳಲ್ಲಿ ಸುಮಾರು 300 ಜನ ಜಿಲ್ಲೆಗೆ ಬಂದಿದ್ದಾರೆ. ಈಗಾಗಲೇ ಇನ್ನೂ 10 ಬಸ್ಗಳಲ್ಲಿ ಜನ ಬೆಂಗಳೂರಿನಿಂದ ಹೊರಟಿದ್ದಾರೆ' ಎಂದು ಕೆ.ಎಸ್.ಆರ್.ಟಿ.ಸಿ. ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ್ ಮಾಹಿತಿ ನೀಡಿದರು.
'ಲಾಕ್ಡೌನ್ ಜಾರಿಗೊಳ್ಳುತ್ತಿರುವುದರಿಂದ ನಮ್ಮ ವಿಭಾಗದ ಎಲ್ಲಾ ಬಸ್ಗಳನ್ನೂ ರಾತ್ರಿ 8 ಗಂಟೆಯೊಳಗೆ ಬೆಂಗಳೂರಿನಿಂದ ಜಿಲ್ಲೆಯತ್ತ ಹೊರಡಿಸುವಂತೆ ಈಗಾಗಲೇ ಸೂಚಿಸಿದ್ದೇವೆ. ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಸ್ವಲ್ಪ ಕಡಿಮೆ ಜನರಿದ್ದರು. ರಾತ್ರಿ ಹೊತ್ತು ಜಿಲ್ಲೆಗೆ ಬರಲು ಜನರಿಲ್ಲದಿದ್ದರೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಟ್ರಿಪ್ ಹೊಡೆಯುವಂತೆಯೂ ಸೂಚಿಸಿದ್ದೇವೆ' ಎಂದು ಸಿದ್ದೇಶ್ವರ ಹೆಬ್ಬಾಳ್ ಹೇಳಿದರು.
'ದಾವಣಗೆರೆ ಜಿಲ್ಲೆಯಲ್ಲೂ ಲಾಕ್ಡೌನ್ ಜಾರಿಗೊಳ್ಳುವ ಸಾಧ್ಯತೆ ಇದೆ ಎಂಬ ಆತಂಕದಿಂದ ಎರಡು ದಿನಗಳಿಂದ ಜನ ನಗರಕ್ಕೆ ಬಂದು ಅಗತ್ಯ ವಸ್ತುಗಳನ್ನು ಖರೀದಿಸಿ ಊರಿಗೆ ವಾಪಸ್ಸಾಗುತ್ತಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ 360 ಬಸ್ಗಳ ಪೈಕಿ 120 ಬಸ್ಗಳು ಮಾತ್ರ ಓಡಿಸುತ್ತಿದ್ದೆವು. ಜನ ಸಂಚಾರ ಹೆಚ್ಚಿದ್ದರಿಂದ ಸೋಮವಾರ ಹಾಗೂ ಮಂಗಳವಾರ 250 ಬಸ್ಗಳನ್ನು ಓಡಿಸಿದ್ದೇವೆ' ಎಂದು ಮಾಹಿತಿ ನೀಡಿದರು.
-
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ -
ಅಮೆರಿಕ ಮತ್ತು ಬ್ರಿಟನ್ ನಡುವೆ ಬಿರುಕು, ಡೊನಾಲ್ಡ್ ಟ್ರಂಪ್ ತೀವ್ರ ಅಸಮಾಧಾನ | Operation Roaring Lion












Click it and Unblock the Notifications