ಬಂಡಾಯ ಶಮನವಾಯ್ತು ಎನ್ನುವ ಹೊತ್ತಲ್ಲೇ ದಾವಣಗೆರೆ ಬಿಜೆಪಿಯಲ್ಲಿ ಮತ್ತೆ ಧಗಧಗ.! ಏನಾಯ್ತು?, ಇಲ್ಲಿದೆ ಮಾಹಿತಿ
ದಾವಣಗೆರೆ, ಮಾರ್ಚ್, 28: ಇನ್ನೇನೂ ದಾವಣಗೆರೆ ಜಿಲ್ಲಾ ಬಿಜೆಪಿಯಲ್ಲಿ ಭಿನ್ನಮತ ಶಮನವಾಯ್ತು ಅನ್ನೋವಷ್ಟರಲ್ಲಿ ಮತ್ತೆ ಭಿನ್ನ ರಾಗ ತಾರಕಕ್ಕೇರಿದೆ. ಅಲ್ಲದೆ, ದೂಡಾ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್ ಉಚ್ಚಾಟನೆಗೆ ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ ನೇತೃತ್ವದ 11 ಮಂದಿಯ ಲಗಾನ್ ಟೀಂ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದೆ.
ಅಪೂರ್ವ ರೆಸಾರ್ಟ್ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಹಾಗೂ ಬಿಜೆಪಿ ಭಿನ್ನಮತೀಯರ ಗುಂಪಿನ ನಡುವೆ ಸಂಧಾನ ಸಭೆ ನಡೆಸಿದ್ದರು. ಸಭೆಯ ಬಳಿಕ ಮಾತನಾಡಿದ್ದ ಮಾಜಿ ಸಿಎಂ ಯಡಿಯೂರಪ್ಪ ಅವರು ಆಲ್ ಇಸ್ ವೆಲ್. ಎಲ್ಲವೂ ಸರಿ ಹೋಗಿದೆ. ಅತಿ ಹೆಚ್ಚಿನ ಮತಗಳಿಂದ ಗಾಯತ್ರಿ ಸಿದ್ದೇಶ್ವರ ಅವರನ್ನು ಲೋಕಸಭೆಗೆ ಕಳುಹಿಸಿಕೊಡಬೇಕು. ಎಸ್.ಎ.ರವೀಂದ್ರನಾಥ್ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಘೋಷಿಸಿ ಹೋಗಿದ್ದರು.

ಯಡಿಯೂರಪ್ಪ ಬಂದು ಹೋದ ಬಳಿಕವೂ ಬಂಡಾಯದ ರಹಣಕಹಳೆ ಮೊಳಗಿಸಲಾಗಿದೆ. ಇದಕ್ಕೆ ಕಾರಣ ಯಶವಂತರಾವ್ ಜಾಧವ್ ಹಾಗೂ ಮಹಾನಗರ ಪಾಲಿಕೆ ಮಾಜಿ ಮೇಯರ್ ಅಜಯ್ ಕುಮಾರ್ ನಡುವಿನ ಜಟಾಪಟಿ. ಇದು ಈಗ ತಾರಕಕ್ಕೇರಿದ್ದು, ಯಶವಂತರಾವ್ ಜಾಧವ್ ಉಚ್ಚಾಟನೆ ಮಾಡಲೇಕೆಂದು ಪಟ್ಟು ಹಿಡಿದಿದೆ.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಕರ್ನಾಟಕ ರಾಜ್ಯ ಉಸ್ತುವಾರಿ ರಾಧಮೋಹನ್ ಅಗರ್ ವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜೇಶ್ ಜಿ ಅವರಿಗೆ ಪತ್ರ ಕಳುಹಿಸಲಾಗಿದೆ. ಈ ಮೂಲಕ ಸಿದ್ದೇಶ್ವರರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಯಶವಂತರಾವ್ ಜಾಧವ್ ವಿರುದ್ಧ ಗುಟುರು ಹಾಕಲಾಗಿದೆ.
ವಾಗ್ವಾದ ನಡೆದಿದ್ದು ಯಾಕೆ?: ಅಪೂರ್ವ ರೆಸಾರ್ಟ್ನಲ್ಲಿ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ರಾಧಮೋಹನ್ ಅಗರ್ ವಾಲ್, ಜಿ. ವಿ. ರಾಜೇಶ್ ಅವರ ಸಮ್ಮುಖದಲ್ಲಿ ಸಂಧಾನ ಸಭೆ ನಡೆಯುತಿತ್ತು. ಈ ವೇಳೆ ಯಶವಂತರಾವ್ ಜಾಧವ್ ಹಾಗೂ ಅಜಯ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆಯಿತು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಾನು ಯಶವಂತರಾವ್ ಜಾಧವ್ ಅವರಿಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದೆ ಎನ್ನುವ ಅಜಯ್ ಕುಮಾರ್ ಮಾತು ಯಶವಂತರಾವ್ ಜಾಧವ್ ರೊಚ್ಚಿಗೇಳುವಂತೆ ಮಾಡಿತು. ಈ ವೇಳೆ ಇಬ್ಬರ ನಡುವೆ ವಾಗ್ವಾದ ಜೋರಾಯಿತು. ಏರು ದನಿಯಲ್ಲಿ ಮಾತನಾಡಿದರು. ಸವಾಲು-ಪ್ರತಿಸವಾಲು ಹಾಕಲಾಯಿತು ಎಂದು ಹೇಳಲಾಗುತ್ತಿದೆ. ಬಳಿಕ ಯಡಿಯೂರಪ್ಪ, ಪ್ರಹ್ಲಾದ್ ಜೋಶಿ ಸೇರಿದಂತೆ ಹಿರಿಯರು ಇಬ್ಬರನ್ನು ಸಮಾಧಾನ ಪಡಿಸಿದರು ಎಂದು ತಿಳಿದುಬಂದಿದೆ.
ಯಶವಂತರಾವ್ ಜಾಧವ್ ಅವರು ಯಾವುದೇ ಹಣ ಕೊಟ್ಟಿಲ್ಲ. ಸೋಲಿನ ಬಳಿಕ ಹಾಗೂ ಲೋಕಸಭೆ ಚುನಾವಣೆ ಹೊತ್ತಿನಲ್ಲಿ ಇಂಥ ಆರೋಪ ಮಾಡುತ್ತಿರುವುದು ಯಾಕೆ ಎಂದು ಯಶವಂತರಾವ್ ಜಾಧವ್ ಪ್ರಶ್ನಿಸಿದರು. ಈ ವೇಳೆ ಅಜಯ್ ಕುಮಾರ್ ಅವರು ಯಶವಂತರಾವ್ ಜಾಧವ್ ನಡುವೆ ಜೋರಾಗಿ ಮಾತಾಯಿತು. ಆಗ ಮಧ್ಯಪ್ರವೇಶಿಸಿದ ರೇಣುಕಾಚಾರ್ಯ ಅವರು ಅಜಯ್ ಕುಮಾರ್ ಪರ ಬ್ಯಾಟ್ ಬೀಸಿದರು.
ಬರೆದಿರುವ ಪತ್ರದ ದೂರಿನಲ್ಲೇನಿದೆ?: ಮಾರ್ಚ್ 26-03-2024ರಂದು ದಾವಣಗೆರೆಯ ಅಪೂರ್ವ ರೆಸಾರ್ಟ್ನಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದಲ್ಲಿ ಜರುಗಿತು. ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ಬಗ್ಗೆ ವಿಸ್ತ್ರತವಾಗಿ ಚರ್ಚಿಸಲಾಯಿತು.
ಸಭೆಯ ಅಂತ್ಯದಲ್ಲಿ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ, ದಾವಣಗೆರೆ ಮಹಾನಗರ ಪಾಲಿಕೆಯ ಮಾಜಿ ಮೇಯರ್, ಹಾಲಿ ಸದಸ್ಯ ಬಿ.ಜಿ.ಅಜಯ್ ಕುಮಾರ್ ಅವರ ಜೊತೆ ಯಶವಂತರಾವ್ ಜಾಧವ್ ಅವರು ಅವಾಚ್ಯ ಶಬ್ದಗಳೊಂದಿಗೆ ವಾಗ್ವಾದ ಮಾಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಹಿರಿಯರಾದ ಬಿ.ಎಸ್.ಯಡಿಯೂರಪ್ಪನವರು, ಕರ್ನಾಟಕ ಲೋಕಸಭಾ ಪ್ರಭಾರಿ ರಾಧಮೋಹನ್ ಅಗರ್ ವಾಲ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಪ್ರಾಂತ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ್ ಜಿ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಜಿ.ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ, ಕ್ಲಸ್ಟರ್ ಪ್ರಮುಖ್ ಕೆ.ಎಸ್.ನವೀನ್, ಎನ್.ರವಿಕುಮಾರ್, ಸಂಸದ ಜಿ.ಎಂ.ಸಿದ್ದೇಶ್ವರ್ ಇವರ ಸಮಕ್ಷಮದಲ್ಲಿಯೇ ಅತ್ಯಂತ ಅನುಚಿತವಾಗಿ ವರ್ತಿಸಿದ ಯಶವಂತರಾವ್ ಜಾಧವ್ ಅವರ ನಡವಳಿಕೆ ಖಂಡನೀಯ.
ಬಿಜೆಪಿಯ ಪ್ರಮುಖರ ಸಭೆಯಲ್ಲಿ ತುಂಬಾ ಆಗೌರವಯುತ ವರ್ತನೆ ಮಾಡಿರುತ್ತಾರೆ. ಬಿಜೆಪಿ ಕಾರ್ಯಕರ್ತರ ಗೌರವ ಕಾಪಾಡುವ ಜವಾಬ್ದಾರಿ ತಮ್ಮದಾಗಿದ್ದು, ಚುನಾವಣೆಯಲ್ಲಿ ನಾವೆಲ್ಲರೂ ಸಕ್ರಿಯವಾಗಿ ಭಾಗವಹಿಸಲು, ತುರ್ತಾಗಿ ಯಶವಂತರಾವ್ ಜಾಧವ್ ಬಗ್ಗೆ ಶಿಸ್ತು ಕ್ರಮ ಜರುಗಿಸಬೇಕಾಗಿ ವಿನಂತಿಸುತ್ತೇವೆ ಎಂದು ಪತ್ರದಲ್ಲಿ ದೂರಲಾಗಿದೆ.
ಎಸ್.ಎ.ರವೀಂದ್ರನಾಥ್, ಕರುಣಾಕರ ರೆಡ್ಡಿ, ಎಂ.ಪಿ.ರೇಣುಕಾಚಾರ್ಯ, ಟಿ.ಗುರುಸಿದ್ದನಗೌಡ, ಎಂ.ಬಸವರಾಜ್ ನಾಯ್ಕ್, ಡಾ.ಎ.ಹೆಚ್.ಶಿವಯೋಗಿಸ್ವಾಮಿ, ಲೋಕಿಕೆರೆ ನಾಗರಾಜ್, ಬಿ.ಜಿ.ಅಜಯ್ ಕುಮಾರ್, ಮಾಡಾಳ್ ಮಲ್ಲಿಕಾರ್ಜುನ್, ಕೆ.ಎಂ.ಸುರೇಶ್, ಎಂ.ಎನ್.ಕಲ್ಲೇಶ್, ಡಾ.ಟಿ.ಜಿ.ರವಿಕುಮಾರ್ ಅವರು ಕೂಡಲೇ ಯಶವಂತರಾವ್ ಜಾಧವ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಆಗ್ರಹಿಸಿದ್ದಾರೆ. ಇನ್ನು ಈ ವಿಚಾರ ಯಾವ ಮಟ್ಟಕ್ಕೆ ಹೋಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications