Shamanur Shivashankarappa: ಶಾಮನೂರು ಶಿವಶಂಕರಪ್ಪಗೆ ಬಿಜೆಪಿಯಿಂದ ದುಡ್ಡು ಬಂದಿದ್ದು ನಿಜನಾ?, ಸ್ಪಷ್ಟನೆ ಏನು?
ದಾವಣಗೆರೆ, ಮಾರ್ಚ್, 11: ಇದೀಗ ರಾಜ್ಯದೆಲ್ಲೆಡೆ ಲೋಕಸಭೆ ಸಮರಕ್ಕೆ ಎಲ್ಲಾ ಪಕ್ಷಗಳಿಂದಲೂ ಭರ್ಜರಿ ತಯಾರಿ ನಡೆಯುತ್ತಿದೆ. ಹಾಗೆಯೇ ರಾಜ್ಯ ಸರ್ಕಾರ ಪತನಗೊಳಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ -ಜೆಡಿಎಸ್ ನಾಯಕರು 55 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಪರ್ಕಸಿದ್ದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಳ್ಳಿ ಹಾಕಿದ್ದಾರೆ. ಆಪರೇಷನ್ ಕಮಲ ಸುಳ್ಳು, ನನ್ನನ್ನು ಯಾರೂ ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನ್ನ ಹತ್ತಿರ ಯಾರೂ ಬಂದಿಲ್ಲ. ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದರೆ ಅವರನ್ನೇ ಕೇಳಿ. ಸರ್ಕಾರ ಬೀಳಿಸಲು ನನ್ನ ಸಹಾಯವನ್ನು ಯಾರೂ ಕೇಳಿಲ್ಲ. ಶಿವಕುಮಾರ್ ಹೇಳಿರುವುದು ಸುಳ್ಳು. ಅವರನ್ನೇ ಕೇಳಿ. ದುಡ್ಡಂತೂ ಬಂದಿಲ್ಲ ಎಂದು ಹೇಳಿದರು.

ನನಗೆ ದುಡ್ಡು ಕೊಟ್ಟಿದ್ದರೆ ಎಣಿಸಿಕೊಂಡು ಇಟ್ಟುಕೊಳ್ಳುತ್ತಿದ್ದೆ. ಬಿಜೆಪಿಯವರು, ಜೆಡಿಎಸ್ನವರು ಹಾಗೂ ಕಾಂಗ್ರೆಸ್ನವರು ಸೇರಿದಂತೆ ಯಾರೂ ಬಂದಿಲ್ಲ. ಹಣದ ಆಮೀಷ ಯಾರೂ ಒಡ್ಡಿಲ್ಲ. ಸರ್ಕಾರ ಪತನಗೊಳಿಸಲು ನನ್ನನ್ನು ಸಂಪರ್ಕಿಸಿದ್ದರು ಎಂಬ ಮಾತು ಹೇಳಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ. ನನ್ನನ್ನು ಏನು ಕೇಳುತ್ತೀರಾ ಎಂದು ಪ್ರಶ್ನಿಸಿದರು.
ರಾಜ್ಯಸಭೆ ಚುನಾವಣೆ ವೇಳೆ ಸಹಾಯ ಮಾಡುವಂತೆ ಕೇಳಿದರು. ದುಡ್ಡು ಕೊಡುತ್ತೇವೆ ಎಂದು ಯಾರೂ ಹೇಳಿಲ್ಲ. ನಾವು ಮತ ಕೇಳಬೇಡಿ, ದುಡ್ಡು ಬೇಕಾದರೆ ನಾವೇ ಸಹಾಯ ಮಾಡುತ್ತೇವೆ ಎಂದು ಹೇಳಿದ್ದೆ. ಆದರೆ ನಮ್ಮ ಮತಗಳನ್ನು ಕೇಳಬೇಡಿ ಎಂದು ಹೇಳಿದ್ದು ನಿಜ. ಆದ್ರೆ, ಹಣದ ಆಮಿಷ ಯಾರೂ ಒಡ್ಡಿಲ್ಲ ಎಂದು ಸ್ಪಷ್ಟಪಡಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications