ದಾವಣಗೆರೆ ಬಿಜೆಪಿ ಅಭ್ಯರ್ಥಿ ಬದಲಾಗ್ಲೇಬೇಕು: ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ಜಿಎಂ ಸಿದ್ದೇಶ್ವರ ನೀಡಿದ ಪ್ರತಿಕ್ರಿಯೆ ಏನು?
ದಾವಣಗೆರೆ, ಮಾರ್ಚ್, 14: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಗಾಯತ್ರಿ ಸಿದ್ದೇಶ್ವರ ಅವರ ಹೆಸರು ಘೋಷಣೆ ಮಾಡುತ್ತಿದ್ದಂತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದ ಭಿನ್ನಮತೀಯರು ಸಭೆ ನಡೆಸಿದ್ದಾರೆ. ಅಗತ್ಯ ಬಿದ್ದರೆ ಸ್ವತಂತ್ರವಾಗಿ ಸ್ಪರ್ಧೆ ಮಾಡುವ ಕುರಿತಂತೆಯೂ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬರುತ್ತೇವೆ ಎಂಬ ಗುಟುರು ಹಾಕಲಾಗಿದೆ.
ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯಲ್ಲಿನ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್ ಅವರ ಮನೆಯಲ್ಲಿ ಸಭೆ ಸೇರಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಮಾಜಿ ಶಾಸಕರಾದ ಗುರುಸಿದ್ದನಗೌಡ್ರು, ಕಳೆದ ವಿಧಾನಸಭಾ ಚುನಾವಣೆಗಳಲ್ಲಿ ಸ್ಪರ್ಧಿಸಿ ಪರಾಜಿತರಾದ ಲೋಕಿಕೆರೆ ನಾಗರಾಜ್, ಅಜಯ್ ಕುಮಾರ್, ಬಸವರಾಜ ನಾಯ್ಕ, ಮಾಡಾಳ್ ಮಲ್ಲಿಕಾರ್ಜುನ್, ಆರೈಕೆ ಆಸ್ಪತ್ರೆಯ ಮುಖ್ಯಸ್ಥ ಡಾ.ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು. ಎಸ್.ಎ.ರವೀಂದ್ರನಾಥ್ ಉಪಸ್ಥಿತಿಯಲ್ಲಿ ಹಲವು ವಿಚಾರಗಳ ಕುರಿತಂತೆ ಸಮಾಲೋಚನೆ ನಡೆಸಿದರು.

ಸಭೆ ಬಳಿಕ ಮಾತನಾಡಿದ ರೇಣುಕಾಚಾರ್ಯ ಅವರು ಸಂಸದ ಸಿದ್ದೇಶ್ವರ ವಿರುದ್ಧ ವಾಗ್ದಾಳಿ ನಡೆಸಿದರು. ರವೀಂದ್ರನಾಥ್ ನೇತೃತ್ವದಲ್ಲಿ ಸಭೆ ಸೇರಿದ್ದೇವೆ. ಈಗ ಘೋಷಿಸಿರುವ ಅಭ್ಯರ್ಥಿಯನ್ನು ಬದಲಾವಣೆ ಮಾಡಲೇಬೇಕು ಎಂದು ಆಗ್ರಹಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಸಿದ್ದೇಶ್ವರ ಅವರು ಸಂಘಟನೆ ನೀಡಿರುವ ಕೊಡುಗೆ ಶೂನ್ಯ, ಅಭಿವೃದ್ಧಿಯೂ ಶೂನ್ಯ. ಎಲ್ಲವನ್ನೂ ಸ್ವಂತಕ್ಕೋಸ್ಕರ ಮಾಡಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಅವರೇ ಕಾರಣ. ಯಾವ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಿಲ್ಲ. ಎಲ್ಲಿಯೂ ಬಿರುಸಿನ ಪ್ರಚಾರ ಮಾಡಿಲ್ಲ. ಕೇವಲ ನಾಲ್ಕರಿಂದ ಐದು ತಾಸು ಅಷ್ಟೇ ಪ್ರಚಾರ ನಡೆಸಿದ್ದಾರೆ. ನಾವೆಲ್ಲರೂ ಸೋಲಲು ಸಿದ್ದೇಶ್ವರ ಅವರೇ ಕಾರಣ ಎಂದು ವಾಗ್ಪ್ರಾಹಾರ ನಡೆಸಿದರು.
ಸಿದ್ದೇಶ್ವರರ ಕುಟುಂಬ ಯಾವಾಗ ಬಿಜೆಪಿ ಬಾವುಟ ಕಟ್ಟಿದೆ, ಯಾವಾಗ ಧ್ವಜ ಕಟ್ಟಿದೆ. ಬಿಜೆಪಿ ಪಕ್ಷಕ್ಕೆ ನೀಡಿರುವ ಕೊಡುಗೆ ಶೂನ್ಯ. ಚಿತ್ರದುರ್ಗ-ದಾವಣಗೆರೆ ಜಿಲ್ಲೆಯಲ್ಲಿ ಬಿಜೆಪಿ ಕಟ್ಟಿದ್ದು ಎಸ್.ಎ.ರವೀಂದ್ರನಾಥ್ ನೇತೃತ್ವದ ತಂಡ. ನಾವೆಲ್ಲರೂ ಸೇರಿ ಪಕ್ಷ ಬಲಿಷ್ಠಗೊಳಿಸಿದ್ದೇವೆ. ಸಿದ್ದೇಶ್ವರ ಏನೂ ಬಿಜೆಪಿ ಕಟ್ಟಿ ಬೆಳೆಸಿದ್ದೀರಾ, ಹೋರಾಟ ಮಾಡಿದ್ದಾರಾ? ಎಂಬ ಪ್ರಶ್ನೆಗಳ ಮೇಲೆ ಪ್ರಶ್ನೆ ಹಾಕಿದರು.
ಈಗ ಘೋಷಿಸಿರುವ ಅಭ್ಯರ್ಥಿಗೆ ನಮ್ಮ ಬೆಂಬಲ ಇಲ್ಲ. ನಾಲ್ಕೈದು ಮಂದಿ ಆಕಾಂಕ್ಷಿಗಳಿದ್ದೇವೆ, ಯಾರಿಗೂ ನೀಡಿಲ್ಲ. ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ದೆಹಲಿ ಪ್ರಮುಖ ನಾಯಕರು ಸೇರಿದಂತೆ ಎಲ್ಲರನ್ನೂ ಭೇಟಿ ಮಾಡಿ ಮನವಿ ಮಾಡಿದ್ದರೂ, ಸಿದ್ದೇಶ್ವರರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದೆ. ಮತ್ತೆ ಸಭೆ ಸೇರಿ ಪಕ್ಷೇತರರಾಗಿ ಕಣಕ್ಕಿಳಿಯಬೇಕೋ ಅಥವಾ ಬೇಡವೋ ಎಂಬ ಬಗ್ಗೆ ಹತ್ತು ಸಾವಿರ ಜನರನ್ನು ಸೇರಿಸಿ ನಿರ್ಧಾರ ಮಾಡುತ್ತೇವೆ ಎಂದು ರೇಣುಕಾಚಾರ್ಯ ತಿಳಿಸಿದರು.
ಇನ್ನು ಸಂಸದ ಸಿದ್ದೇಶ್ವರ ಅವರು ಪ್ರತಿಕ್ರಿಯೆ ನೀಡಿದ್ದು, ರೇಣುಕಾಚಾರ್ಯ ನಾಟಕ ಮಾಡುತ್ತಿದ್ದಾನೆ ಅಷ್ಟೇ. ಆತ ನನ್ನ ಮಿತ್ರ. ನಾನು ಅವರ ಜೊತೆ ಮಾತನಾಡುತ್ತೇನೆ, ಎಲ್ಲವೂ ಸರಿ ಹೋಗುತ್ತದೆ ಎಂದು ಹೇಳಿದ್ದಾರೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications