Madal Virupakshappa: ವೈದ್ಯಕೀಯ ವರದಿ ನಾರ್ಮಲ್: ಇಂದು ಕೋರ್ಟ್ಗೆ ಹಾಜರುಪಡಿಸಲು ಲೋಕಾಯುಕ್ತ ಸಿದ್ಧತೆ
ದಾವಣಗೆರೆ, ಮಾರ್ಚ್, 28: ಭ್ರಷ್ಟಾಚಾರ ಪ್ರಕಣದಲ್ಲಿ ಬಂಧಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಬೌರಿಂಗ್ ಅಸ್ಪತ್ರೆಯಲ್ಲಿ ಇಸಿಜಿ, ಶುಗರ್ ಹಾಗೂ ಬಿಪಿ ತಪಾಸಣೆ ಮಾಡಿಸಲಾಗಿದೆ. ಈ ವೇಳೆ ಎಲ್ಲಾ ನಾರ್ಮಲ್ ಆಗಿದೆ ಎಂದು ವರದಿ ಬಂದಿದೆ. ಈ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಮಂಗಳವಾರ (ಮಾರ್ಚ್ 28) ಸಂಜೆ 4 ಗಂಟೆಗೆ ಮಾಡಾಳ್ ವಿರೂಪಾಕ್ಷಪ್ಪನನ್ನು ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಮಾಡಾಳ್ ವಿರೂಪಾಕ್ಷಪ್ಪರನ್ನು ಲೋಕಾಯುಕ್ತ ಅಧಿಕಾರಿಗಳು ಇಂದು ಸಂಜೆ 4ಕ್ಕೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ. ಈ ವೇಳೆ ಕಸ್ಟಡಿಗೆ ನೀಡುವಂತೆ ಲೋಕಾಯುಕ್ತ ಅಧಿಕಾರಿಗಳು ನ್ಯಾಯಲಯಕ್ಕೆ ಮನವಿ ಮಾಡಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ
ಲೋಕಾಯುಕ್ತ ಅಧಿಕಾರಿಗಳು ಕಚೇರಿಗೆ ಕರೆತಂದು ವಿಚಾರಣೆ ಚುರುಕುಗೊಳಿಸಲು ನಿರ್ಧಾರ ಮಾಡಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿ ಮುಂದೆ ಭದ್ರತೆ ಹೆಚ್ಚಿಸಲಾಗಿದೆ. ಈಗಾಗಲೇ ಕಚೇರಿ ಮುಂದೆ 20ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.
ಮತ್ತೆ ವಶಕ್ಕೆ ಪಡೆಯುವ ಪ್ಲಾನ್
ಹೆಚ್ಚಿನ ವಿಚಾರಣೆ ಅಗತ್ಯವಿರುವ ಹಿನ್ನೆಲೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪರನ್ನು ಮತ್ತೆ ವಶಕ್ಕೆ ನೀಡುವಂತೆ ಲೋಕಾಯುಕ್ತ ಪೊಲೀಸರು ನ್ಯಾಯಲಕ್ಕೆ ಮನವಿ ಮಾಡಲಿದ್ದಾರೆ. ಈ ಹಿಂದೆ ಮೂರು ಬಾರಿ ವಿಚಾರಣೆಗೆ ಹಾಜರಾದಗಲೂ ವಿಚಾರಣೆಗೆ ಸಹಕರಿಸದ ಹಿನ್ನೆಲೆ ಇಂದು ಮತ್ತೆ ವಶಕ್ಕೆ ಪಡೆದುಕೊಳ್ಳಲು ತಯಾರಿ ಮಾಡಿಕೊಂಡಿದ್ದಾರೆ.
ಬೇಡವಾದ ಉತ್ತರಗಳನ್ನು ನೀಡುವ ಮೂಲಕ ಜಾರಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಸರಿಯಾದ ಸಾಕ್ಷ್ಯಾಧಾರಗಳನ್ನು ಒದಗಿಸುತ್ತಿಲ್ಲ. ಹಣದ ಮೂಲದ ಬಗ್ಗೆ ಮಾಹಿತಿ ನೀಡಲು ಶಾಸಕರು ಹಿಂದೇಟು ಹಾಕುತ್ತಿದ್ದಾರೆ. ಮೂರು ಬಾರಿ ನಡೆಸಿದ ವಿಚಾರಣೆ ವೇಳೆಯೂ ಹಣದ ಮೂಲದ ದಾಖಲೆಯನ್ನು ನೀಡಲು ವಿಫಲರಾಗಿದ್ದಾರೆ.

ಮಾಡಳ್ ವಿರೂಪಾಕ್ಷಪ್ಪ ಮೊದಲಿಗೆ ಕೃಷಿ ಮೂಲದ ಹಣವೆಂದು ವಿಚಾರಣೆ ವೇಳೆ ತಿಳಿಸಿದ್ದಾರೆ. ನಂತರ ನಡೆದ ವಿಚಾರಣೆಯಲ್ಲಿ ಸೂಕ್ತ ದಾಖಲೆಗಳನ್ನು ಒದಗಿಸಿ ಸಮರ್ಥಿಸಿಕೊಳ್ಳಲು ಮುಂದಾದಾಗ ತಡವರಿಸಿದ್ದಾರೆ. ಇನ್ನು ತಡರಾತ್ರಿ ಲೋಕಾಯುಕ್ತ ಕಚೇರಿಯಲ್ಲಿಯೇ ಕಾಲ ಕಳೆದಿದ್ದ ಮಾಡಾಳ್ ವಿರೂಪಾಕ್ಷಪ್ಪಗೆ, 12 ಗಂಟೆಯವರೆಗೂ ತನಿಖಾಧಿಕಾರಿಗಳ ತಂಡ ಪ್ರಶ್ನೆಗಳ ಸುರಿಮಳೆಯನ್ನೇ ಹರಿಸಿದೆ.
8 ಕೋಟಿ ರೂಪಾಯಿ ಹಣ ಎಲ್ಲಿಂದ ಬಂದಿದೆ? ಆ ಹಣ ಮೂಲವೇನು?, ಎಲ್ಲಿಗೆ ತಲುಪಿಸಲಾಗುತ್ತಿತ್ತು ಎನ್ನುವ ಪ್ರಶ್ನೆಗಳನ್ನು ಶಾಸಕರಿಗೆ ಕೇಳಲಾಗಿದೆ. ಬಳಿಕ ತಮ್ಮ ಆಪ್ತರ ಮೂಲಕ ಲೋಕಾಯುಕ್ತ ಕಚೇರಿಗೆ ಪ್ರತ್ಯೇಕ ಮಂಚ, ಹಾಸಿಗೆ, ದಿಂಬು, ಊಟ, ನೀರು ತರಿಸಿಕೊಂಡ ಮಾಡಾಳ್ ವಿರೂಪಾಕ್ಷಪ್ಪ ನಿದ್ರೆಗೆ ಜಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಾಡಾಳ್ ವಿರೂಪಾಕ್ಷಪ್ಪನವರು ನಿನ್ನೆ ಚನ್ನಗಿರಿಯಿಂದ ಬೆಂಗಳೂರಿಗೆ ಬರುತ್ತಿದ್ದಾಗ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಅವರನ್ನು ಬಂಧಿಸಲಾಗಿತ್ತು. ಮಧ್ಯಂತರ ಜಾಮೀನು ವಜಾ ಆದ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.
ನಂತರ ಮಾಡಾಳ್ಗೆ ಬೌರಿಂಗ್ ಅಸ್ಪತ್ರೆಯಲ್ಲಿ ಇಸಿಜಿ, ಶುಗರ್ ಹಾಗೂ ಬಿಪಿ ತಪಾಸಣೆ ನಡೆಸಲಾಗಿದ್ದು, ಇಂದು ವೈದ್ಯಕೀಯ ತಪಾಸಣೆ ವರದಿ ನಾರ್ಮಲ್ ಎಂದು ಬಂದಿದೆ. ಈ ಹಿನ್ನೆಲೆ ಸಂಜೆ 4 ಗಂಟೆಗೆ ನ್ಯಾಯಲಯಕ್ಕೆ ಹಾಜರುಪಡಿಸಲು ಲೋಕಾಯುಕ್ತ ಪೊಲೀಸರು ತಯಾರಿ ನಡೆಸಿದ್ದಾರೆ.
ಇನ್ನು ಮಾಡಾಳ್ ವಿರೂಪಾಕ್ಷಪ್ಪನವರ ಪುತ್ರ ಹಾಗೂ ಕೆಎಎಸ್ ಅಧಿಕಾರಿ ಪ್ರಶಾಂತ್ ಮಾಡಾಳ್ 40 ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದರು. ಈ ಹಿಂದೆ ಆರೋಪಿ ಪ್ರಶಾಂತ್ ಬೆಂಗಳೂರು ಜಲಮಂಡಳಿಯ ಮುಖ್ಯ ಲೆಕ್ಕಪರಿಶೋಧಕರಾಗಿ ಸೇವೆ ಸಲ್ಲಿಸುತ್ತಿದ್ದರು. ಸದ್ಯ ಇದೀಗ ಪ್ರಶಾಂತ್ ಮಾಡಾಳ್ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications