ದಾವಣಗೆರೆಯಲ್ಲಿ ಹೆಚ್ಚಿದ ಮದ್ರಾಸ್ ಐ: ವಿದ್ಯಾರ್ಥಿಗಳಲ್ಲಿ ವೇಗವಾಗಿ ಹರಡುತ್ತಿದೆ ವೈರಾಣು
ದಾವಣಗೆರೆ, ಜುಲೈ 25: ಸಾಮಾನ್ಯವಾಗಿ ಚಳಿಗಾಲದಲ್ಲಿ ಕಾಣಿಸಿಕೊಳ್ಳುತ್ತಿದ್ದ ಮದ್ರಾಸ್ ಐ ವೈರಾಣು ಅತೀ ವೇಗವಾಗಿ ಹರಡುತ್ತಿದ್ದು ಇದಕ್ಕೆ ಭಯ ಪಡಬೇಕಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ತಿಳಿಸಿದ್ದಾರೆ.
ಮದ್ರಾಸ್ ಐ ಈ ಬಾರಿ ಮಳೆಗಾಲದಲ್ಲಿ ಆರಂಭವಾಗಿದ್ದು, ರಾಜ್ಯದ ಜನರ ಕಣ್ಣು ಕೆಂಪಾಗಿಸುತ್ತಿದೆ, ಮುಖ್ಯವಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಹಾಸ್ಟಲ್ ವಿದ್ಯಾರ್ಥಿಗಳಲ್ಲಿ 'ಮದ್ರಾಸ್ ಐ' ವೇಗಾಗಿ ಹರಡುತ್ತಿರುವುದು ಆತಂಕಕ್ಕೆ ಕಾರಣವಾಗಿದೆ, ಕಂಜಕ್ವಿಟಿಸ್ ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ ಕಣ್ಣು ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ ತೇವಾಂಶ ಹೆಚ್ಚಾದಾಗ ಅಥವಾ ಚಳಿಗಾಲದ ವಾತಾವರಣದಲ್ಲಿ ಹುಟ್ಟಿಕೊಳ್ಳುವ ಈ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಉಂಟು ಮಾಡುತ್ತವೆ.

ರಾಜ್ಯದಲ್ಲಿ ಮಳೆಯಾಗುತ್ತಿದ್ದ ಪರಿಣಾಮ ಬಿಸಿಲು ಇಲ್ಲದಂತಾಗಿದೆ ಇದರ ಪರಿಣಾಮತೇವಾಂಶ ಹೆಚ್ಚಾಗಿ ಅವಧಿಗೂ ಮೊದಲೇ ಈ ವೈರಾಣು ದಾಂಗುಡಿ ಇರಿಸಿದೆ. ಕಸ ಬಿದ್ದದಂತೆ ಆಗುವ ರೀತಿಯಾಗಿಕಣ್ಣುಚುಚ್ಚುವುದು, ಬೆಳಗ್ಗೆ ಎದ್ದಾಗ ಹೆಚ್ಚು ಪಿಸುರು (ಪಿಚ್ಚು) ಬರುತ್ತದೆ. ಕಣ್ಣುಗಳು ಕೆಂಪಾಗಿ, ಕಿರಿಕಿರಿ ಹೆಚ್ಚುವುದು, ಕಣ್ಣಲ್ಲಿ ನೀರು ಬರುವುದು, ರೆಪ್ಪೆ ಕಣ್ಣು ದಪ್ಪ ಆಗುವುದು ಕಂಡು ಬರುತ್ತದೆ.
ಮದ್ರಾಸ್ ಐಗೆ ಮುಂಜಾಗೃತಾ ಕ್ರಮಗಳು
ಸಮಸ್ಯೆ ಇರುವವರು ಕೆಲದಿನ ಪ್ರತ್ಯೇಕ ವಾಸ ಮಾಡಿ, ಲಕ್ಷಣಗಳು ಕಾಣಿಸಿಕೊಳ್ಳದಿದ್ದರೆ, ಕಣ್ಣಿಗೆಔಷಧ ಹಾಕಿಸಿಕೊಳ್ಳಬೇಡಿ, ದಿನಕ್ಕೆ 8-10 ಬಾರಿ ಸ್ಯಾನಿಟೈಸರ್, ಸೋಪು ಬಳಸಿ ಕೈ ತೊಳೆದುಕೊಳ್ಳಿ, ವೈರಸ್ ಕಾಣಿಸಿಕೊಂಡಾಗ ಹತ್ತಿರದ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಸಲಹೆ ಪಡೆಯಬೇಕು, ವೈದ್ಯರ ತಪಾಸಣೆ ಮಾಡಿಸದೇ, ಔಷಧಿ ಅಂಗಡಿಗಳಲ್ಲಿ ಸಿಗುವ ಡ್ರಾಪ್ಸ್ಗಳನ್ನು ಬಳಸಬಾರದು, ಕಣ್ಣು ಮುಟ್ಟಿಕೊಳ್ಳುವುದನ್ನು ಕಡಿಮೆ ಮಾಡಬೇಕು.
ಮದ್ರಾಸ್ ಐಗೆ ಪರಿಹಾರವೇನು?
ಸಮಸ್ಯೆ ಉಳ್ಳವರು ಇತರರಿಂದ ದೂರ ಇರಬೇಕು, ವೈದ್ಯರ ಬಳಿ ತೋರಿಸಿ, ಐ ಡ್ರಾಪ್ಸ್ ಮಾತ್ರ ಹಾಕಬೇಕು, ಸಮಸ್ಯೆ ಕಡಿಮೆ ಆಗುವವರೆಗೆ ಗಾಳಿಗೆ ಹೋಗಬಾರದು, ದ್ವಿಚಕ್ರ ವಾಹನ ಓಡಿಸಬಾರದು, ಟಿ.ವಿ, ಮೊಬೈಲ್, ಕಂಪ್ಯೂಟರ್ ನೋಡುವುದು ಕಡಿಮೆ ಮಾಡಿ ಕಣ್ಣಿಗೆ ವಿಶ್ರಾಂತಿ ಕೊಡಬೇಕು.
ರೋಗದ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣವೇ ಸಮೀಪದ ನಗರ, ಗ್ರಾಮೀಣ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳು ಹಾಗೂ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರ ಹತ್ತಿರ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆಯುವುದು ಸೂಕ್ತ. ವೈರಾಣುವಿನ ಸಮಸ್ಯೆ ಆಗಿರುವ ಕಾರಣ ನಿರ್ದಿಷ್ಟ ಚಿಕಿತ್ಸೆ ಇಲ್ಲ ಮುನ್ನೆಚ್ಚರಿಕೆಯೇ ಮದ್ದಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications