ಉತ್ತರಾಯಣ ಪುಣ್ಯಕಾಲ: ತುಂಗಭದ್ರಾ ತಟದಲ್ಲಿ ಮಕರ ಸಂಕ್ರಾಂತಿ ಸಂಭ್ರಮ
ದಾವಣಗೆರೆ, ಜನವರಿ 14: ಖಗೋಳದಲ್ಲಿ ಆಗುವ ಸೂರ್ಯನ ಪಥಸಂಚಲನದ ಸಂಕ್ರಮಣದ ಆಧ್ಯಾತ್ಮದ ಮಹತ್ವವನ್ನು ಸಾರುವ ಸಂಕ್ರಾಂತಿ ಹಬ್ಬವನ್ನು ದಾವಣಗೆರೆ ಜಿಲ್ಲೆಯ ಜನರು ಗುರುವಾರ ಸಂಭ್ರಮದಿಂದ ಆಚರಿಸಿದರು.
ಭೂತಾಯಿ ಒಡಲಲ್ಲಿ ಬೆಳೆದ ಫಸಲನ್ನು ಮನೆ ತುಂಬಿಸಿಕೊಳ್ಳುವ ಸಂದರ್ಭದ ಹಬ್ಬವಾದ ಮಕರ ಸಂಕ್ರಾಂತಿಯ ಸೊಬಗನ್ನು ರೈತರು ತಮ್ಮ ಮನೆ ಮತ್ತು ಹೊಲ-ಗದ್ದೆಗಳಲ್ಲಿ ಆಚರಿಸಿ ಸಂತಸಪಟ್ಟರು.

ಎಳ್ಳು-ಬೆಲ್ಲ ತಿಂದು ಒಳ್ಳೊಳ್ಳೆ ಮಾತನಾಡಿ
ಪರಿಸರ ಪ್ರಿಯರು, ಹರಿಯುವ ನದಿನೀರಲ್ಲಿ ಸ್ನಾನ ಮಾಡಿ ಸೂರ್ಯದೇವನಿಗೆ ಪೂಜಿಸಿದರು. ಮನೆಗಳಲ್ಲಿ ಕಬ್ಬಿನ ತುಂಡು, ಎಳ್ಳು-ಬೆಲ್ಲ, ಸಕ್ಕರೆ ಅಚ್ಚುಗಳನ್ನು ದೇವರ ಮುಂದೆ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮನೆಯ ಮಂದಿ, ಸಂಬಂಧಿಕರು ಹಾಗೂ ಸ್ನೇಹಿತರಿಗೆ ಒಣ ಕೊಬ್ಬರಿ, ಶೇಂಗಾ, ಹುರಿಗಡಲೆ, ಬೆಲ್ಲದ ಅಚ್ಚುಗಳನ್ನು ಮಿಶ್ರಣವನ್ನುವಿನಿಮಯ ಮಾಡುತ್ತಾ, 'ಎಳ್ಳು-ಬೆಲ್ಲ ತಿಂದು ಒಳ್ಳೊಳ್ಳೆ ಮಾತನಾಡಿ' ಎಂದು ಶುಭಾಶಯ ಕೋರಿದರು.

ರಂಗೋಲಿ ಮೆರಗು
ಮಹಿಳೆಯರು ನಸುಕಿನಲ್ಲೇ ಎದ್ದು ಮನೆ ಅಂಗಳ ಸ್ವಚ್ಛಗೊಳಿಸಿ ರಂಗೋಲಿ ಬಿಡಿಸಿ ಬಣ್ಣತುಂಬಿ ಮೆರಗು ತಂದರು. ಓಣಿಗಳಲ್ಲಿ ಬಣ್ಣ ಬಣ್ಣದ ರಂಗೋಲಿ ಸಂಕ್ರಾಂತಿ ಸಂದೇಶವನ್ನು ಸಾರುತ್ತಿತ್ತು. ಮನೆ ಬಾಗಿಲಿಗೆ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿದ್ದುದು, ಸಂಕ್ರಾಂತಿಯ ಸೊಬಗನ್ನು ಹೆಚ್ಚಿಸುವಂತಿತ್ತು.

ಖಡಕ್ ರೊಟ್ಟಿ, ಪಲ್ಯ, ಪೊಂಗಲ್ ಸವಿ
ಮುಂಜಾನೆಯಿಂದಲೇ ಗ್ರಾಮೀಣ ಹಾಗೂ ನಗರವಾಸಿಗಳು ಕುಟುಂಬ ಸಮೇತರಾಗಿ ಹರಿಹರದ ತುಂಗಭದ್ರಾ ನದಿಗೆ ಧಾವಿಸಿದ ಹಿರಿಯರು, ಮಕ್ಕಳು, ಮಹಿಳೆಯರು, ಯುವಕರು ನದಿಯಲ್ಲಿ ಸ್ನಾನ ಮಾಡಿ ಸೂರ್ಯದೇವನಿಗೆ ನಮಿಸಿ ಪ್ರಾಥಿಸುವ ಮೂಲಕ ಮನೆಯಿಂದ ತಂದಿದ್ದ ಖಡಕ್ ರೊಟ್ಟಿ, ಚಪಾತಿ, ಪುಂಡಿ ಸೊಪ್ಪಿನ ಪಲ್ಯ, ಎಣಗಾಯಿ ಪಲ್ಯ, ಚಟ್ನಿ ಪುಡಿ, ಚಿತ್ತಾನ್ನ, ಸಿಹಿ ಪೊಂಗಲ್, ಮೊಸರನ್ನ ಬುತ್ತಿ ಸೇರಿದಂತೆ ವಿವಿಧ ಬಗೆಯ ಖಾದ್ಯಗಳನ್ನು ಒಟ್ಟಾಗಿ ಸವಿದು ಸಂತಸಪಟ್ಟರು.

ಆಟವಾಡಿ ಮಕ್ಕಳು ಸಂಭ್ರಮಿಸಿದರು
ದಾವಣಗೆರೆ ನಗರದ ಜನರು ಉದ್ಯಾನಗಳಿಗೆ ತೆರಳಿ ಸಂಭ್ರಮಿಸಿದರು. ಗಾಜಿನಮನೆ ಉದ್ಯಾನವನ, ವಿಶ್ವೇಶ್ವರಯ್ಯ ಪಾರ್ಕ್, ಕಾಸಲ್ ಶೆಟ್ಟಿ ಪಾರ್ಕ್, ಡಾಂಗೆ ಪಾರ್ಕ್, ಕುಂದುವಾಡ ಕೆರೆ, ಕೊಂಡಜ್ಜಿ ಕೆರೆ, ದೇವರಬೆಳಕೆರೆ ಪಿಕ್ ಅಪ್ಗಳಿಗೂ ಭಾರಿ ಸಂಖ್ಯೆಯಲ್ಲಿ ಜನ ಕುಟುಂಬ ಸಮೇತ ತೆರಳಿ ಹಬ್ಬದ ಊಟವನ್ನು ಮಾಡಿದರು. ಉದ್ಯಾನದಲ್ಲಿದ್ದ ವಿವಿಧ ಆಟಿಕೆ ಸಾಮಗ್ರಿಗಳೊಂದಿಗೆ ಆಟವಾಡಿ ಮಕ್ಕಳು ಸಂಭ್ರಮಿಸಿದರು. ದಾವಾಣಗೆರೆ ನಗರದೇವತೆ ದುರ್ಗಾಂಬಿಕಾ ದೇವಸ್ಥಾನ, ಗ್ರಾಮ ದೇವತೆ ನಿಟುವಳ್ಳಿ ದುರ್ಗಾಂಬಿಕಾ ದೇವಸ್ಥಾನ ಸಹಿತ ಎಲ್ಲ ದೇವಾಲಯಗಳನ್ನು ಅಲಂಕರಿಸಲಾಗಿದ್ದು, ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಭಕ್ತಿ ಸಮರ್ಪಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications