Get Updates
Get notified of breaking news, exclusive insights, and must-see stories!

ಒಂದೇ ಕುಟುಂಬದ ಮೂವರು ನಾಪತ್ತೆ ಪ್ರಕರಣ ಮತ್ತಷ್ಟು ನಿಗೂಢ; ಮೂಡಿದೆ ಸಾಕಷ್ಟು ಅನುಮಾನ

ಅದು ಪುಟ್ಟ ಸಂಸಾರ. ಗಂಡ, ಹೆಂಡತಿ, ಮಗು ಇದ್ದ ಮನೆ. ಆದ್ರೆ, ಈ ಮನೆಯ ಮೂವರು ಇದೀಗ ನಿಗೂಢವಾಗಿ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಪೊಲೀಸರಿಗೂ ಈ ಪ್ರಕರಣ ತಲೆಬಿಸಿ ತಂದಿದ್ದು, ಹುಡುಕಿಕೊಡಿ ಎಂದು ಅವರ ಕುಟುಂಬ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ತಂದೆ, ತಾಯಿ ಹಾಗೂ ಎರಡು ವರ್ಷದ ಮಗು ನಿಗೂಢವಾಗಿ ಕಣ್ಮರೆಯಾಗಿರುವುದು ಬೆಣ್ಣೆನಗರಿ ದಾವಣಗೆರೆಯಲ್ಲಿ ಈಗ ಸಾಕಷ್ಟು ಅನುಮಾನು ಮೂಡುವಂತೆ ಮಾಡಿದೆ. 34 ವರ್ಷದ ಅಂಜನ್ ಬಾಬು, 24 ವರ್ಷದ ನಾಗವೇಣಿ, ಎರಡು ವರ್ಷದ ನಕ್ಷತ್ರ ಕಾಣೆಯಾಗಿದ್ದಾರೆ.

Many Questions Arise Over Missing Case of Three Family Members in Davanagere

ನಗರದ ವಿನೋಬ ನಗರದಲ್ಲಿ ಬಾಡಿಗೆಗೆ ವಾಸವಾಗಿದ್ದ ಈ ಕುಟುಂಬ ಕೊನೆಯದಾಗಿ ಕಾಣಿಸಿಕೊಂಡಿದ್ಧು ಕಳೆದ ತಿಂಗಳು ಏಪ್ರಿಲ್ 12ರಂದು. ಅದಾದ ನಂತರ ಈ ಮೂವರು ಎಲ್ಲಿಗೆ ಹೋಗಿದ್ದಾರೆ ಅನ್ನೋದು ಗೊತ್ತಾಗದೆ ಕುಟುಂಬದವರು ಪರಿತಪಿಸುವಂತಾಗಿದೆ. ನಾಗವೇಣಿ ನಾಗವೇಣಿ ತಾಯಿ ರುದ್ರವ್ವ ಬಡಾವಣೆ ಪೊಲೀಸ್ ಠಾಣೆಯಲ್ಲಿ ನನ್ನ ಮಗಳು, ಅಳಿಯ ಮತ್ತು ಮೊಮ್ಮಗಳನ್ನು ಹುಡುಕಿ ಕೊಡಿ ಎಂದು ದೂರು ನೀಡಿದ್ದಾರೆ.

ಐದು ವರ್ಷದ ಹಿಂದೆ ಮದುವೆ

ಅಂಜನ್ ಬಾಬು ಮತ್ತು ನಾಗವೇಣಿ 5 ವರ್ಷದ ಹಿಂದೆ ಮದುವೆ ಆಗಿದ್ದರು. ಈ ದಂಪತಿಗೆ ಎರಡು ವರ್ಷದ ಹೆಣ್ಣು ಮಗು ಇದೆ. ವಿನೋಬನಗರದಲ್ಲಿ ವಾಸವಾಗಿದ್ದರು, ಅಂಜನ್ ಬಾಬು ಪಿಜಿ ಬಡಾವಣೆ ಬ್ಯಾಡಗಿ ಶೆಟ್ಟರ್ ಶಾಲೆ ಹತ್ತಿರ ಇರುವ ಷೇರು ಮಾರ್ಕೇಟ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ಇವರ ಮನೆಗೆ ನಾಗವೇಣಿ ಅವರ ತಾಯಿ ರುದ್ರವ್ವ ವಾರಕ್ಕೊಮ್ಮೆ ಬಂದು ಹೋಗುತ್ತಿದ್ದರು. ಕಳೆದ ತಿಂಗಳು ಅಂದರೆ ಏಪ್ರಿಲ್ 12ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ರುದ್ರವ್ವ ಮಗಳ ಮನೆಗೆ ಬಂದಿದ್ದಾರೆ. ಸಂಜೆಯವರೆಗೆ ಮಗಳು, ಮೊಮ್ಮಗಳ ಜೊತೆ ಸಂಜೆವರೆಗೂ ರುದ್ರವ್ವ ಕಾಲ ಕಳೆದಿದ್ದಾರೆ.

ಸಂಜೆ ಆರು ಗಂಟೆಗೆ ನಾಗವೇಣಿ ಗಂಡ ಅಂಜನ್ ಬಾಬು ಪತ್ನಿಗೆ ಪೋನ್ ಮಾಡಿದ್ದಾರೆ. ಆಗ ತನ್ನ ಪುತ್ರಿ ಜೊತೆ ನಾಗವೇಣಿ ತೆರಳಿದ್ದಾರೆ. ಆ ಬಳಿಕ ತಾಯಿಗೆ ನೀನು ಮನೆಯಲ್ಲಿ ಇರು ಎಂದು ಹೇಳಿದ್ದಾರೆ. ಅದಕ್ಕೆ ನಿನ್ನ ಗಂಡ ಎಲ್ಲಿಗೆ ಹೋಗಿದ್ದಾನೆಂದು ತಾಯಿ ಕೇಳಿದಕ್ಕೆ, ಕರೆದುಕೊಂಡು ಬಂದ ಮೇಲೆ ಹೇಳುತ್ತೇನೆಂದು ತನ್ನ ಮಗಳು ನಕ್ಷತ್ರಾಳನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ರಾತ್ರಿ 8.30ಕ್ಕೆ ಪೋನ್ ಮಾಡಿದ ಮಗಳು ನಾಗವೇಣಿ ನಾವು ಬೆಳಿಗ್ಗೆ ಬರುತ್ತೇವೆ, ನೀನು ಊಟ ಮಾಡಿ ಮಲಗಿಕೋ ಎಂದು ತಾಯಿಗೆ ಹೇಳಿದ್ದಾರೆ. ಅದರಂತೆ ಬೆಳಿಗ್ಗೆ ಪೋನ್ ಮಾಡಿದಾಗ ಸ್ವೀಚ್ ಆಪ್ ಆಗಿತ್ತಂತೆ. ಇದಾದ ನಂತರ ರುದ್ರವ್ವ ಕೆಲಸಕ್ಕೆ ಹೋಗಬೇಕಾಗಿದ್ದರಿಂದ ಮಗಳ ಮನೆಗೆ ಬೀಗ ಹಾಕಿಕೊಂಡು ಮರಳಿ ಊರಿಗೆ ಹೋಗಿದ್ದಾರೆ. ಸುಮಾರು ದಿನಗಳಾದರೂ ಬರದೆ ಇರುವ ಕಾರಣ ಸಂಬಂಧಿಕರಿಗೆ ಪೋನ್ ಮಾಡಿ ವಿಚಾರಿಸಿದ್ದಾರೆ. ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಪ್ರಯೋಜನವಾಗಿಲ್ಲ. ಇದರಿಂದ ಆತಂಕಗೊಂಡ ರುದ್ರವ್ವ ಬಡಾವಣೆ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದು, ಪುತ್ರಿ, ಅಳಿಯ ಹಾಗೂ ಮೊಮ್ಮಗಳನ್ನು ಹುಡುಕಿಕೊಡಿ ಎಂದು ಮನವಿ ಮಾಡಿದ್ದಾರೆ.

ಇನ್ನೂ ಕಾಣೆಯಾದವರ ವಿಚಾರದಲ್ಲಿ ಅಂಜನ್ ಬಾಬು ಸಾಕಷ್ಟು ಸಾಲ ಮಾಡಿಕೊಂಡಿದ್ದ ಎಂದು ಹೇಳಲಾಗಿದೆ. ಇನ್ನೊಂದು ಕಡೆ ಆಸ್ತಿ ವಿಚಾರದಲ್ಲಿ ಗೋಲ್ಮಾಲ್ ಆಗಿದೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ರೀತಿಯ ಘಟನೆ ನಡೆದಿರಬಹುದು ಎಂಬ ಅನುಮಾನವೂ ವ್ಯಕ್ತವಾಗಿದೆ. ಒಟ್ಟಾರೆ ಅಂಜನ್ ಮತ್ತು ಕುಟುಂಬ ಕಾಣೆಯಾಗಲು ನಿಜವಾದ ಕಾರಣ ಪೊಲೀಸ್ ತನಿಖೆಯಿಂದ ತಿಳಿಯಬೇಕಿದೆ.

ಮಾಹಿತಿ ಪ್ರಕಾರ ಬಿಜಾಪುರ ಜಿಲ್ಲೆಯಲ್ಲಿ ತಿಕೋಟದ ಗ್ರಾಮವೊಂದರಲ್ಲಿ ಇರುವ ಕುರಿತಂತೆ ಶಂಕೆ ವ್ಯಕ್ತವಾಗಿದೆ. ಸಾಲ ಹೆಚ್ಚಾದ ಹಿನ್ನೆಲೆಯಲ್ಲಿ ಅಂಜನ್ ಬಾಬು ಕುಟುಂಬ ಹೋಗಿರಬಹುದಾ? ಆಸ್ತಿ ಕಲಹದಿಂದ ಏನಾದರೂ ಕಿಡ್ನಾಪ್ ಆಗಿರಬಹುದಾ? ಬೇರೆ ಏನಾದರೂ ವಿಚಾರ ಇರಬಹುದಾ ಎಂಬುದು ಸೇರಿದಂತೆ ನಾನಾ ಪ್ರಶ್ನೆಗಳು ಹುಟ್ಟಿಕೊಂಡಿದ್ದು, ಮೂವರು ಪತ್ತೆಯಾದ ಬಳಿಕ ನಿಖರ ಕಾರಣ ಗೊತ್ತಾಗಲಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+