ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಯಡಿಯೂರಪ್ಪ ಮುಂದೆ ಹೊಸ ಬೇಡಿಕೆ ಇಟ್ಟ ಮರಾಠ ಸಮುದಾಯ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜನವರಿ 20: ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಆದರೆ, ಅದು ಕಾರ್ಯಗತಗೊಂಡಿಲ್ಲ. ಕೂಡಲೇ ಅದನ್ನು ಜಾರಿಗೊಳಿಸಬೇಕು. '3ಬಿ'ಯಲ್ಲಿರುವ ಸಮುದಾಯವನ್ನು '2ಎ'ಗೆ ಸೇರಿಸಬೇಕು ಎಂದು ಕ್ಷತ್ರೀಯ ಮರಾಠ ಮೀಸಲಾತಿ ಅಭಿಯಾನ ಸಂಘಟನೆ ಆಗ್ರಹಿಸಿದೆ.

ಬುಧವಾರ ದಾವಣಗೆರೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಯಶವಂತ ರಾವ್ ಜಾಧವ್ ಪತ್ರಿಕಾಗೋಷ್ಠಿ ನಡೆಸಿದರು. ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. "ಅಭಿವೃದ್ಧಿ ಪ್ರಾಧಿಕಾರಕ್ಕೆ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಗಾಲು ಹಾಕುತ್ತಿವೆ. ನಾವು ವಲಸಿಗರಲ್ಲ. ನಾವು ಕನ್ನಡಿಗರು. ನೂರಾರು ವರ್ಷಗಳಿಂದ ಇಲ್ಲಿನ ನೆಲ, ಜಲ, ಸಂಸ್ಕೃತಿಗೆ ಹೊಂದಿಕೊಂಡು ಬದುಕುತ್ತಿದ್ದೇವೆ" ಎಂದರು.

ಮರಾಠ ಅಭಿವೃದ್ಧಿ ನಿಗಮ ಏಕೆ; ಯಡಿಯೂರಪ್ಪಗೆ ವಾಟಾಳ್ ಪ್ರಶ್ನೆ ಮರಾಠ ಅಭಿವೃದ್ಧಿ ನಿಗಮ ಏಕೆ; ಯಡಿಯೂರಪ್ಪಗೆ ವಾಟಾಳ್ ಪ್ರಶ್ನೆ

"ಈ ಹಿಂದೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಬಾಳಠಾಕ್ರೆ ಅವರು ನಮ್ಮ ರಾಜ್ಯದ ಮರಾಠಿಗರಿಗೆ ನಾವು ಉದ್ಯೋಗ, ಆಹಾರ ಕೊಟ್ಟರೆ ಸಾಕು. ಕರ್ನಾಟಕದಲ್ಲಿ ಇರುವವರು ಇಲ್ಲಿಗೆ ಬರುವುದು ಬೇಡ. ನೀವು ಎಲ್ಲಿದ್ದೀರೋ ಅಲ್ಲಿಯೇ ಇದ್ದುಬಿಡಿ ಎಂದಿದ್ದರು. ಎಂದಿಗೂ ಮಹಾರಾಷ್ಟ್ರಕ್ಕೆ ಹೋಗಿ ನೆಲೆಸಬೇಕೆಂಬ ಯೋಚನೆಯೂ ನಮಗಿಲ್ಲ. ನಾವು ಹುಟ್ಟಿದ್ದು ಮತ್ತು ಸಾಯುವುದು ಕನ್ನಡದ ನೆಲದಲ್ಲಿಯೇ" ಎಂದು ಸ್ಪಷ್ಟಪಡಿಸಿದರು.

Maratha Community Demand For 2 A Reservation

"ಮರಾಠಿಗರಿಗೆ ಯಾರೂ ಕನ್ನಡದ ಪಾಠ ಮಾಡುವ ಅಗತ್ಯವೇನಿಲ್ಲ. ನಾವು ಕನ್ನಡಿಗರು. ಕನ್ನಡಪರ ಹೋರಾಟಗಾರನೆಂದು ಹೇಳುವ ವಾಟಾಳ್ ನಾಗರಾಜ್‍ ಅವರಿಗೆ ಅರಳು ಮರಳು ಆದಂತೆ ಕಾಣುತ್ತದೆ. ಸರ್ವಾಧಿಕಾರಿಗಳಂತೆ ವಾಟಾಳ್ ನಡೆದುಕೊಳ್ಳುತ್ತಿದ್ದು, ಮರಾಠ ಸಮಾಜದ ಅಭಿವೃದ್ಧಿ ನಿಗಮಕ್ಕೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದರು.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ; ಚನ್ನಪಟ್ಟಣದಲ್ಲಿ ಪ್ರತಿಭಟನೆಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ; ಚನ್ನಪಟ್ಟಣದಲ್ಲಿ ಪ್ರತಿಭಟನೆ

"ಮರಾಠರ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್. ಶಂಕರಪ್ಪ ಅವರು ಮರಾಠ ಸಮಾಜವನ್ನು 2ಎ ಗೆ ಸೇರಿಸುವಂತೆ ಶಿಫಾರಸ್ಸು ಮಾಡಿದ್ದರು. ಆದರೆ, ಇದುವರೆಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ" ಎಂದು ಬೇಸರ ವ್ಯಕ್ತಪಡಿಸಿದರು.

ಬೆಳಗಾವಿಯಲ್ಲಿ ಕನ್ನಡಿಗರಾಗಿ ಪರಿವರ್ತನೆಯಾದವರ ಬಗ್ಗೆ ಸಮೀಕ್ಷೆ ಬೆಳಗಾವಿಯಲ್ಲಿ ಕನ್ನಡಿಗರಾಗಿ ಪರಿವರ್ತನೆಯಾದವರ ಬಗ್ಗೆ ಸಮೀಕ್ಷೆ

Recommended Video

DK Shivakumarನ ಅರೆಸ್ಟ್ ಮಾಡಿ ಎಲ್ಲಿಗೆ ಕರ್ಕೊಂಡು ಹೋದರು ಗೊತ್ತಾ?? | Oneindia Kannada

"ಮರಾಠ ಸಮಾಜ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಹಿಂದುಳಿದಿದ್ದು, ಈಗಾಗಲೇ ಹಲವು ಸಮಾಜದವರು ಎಸ್ಟಿ ಮೀಸಲಿಗೆ ಮತ್ತು 2ಎ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ ಅದಕ್ಕೆ ಅಧ್ಯಕ್ಷರನ್ನು ನೇಮಿಸಲಾಗಿದೆ. ಆದರಂತೆ ಮರಾಠ ಅಭಿವೃದ್ಧಿ ನಿಗಮಕ್ಕೂ ಆಗಬೇಕು" ಎಂದರು ಒತ್ತಾಯಿಸಿದರು.

English summary
Kshatriya Maratha reservation campaign committee demand the chief minister B. S. Yediyurappa that community should add to 2A from 3 B.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X