ಯಡಿಯೂರಪ್ಪ ಮುಂದೆ ಹೊಸ ಬೇಡಿಕೆ ಇಟ್ಟ ಮರಾಠ ಸಮುದಾಯ
ದಾವಣಗೆರೆ, ಜನವರಿ 20: ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ. ಆದರೆ, ಅದು ಕಾರ್ಯಗತಗೊಂಡಿಲ್ಲ. ಕೂಡಲೇ ಅದನ್ನು ಜಾರಿಗೊಳಿಸಬೇಕು. '3ಬಿ'ಯಲ್ಲಿರುವ ಸಮುದಾಯವನ್ನು '2ಎ'ಗೆ ಸೇರಿಸಬೇಕು ಎಂದು ಕ್ಷತ್ರೀಯ ಮರಾಠ ಮೀಸಲಾತಿ ಅಭಿಯಾನ ಸಂಘಟನೆ ಆಗ್ರಹಿಸಿದೆ.
ಬುಧವಾರ ದಾವಣಗೆರೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ ಯಶವಂತ ರಾವ್ ಜಾಧವ್ ಪತ್ರಿಕಾಗೋಷ್ಠಿ ನಡೆಸಿದರು. ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. "ಅಭಿವೃದ್ಧಿ ಪ್ರಾಧಿಕಾರಕ್ಕೆ ಪಟ್ಟಭದ್ರ ಹಿತಾಸಕ್ತಿಗಳು ಅಡ್ಡಗಾಲು ಹಾಕುತ್ತಿವೆ. ನಾವು ವಲಸಿಗರಲ್ಲ. ನಾವು ಕನ್ನಡಿಗರು. ನೂರಾರು ವರ್ಷಗಳಿಂದ ಇಲ್ಲಿನ ನೆಲ, ಜಲ, ಸಂಸ್ಕೃತಿಗೆ ಹೊಂದಿಕೊಂಡು ಬದುಕುತ್ತಿದ್ದೇವೆ" ಎಂದರು.
"ಈ ಹಿಂದೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಬಾಳಠಾಕ್ರೆ ಅವರು ನಮ್ಮ ರಾಜ್ಯದ ಮರಾಠಿಗರಿಗೆ ನಾವು ಉದ್ಯೋಗ, ಆಹಾರ ಕೊಟ್ಟರೆ ಸಾಕು. ಕರ್ನಾಟಕದಲ್ಲಿ ಇರುವವರು ಇಲ್ಲಿಗೆ ಬರುವುದು ಬೇಡ. ನೀವು ಎಲ್ಲಿದ್ದೀರೋ ಅಲ್ಲಿಯೇ ಇದ್ದುಬಿಡಿ ಎಂದಿದ್ದರು. ಎಂದಿಗೂ ಮಹಾರಾಷ್ಟ್ರಕ್ಕೆ ಹೋಗಿ ನೆಲೆಸಬೇಕೆಂಬ ಯೋಚನೆಯೂ ನಮಗಿಲ್ಲ. ನಾವು ಹುಟ್ಟಿದ್ದು ಮತ್ತು ಸಾಯುವುದು ಕನ್ನಡದ ನೆಲದಲ್ಲಿಯೇ" ಎಂದು ಸ್ಪಷ್ಟಪಡಿಸಿದರು.

"ಮರಾಠಿಗರಿಗೆ ಯಾರೂ ಕನ್ನಡದ ಪಾಠ ಮಾಡುವ ಅಗತ್ಯವೇನಿಲ್ಲ. ನಾವು ಕನ್ನಡಿಗರು. ಕನ್ನಡಪರ ಹೋರಾಟಗಾರನೆಂದು ಹೇಳುವ ವಾಟಾಳ್ ನಾಗರಾಜ್ ಅವರಿಗೆ ಅರಳು ಮರಳು ಆದಂತೆ ಕಾಣುತ್ತದೆ. ಸರ್ವಾಧಿಕಾರಿಗಳಂತೆ ವಾಟಾಳ್ ನಡೆದುಕೊಳ್ಳುತ್ತಿದ್ದು, ಮರಾಠ ಸಮಾಜದ ಅಭಿವೃದ್ಧಿ ನಿಗಮಕ್ಕೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದರು.
"ಮರಾಠರ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎನ್. ಶಂಕರಪ್ಪ ಅವರು ಮರಾಠ ಸಮಾಜವನ್ನು 2ಎ ಗೆ ಸೇರಿಸುವಂತೆ ಶಿಫಾರಸ್ಸು ಮಾಡಿದ್ದರು. ಆದರೆ, ಇದುವರೆಗೂ ಸರ್ಕಾರ ತೀರ್ಮಾನ ತೆಗೆದುಕೊಂಡಿಲ್ಲ" ಎಂದು ಬೇಸರ ವ್ಯಕ್ತಪಡಿಸಿದರು.
"ಮರಾಠ ಸಮಾಜ ಆರ್ಥಿಕ, ಶೈಕ್ಷಣಿಕ ಮತ್ತು ಔದ್ಯೋಗಿಕವಾಗಿ ಹಿಂದುಳಿದಿದ್ದು, ಈಗಾಗಲೇ ಹಲವು ಸಮಾಜದವರು ಎಸ್ಟಿ ಮೀಸಲಿಗೆ ಮತ್ತು 2ಎ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ ಕೈಗೊಂಡಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚಿಸಿ ಅದಕ್ಕೆ ಅಧ್ಯಕ್ಷರನ್ನು ನೇಮಿಸಲಾಗಿದೆ. ಆದರಂತೆ ಮರಾಠ ಅಭಿವೃದ್ಧಿ ನಿಗಮಕ್ಕೂ ಆಗಬೇಕು" ಎಂದರು ಒತ್ತಾಯಿಸಿದರು.
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು












Click it and Unblock the Notifications