ಶಿಷ್ಯವೇತನ ಭರವಸೆ: ಲಿಖಿತ ರೂಪ ದಾಖಲೆಗೆ ವೈದ್ಯಕೀಯ ವಿದ್ಯಾರ್ಥಿಗಳ ಪಟ್ಟು
ದಾವಣಗೆರೆ, ಜುಲೈ 16: ಶಿಷ್ಯ ವೇತನಕ್ಕೆ ಸಂಬಂಧಿಸಿದಂತೆ ಜೂನ್ 2020 ರವರೆಗಿನ ಬಾಕಿಯಿರುವ ವೇತನವನ್ನು ಸರ್ಕಾರ ಭರಿಸಲಿದೆ, ಆದರೆ ಈ ಬಗ್ಗೆ ಮೌಖಿಕ ಆದೇಶದ ಬದಲು ಲಿಖಿತವಾಗಿ ನೀಡಬೇಕು ಎಂದು ಜೆಜೆಎಂ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ಹಾಗೂ ಗೃಹವೈದ್ಯ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.
Recommended Video
ದಾವಣಗೆರೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸ್ನಾತಕೋತ್ತರ ವಿದ್ಯಾರ್ಥಿ ಡಾ.ಹರೀಶ್, ಜೆಜೆಎಂಎಂಸಿ ವೈದ್ಯ ವಿದ್ಯಾಲಯದ ಸರ್ಕಾರಿ ಕೋಟಾದಡಿ ನಾವು ಶಿಷ್ಯ ವೇತನ ಪಡೆದುಕೊಳ್ಳುತ್ತಿದ್ದೇವೆ. ಆದರೆ ಕಳೆದ 16 ತಿಂಗಳಿನಿಂದ ಸ್ಥಗಿತಗೊಂಡಿತ್ತು, ಶಿಷ್ಯ ವೇತನಕ್ಕಾಗಿ ಕಳೆದ 17 ದಿನಗಳಿಂದಲೂ ನಿರಂತರವಾಗಿ ಜಯದೇವ ವೃತ್ತದಲ್ಲಿ ಧರಣಿ ನಡೆಸಿದ್ದೇವೆ ಎಂದರು.

ಸರ್ಕಾರ ಹಾಗೂ ಆಡಳಿತ ಮಂಡಳಿಯ ಆಂತರಿಕ ನಡೆಯಿಂದ ಬೇಸತ್ತಿದ್ದೇವೆ. ನಮ್ಮ ಹೋರಾಟದ ಫಲವಾಗಿ ಸರ್ಕಾರ ಜೂನ್ 2020 ರವರೆಗಿನ ಶಿಷ್ಯವೇತನ ನೀಡಲು ಮುಂದಾಗಿರುವುದು ಸ್ವಾಗತಾರ್ಹ. ಆದರೆ ಇದು ಕೇವಲ ಆಶ್ವಾಸನೆಯಾಗಿದೆ ನಮಗೆ ಲಿಖಿತ ರೂಪದಲ್ಲಿ ನೀಡಬೇಕು ಹಾಗೂ ಜುಲೈ 2020 ರಿಂದ ನಮ್ಮ ಶಿಷ್ಯ ವೇತನವನ್ನು ಆಡಳಿತ ಮಂಡಳಿಯೇ ನೀಡಲಿದೆ ಎನ್ನಲಾಗಿದೆ. ಈ ಬಗ್ಗೆಯೂ ನಮಗೆ ಲಿಖಿತ ರೂಪದ ದಾಖಲೆ ನೀಡಬೇಕೆಂದು ಒತ್ತಾಯಿಸಿದರು.

ಮೂರು ದಿನಗಳೊಳಗಾಗಿ ನಮ್ಮ ಎರಡೂ ಬೇಡಿಕೆಗಳನ್ನು ಈಡೇರಿಸದಿದ್ದರೆ ಜು.20 ರಿಂದ ಮತ್ತೆ ಧರಣಿ ನಡೆಸಲಾಗುವುದು. ಜುಲೈ 2020 ರಿಂದ ಸರ್ಕಾರಿ ಕೋಟಾದ ಸ್ನಾತಕೋತ್ತರ ಮತ್ತು ಗೃಹವೈದ್ಯ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ಶಿಷ್ಯ ವೇತನವನ್ನು ಯಾರು ಭರಿಸಬೇಕು ಎಂಬುದರ ಬಗ್ಗೆ ಸರ್ಕಾರದಿಂದ ಲಿಖಿತ ರೂಪದಲ್ಲಿ ದಾಖಲೆ ನೀಡಬೇಕು ಮತ್ತು ಜುಲೈ ನಂತರದ ಶಿಷ್ಯ ವೇತನವನ್ನು ಆಡಳಿತ ಮಂಡಳಿ ಸರ್ಕಾರಕ್ಕೆ ನೀಡಬೇಕು, ನಮಗೆ ಸರ್ಕಾರ ಆ ವೇತನ ಭರಿಸಬೇಕು ಎಂದು ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಡಾ.ಹಿತಾ,ಡಾ.ಸುಧಾಕರ್, ಡಾ.ನಿಧಿ ಇದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications